ಮದರಸಾಗಳನ್ನು ಮುಚ್ಚಬೇಕೆನ್ನುವ ಅಸ್ಸಾಂ ಸಿಎಂ ಹೇಳಿಕೆ ಖಂಡಿಸಿದ ಗಾಲಿ ರೆಡ್ಡಿ

ಹಗಲಿನಲ್ಲಿ ನಿದ್ದೆ ಮಾಡಿ ರಾತ್ರಿ ಮೀಟಿಂಗ್ ಮಾಡುವ ಚಾಳಿ ನನ್ನದಲ್ಲ

Team Udayavani, Mar 20, 2023, 6:46 PM IST

1-sada-das-d

ಗಂಗಾವತಿ: ಕರ್ನಾಟಕದಲ್ಲಿರುವ ಮದರಸಾಗಳನ್ನು ಮುಸ್ಲಿಮರು ಮುಚ್ಚುವಂತೆ ಹೇಳಿಕೆ ನೀಡಿದ ಅಸ್ಸಾಂ ಮುಖ್ಯಮಂತ್ರಿಗಳ ವರ್ತನೆ ಖಂಡನೀಯವಾಗಿದೆ. ರಾಷ್ಟ್ರಕವಿ ಕುವೆಂಪು ಅವರೇ ನಾಡಗೀತೆ ಜಯ ಭಾರತ ಜನನಿಯ ತನುಜಾತೆಯಲ್ಲಿ ಹೇಳಿರುವಂತೆ ಕರ್ನಾಟಕ ಹಿಂದೂ, ಕ್ರೈಸ್ತ,ಇಸ್ಲಾಂ ಸಕಲ ಧರ್ಮಗಳ ಶಾಂತಿಯ ತೋಟವಾಗಿದೆ. ಸಹೋದರರಂತಿರುವ ಹಿಂದೂ-ಮುಸ್ಲಿಂ ಬಾಂಧವರ ಮಧ್ಯೆ ಜಗಳ ಹಚ್ಚು ಕಾರ್ಯ ಸಲ್ಲದು ಎಂದು ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸಂಸ್ಥಾಪಕ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿದರು.

ಅವರು ನಗರ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಕೆಆರ್‌ಪಿ ಪಕ್ಷ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿ, ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದ ಅಸ್ಸಾಂ ಮುಖ್ಯಮಂತ್ರಿ ಕರ್ನಾಟಕದಲ್ಲಿರುವ ಮುಸ್ಲಿಂ ಧರ್ಮದ ಎಲ್ಲಾ ಮದರಸಾ ಗಳನ್ನು ಮುಚ್ಚಿಸಬೇಕೇಂದು ಹೇಳಿಕೆ ನೀಡಿರುವುದು ಧರ್ಮ ಧರ್ಮಗಳ ಮಧ್ಯೆ ಜಗಳ ಹಚ್ಚುವ ಕೆಲಸವಾಗಿದೆ. ನಾಡಗೀತೆಯಲ್ಲಿ ಕುವೆಂಪು ರವರು ಹೇಳಿದಂತೆ ಕನ್ನಡ ನಾಡು ಸರ್ವ ಧರ್ಮದವರನ್ನು ಹೊಂದಿರುವುದು ಹೆಮ್ಮೆಯ ಸಂಗತಿ. ಹಿಂದೂ-ಮುಸ್ಲಿಂ ಬಾಂಧವರ ನಡುವೆ ಯಾರಾದರೂ ತಾರತಮ್ಯವನ್ನು ಉಂಟುಮಾಡುವ ಪ್ರಯತ್ನ ಮಾಡಿದರೆ ಅಂತಹ ವ್ಯಕ್ತಿಗಳಿಗೆ ಜನರು ಸರಿಯಾದ ಬುದ್ಧಿ ಕಲಿಸಲಿದ್ದಾರೆ. ಹಿಂದೂ-ಮುಸ್ಲಿಂ ಸಹೋದರಾಗಿದ್ದಾರೆ. ಭಾರತ ಮಾತೆ ನನ್ನ ತಾಯಿ ಎನ್ನುವ ಭಾವನೆ ಅಧಿಕಾರ ನಡೆಸುವವರಿಗಿರಬೇಕು ಎಂದರು.

