ಚೀನ ಮೇಲೆ ಗಾಲ್ವಾನ್‌ಗೂ ಸಿಟ್ಟು !

ಪ್ರವಾಹ; ಪಿಎಲ್‌ಎ ಶಿಬಿರ ಕೊಚ್ಚಿಹೋಗುವ ಭೀತಿ

Team Udayavani, Jul 6, 2020, 6:10 AM IST

ಚೀನ ಮೇಲೆ ಗಾಲ್ವಾನ್‌ಗೂ ಸಿಟ್ಟು !

ಹೊಸದಿಲ್ಲಿ: ಗಾಲ್ವಾನ್‌ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ನದಿಯ ತಟ ಮತ್ತು ಪಾತ್ರದಲ್ಲಿ ಭಾರೀ ಸಂಖ್ಯೆಯಲ್ಲಿ ಶಿಬಿರಗಳನ್ನು ನಿರ್ಮಿಸಿದ್ದ ಚೀನದ ಸೇನೆ (ಪಿಎಲ್‌ಎ) ಈಗ ಅವುಗಳನ್ನು ಸ್ಥಳಾಂತರಿಸಬೇಕಾದ ಅನಿವಾರ್ಯತೆಗೆ ಸಿಲುಕಿದೆ.

ಭಾರತ-ಚೀನ ಸೈನಿಕರ ಸಂಘರ್ಷ ನಡೆದ ಸ್ಥಳಕ್ಕಿಂತ ಕೇವಲ ಐದು ಕಿ.ಮೀ. ದೂರದಲ್ಲಿ, ಗಾಲ್ವಾನ್‌ ನದಿಯ ಪಾತ್ರ ಮತ್ತು ದಡದಲ್ಲಿ ಚೀನದ ಸೇನೆ ಭಾರೀ ಸಂಖ್ಯೆಯಲ್ಲಿ ಸೇನಾಪಡೆಗಳನ್ನು ಮೇ ತಿಂಗಳಿನಿಂದಲೇ ಜಮಾಯಿಸಿತ್ತು. ಸೇನಾ ಶಿಬಿರಗಳು ಮಾತ್ರವಲ್ಲದೆ ಸೇತುವೆ ಯಂತಹ ರಚನೆಗಳನ್ನೂ ನಿರ್ಮಿಸಿದ್ದಲ್ಲದೆ ನದಿಯ ಹರಿವಿಗೆ ತಡೆ ಉಂಟು ಮಾಡಿತ್ತು. ಆದರೆ ಈಗ ಬೇಸಗೆ ಆರಂಭ ವಾಗಿದ್ದು, ಪರ್ವತಗಳ ಹಿಮ ಕರಗುತ್ತಿದೆ. ಶೀತಲ ನೀರಿನ ಹರಿವು ಕ್ಷಿಪ್ರಗತಿಯಲ್ಲಿ ಹೆಚ್ಚುತ್ತಿದೆ. ಹೀಗಾಗಿ ಅದು ಪಡೆಗಳನ್ನು ಸ್ಥಳಾಂತರಿಸಲೇಬೇಕಾದ ಅನಿ ವಾರ್ಯತೆಗೆ ಸಿಲುಕಿದೆ ಎಂಬುದಾಗಿ ಭಾರತೀಯ ಸೇನಾ ಪಡೆಯ ಮಿಲಿಟರಿ ಕಮಾಂಡರ್‌ ಒಬ್ಬರು ಹೇಳಿ ರುವು ದಾಗಿ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಸೊಕ್ಕಿಗೆ ತಕ್ಕ ಪಾಠ
ಗಾಲ್ವಾನ್‌ ಕಣಿವೆಯ ಇಕ್ಕಟ್ಟಿನ ಪ್ರದೇಶದಲ್ಲೂ ಚೀನದ ಪಡೆ ಪೋಸ್ಟ್‌ ನಿರ್ಮಿಸಿ ಮದ್ದು ಗುಂಡು, ಯುದ್ಧಸಾಮಗ್ರಿಗಳನ್ನು ಸಂಗ್ರಹಿಸಿದೆ. ಹಿಮ ಕರಗುವಿಕೆ ಯಿಂದ ನದಿಯ ತೀರ ದಲ್ಲಿ ಚೀನ ಬೀಡುಬಿಟ್ಟಿರುವ ಪ್ರದೇಶಗಳು ಯಾವುದೇ ಸಂದರ್ಭ ದಲ್ಲೂ ಅಪಾಯ ಎದುರಿಸಬಹುದು ಎಂದು ಈ ಕಮಾಂಡರ್‌ ಹೇಳಿರುವುದಾಗಿ ವರದಿಯಾಗಿದೆ.