ಗಂಗಾವತಿಯಲ್ಲಿ ಹಗಲು ಸಮಯದಲ್ಲಿ ನಿದ್ದೆ ಮಾಡಿ ರಾತ್ರಿ ಸಮಯದಲ್ಲಿ ಕೆಲಸ ಮಾಡುವ ವ್ಯಕ್ತಿ ನಾನಲ್ಲ. ಮುಂಜಾನೆ 5 ರಿಂದ ರಾತ್ರಿ 10 ಗಂಟೆಯವರೆಗೆ ನಿಮ್ಮ ಸೇವೆಗೆ ಸಿಗುವ ಸಾಮಾನ್ಯ ಶಾಸಕನಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದರು.

ನಗರದ ಪ್ರಮುಖ ಮುಖ್ಯ ರಸ್ತೆಗಳೊಂದಿಗೆ ಭಾರಿ ಗಾತ್ರದ ವಾಹನಗಳು ತಿರುಗಾಡಲು ಬೈಪಾಸ್ ರಸ್ತೆ ನಿರ್ಮಿಸುವುದಾಗಿ, ಹಾಗೂ ನಗರದಲ್ಲಿ ಉತ್ತಮ ಗುಣಮಟ್ಟದ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣ, ಐತಿಹಾಸಿಕ ಆನೆಗುಂದಿಯ ಅಂಜನಾದ್ರಿಗೆ ಐದು ವರ್ಷದ ಅವಧಿಯಲ್ಲಿ ಒಟ್ಟಿಗೆ 5000 ಕೋಟಿ ರೂಗಳ ಮೀಸಲಿಟ್ಟು ಅಭಿವೃದ್ಧಿ ಮಾಡುವುದು ಹಾಗೂ ರಾಷ್ಟ್ರದಲ್ಲಿಯೇ ಅತಿ ಎತ್ತರದ ಹನುಮನ ಮೂರ್ತಿ ನಿರ್ಮಾಣ ಮಾಡುವುದಾಗಿ, ಜೊತೆಗೆ ನಗರದ ಬೀದಿ ಬದಿ ವ್ಯಾಪಾರಗಳಿಗೆ ಅನುಕೂಲ ವಾಗುವಂತೆ ಸುಂದರವಾದ ಕಾಂಪ್ಲೆಕ್ಸ್ ನಿರ್ಮಿಸಲಾಗುತ್ತದೆ. ಮುಂದಿನ ಚುನಾವಣೆಯಲ್ಲಿ ಗೆದ್ದ ನಂತರ ಬಳ್ಳಾರಿ ಗೆ ಹೋಗುತ್ತೇನೆ ಅನ್ನುವ ವ್ಯಕ್ತಿಗಳಿಗೆ ನಾನು ಕೇಳುವ ಪ್ರಶ್ನೆ ಎನೆಂದರೇ ಬಳ್ಳಾರಿ ಎನು ಇಟಲಿಯಲ್ಲಿ ಇಲ್ಲ. ಕೇವಲ 1 ಗಂಟೆ ಪ್ರಯಾಣ ದ 60 ಕಿಮಿ ದೂರದಲ್ಲಿದೆ. ನಾನು ಗಂಗಾವತಿ ಗೆ ರಾಜಕೀಯ ಮಾಡಲು ಬಂದಿಲ್ಲ ಅಭಿವೃದ್ಧಿ ಗೆ ನಾನು ರಾಜಕೀಯಕ್ಕೆ ಬಂದಿದ್ದು, ಯಾರ ಮಾತಿಗೂ ಕಿವಿಗೊಡಬೇಡಿ. ನಾನು ರಾಜಕಾರಣ ದಲ್ಲಿ ಇರುವವರೆಗೂ ಗಂಗಾವತಿಯೇ ನನ್ನ ಕರ್ಮ ಭೂಮಿ ಎಂದರು.

ಈ ಸಂದರ್ಭದಲ್ಲಿ ಕೆಆರ್‌ಪಿ ಪಕ್ಷದ ಜಿಲ್ಲಾಧ್ಯಕ್ಷ ಎ.ಮನೋಹರಗೌಡ, ಒಬಿಸಿ ಅಧ್ಯಕ್ಷ ಅಮರಜ್ಯೋತಿ ನರಸಪ್ಪ, ಈ.ರಾಮಕೃಷ್ಣ, ಆಗೋಲಿ ದುರುಗಪ್ಪ ಸೇರಿ ಹಲವು ನಾಯಕರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.