ಚೀನ ಇಲ್ಲಿ ನಿಲ್ಲಲಾಗದು
ಚೀನದ ಪಡೆಗಳು ಪ್ರಸ್ತುತ ಡೇರೆ ಹೂಡಿರುವ ಗಾಲ್ವಾನ್‌, ಗೊಗ್ರಾ, ಹಾಟ್‌ಸ್ಪ್ರಿಂಗ್ಸ್‌, ಪ್ಯಾಂಗಾಂಗ್‌ ಸರೋ ವರಗಳ ಜಾಗವನ್ನು ಅದು ಶಾಶ್ವತ ವಾಗಿ ಹಿಡಿದಿಟ್ಟು ಕೊಳ್ಳುವುದು ಅಸಾಧ್ಯ ಎಂದು ಅವರು ಹೇಳಿದ್ದಾರೆ.

ಆದರೂ ಚೀನದ ಮದ ಇಳಿದಿಲ್ಲ. ಗಾಲ್ವಾನ್‌ ಕಣಿವೆಯಲ್ಲಿ ಫೈಬರ್‌ ಆಪ್ಟಿಕ್‌ ಕೇಬಲ್‌ಗ‌ಳನ್ನು ಹಾಕಲು ಮುಂದಾಗಿದೆ. ಪ್ಯಾಂಗಾಂಗ್‌ನ ಫಿಂಗರ್‌ ಪ್ರದೇಶದಲ್ಲಿ ಸುರಂಗ ನಿರ್ಮಿಸುವ ಸಂಚು ರೂಪಿಸಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಮೋದಿ ಭೇಟಿ, ಆತ್ಮವಿಶ್ವಾಸ ಇಮ್ಮಡಿ
ಎಲ್‌ಎಸಿಯ ಮುಂಚೂಣಿಯ ಸೇನಾನೆಲೆ ನಿಮ್ಮುಗೆ ಪ್ರಧಾನಿ ಭೇಟಿ ನೀಡಿದ್ದರಿಂದ ಯೋಧರ ಧೈರ್ಯ, ಆತ್ಮವಿಶ್ವಾಸ ಹೆಚ್ಚಾಗಿದೆ. ಎಂಥ ಸಮಯದಲ್ಲೂ ದೇಶಕ್ಕಾಗಿ ದಿಟ್ಟ ಹೋರಾಟ ನಡೆಸಲು ಯೋಧರು ಸಿದ್ಧರಿದ್ದಾರೆ ಎಂದು ಐಟಿಬಿಪಿ ಮುಖ್ಯಸ್ಥ ಜ| ಎಸ್‌.ಎಸ್‌. ದೇಸ್ವಾಲ್‌ ರವಿವಾರ ಹೇಳಿದ್ದಾರೆ.

ಮೋದಿ ಅವರ ಲಡಾಖ್‌ ಭೇಟಿ ಮತ್ತು ಭಾಷಣದಿಂದ ಭೂಸೇನೆ, ವಾಯುಪಡೆ, ಐಟಿಬಿಪಿ ಯೋಧರಲ್ಲಿ ಆತ್ಮವಿಶ್ವಾಸ ಇಮ್ಮಡಿಸಿದೆ. ಸಶಸ್ತ್ರ ಪಡೆಗಳ ಸಿಬಂದಿ ಈ ಹಿಂದೆಯೂ ತಮ್ಮ ಪ್ರಾಣ ಸಮರ್ಪಿಸಿ ದೇಶವನ್ನು ರಕ್ಷಿಸಿದ್ದರು. ಈಗಿನವರೂ ಅದೇ ಹಾದಿಯಲ್ಲಿ ಸಮರ್ಥ ಹೋರಾಟ ನಡೆಸುತ್ತಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಪೂರ್ವ ಲಡಾಖ್‌ನ ಎಲ್‌ಎಸಿ ವಲಯದಲ್ಲಿ ಐಟಿಬಿಪಿಯ 30 ಕಂಪೆನಿಗಳ 3 ಸಾವಿರ ವೀರಯೋಧರು ಚೀನದ ಸವಾಲಿಗೆ ಎದೆಗೊಟ್ಟಿದ್ದಾರೆ. ಪ್ರಧಾನಿ ಭಾಷಣ ಕಾರ್ಯಕ್ರಮದಲ್ಲಿ ಐಟಿಬಿಪಿ ಯೋಧರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ರಾಷ್ಟ್ರಪತಿ ಭೇಟಿ ಮಾಡಿದ ಪ್ರಧಾನಿ
ಪ್ರಧಾನಿ ಮೋದಿ ರವಿವಾರ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಭೇಟಿಯಾಗಿ ಲಡಾಖ್‌ ಗಡಿ ಬಿಕ್ಕಟ್ಟು ಸಹಿತ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಇಬ್ಬರೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದ್ದಾರೆ ಎಂದು ರಾಷ್ಟ್ರಪತಿ ಭವನದ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.