ಈ ವರ್ಷವೂ ಗ್ರಾಮ ಪಂಚಾಯತ್‌ಗಳಿಗೆ ಗಾಂಧಿ ಪುರಸ್ಕಾರ ಕನಸು?

ಕೊರೊನಾ ಕಾರಣದಿಂದ 2 ವರ್ಷಗಳಿಂದ ಪ್ರಶಸ್ತಿ ಬಾಕಿ

Team Udayavani, Sep 12, 2022, 7:33 AM IST

ಈ ವರ್ಷವೂ ಗ್ರಾಮ ಪಂಚಾಯತ್‌ಗಳಿಗೆ ಗಾಂಧಿ ಪುರಸ್ಕಾರ ಕನಸು?

ಬೆಂಗಳೂರು: ಎರಡು ವರ್ಷಗಳಿಂದ ಗ್ರಾಮ ಪಂಚಾಯತ್‌ಗಳಿಗೆ “ಗಾಂಧಿ ಗ್ರಾಮ ಪುರಸ್ಕಾರ’ ಸಿಕ್ಕಿಲ್ಲ. ಈ ವರ್ಷವೂ ಸಿಗುವುದು ಅನುಮಾನ!

ಗ್ರಾ.ಪಂ.ಗಳ ಆರ್ಥಿಕ ಮತ್ತು ಆಡಳಿತಾತ್ಮಕ ಸಾಧನೆಯನ್ನು ಆಧರಿಸಿ ಅವುಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಪ್ರತೀ ತಾಲೂಕಿನ ಒಂದು ಗ್ರಾ.ಪಂ.ಗೆ ಮಹಾತ್ಮಾ ಗಾಂಧೀಜಿ ಜಯಂತಿ ಯಾದ ಅ. 2ರಂದು ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗುತ್ತದೆ. ಆದರೆ 2019-20 ಮತ್ತು 2020-21 ಸಾಲಿನಲ್ಲಿ ಗ್ರಾ.ಪಂ.ಗಳನ್ನು ಆಯ್ಕೆ ಮಾಡಿದ್ದರೂ ಕೊರೊನಾ ಕಾರಣದಿಂದ ಪುರಸ್ಕಾರ ನೀಡಲಾಗಿರಲಿಲ್ಲ. ಈ ವರ್ಷ ಗ್ರಾ.ಪಂ.ಗಳ ಆಯ್ಕೆ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಗಾಂಧಿ ಜಯಂತಿಗೆ 21 ದಿನಗಳಷ್ಟೇ ಬಾಕಿ ಇದೆ.

ಆರ್ಥಿಕ ಮತ್ತು ಆಡಳಿತ ಮಾನದಂಡಗಳ ಆಧಾರದ ಮೇಲೆ ಗ್ರಾ.ಪಂ.ಗಳ ಶೇ. 90ರಿಂದ 95ರಷ್ಟು ಸಾಧನೆಯನ್ನು ಮೌಲ್ಯಮಾಪನ ಮಾಡಿ ಸೂಕ್ತ ಪ್ರೋತ್ಸಾಹ ನೀಡಲು 2013-14ರಲ್ಲಿ ಸರಕಾರ ಗಾಂಧಿ ಗ್ರಾಮ ಪುರಸ್ಕಾರವನ್ನು ಜಾರಿಗೆ ತಂದಿತ್ತು. ಪುರಸ್ಕಾರಕ್ಕೆ ಆಯ್ಕೆಯಾಗುವ ಗ್ರಾ.ಪಂ.ಗಳಿಗೆ 2 ಲಕ್ಷ ರೂ. ವಿಶೇಷ ಅನುದಾನ ನೀಡಲಾಗುತ್ತದೆ. ಯೋಜನೆ ಜಾರಿಗೆ ಬಂದ ಬಳಿಕ ನಿಯಮಿತವಾಗಿ ಪ್ರತೀ ವರ್ಷ ಪುರಸ್ಕಾರ ನೀಡಲಾಗಿತ್ತು. 2019-20ನೇ ಸಾಲಿನಿಂದ ನೀಡಲಾಗಿಲ್ಲ.

ಪಂಚಾಯತ್‌ಗಳಿಗೆ ಬೇಸರ
ಅಧಿಕಾರ ವಿಕೇಂದ್ರೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಗ್ರಾ.ಪಂ.ಗಳು 24ಕ್ಕೂ ಹೆಚ್ಚು ಇಲಾಖೆಗಳ 29 ಅಭಿವೃದ್ಧಿ ವಿಷಯಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತವೆ. ಜತೆಗೆ ಮೂಲಸೌಕರ್ಯಗಳಾದ ಕುಡಿಯುವ ನೀರು, ನೈರ್ಮಲ್ಯ, ಬೀದಿ ದೀಪಗಳ ನಿರ್ವಹಣೆ, ಪೌರ ಸೇವೆಗಳ ಜವಾಬ್ದಾರಿ ಅವುಗಳ ಮೇಲಿದೆ. ಪಂಚಾಯತ್‌ಗಳಿಗೆ ಹೆಚ್ಚು ಪ್ರೋತ್ಸಾಹ, ನೆರವು ಸಿಕ್ಕಿದರೆ ಇನ್ನಷ್ಟು ಚೆನ್ನಾಗಿ ಕೆಲಸ ಮಾಡಲು ಪ್ರೇರಣೆ ಸಿಗುತ್ತದೆ. ಇದೇ ಉದ್ದೇಶಕ್ಕಾಗಿ ಗಾಂಧಿ ಗ್ರಾಮ ಪುರಸ್ಕಾರ ಯೋಜನೆಯನ್ನು ಜಾರಿಗೆ ತರಲಾಗಿದೆ. ಪುರಸ್ಕಾರಕ್ಕೆ ಆಯ್ಕೆಯಾದ ಪಂಚಾಯತ್‌ಗಳಿಂದ ಬೇರೆ ಪಂಚಾಯತ್‌ಗಳಿಗೆ ಪ್ರೇರಣೆ ಸಿಗಲಿದೆ. ಆದರೆ ಎರಡು ವರ್ಷಗಳ ಪುರಸ್ಕಾರ ಸಿಕ್ಕಿಲ್ಲ. ಈ ವರ್ಷ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪಂಚಾಯತ್‌ಗಳು ಬೇಸರ ವ್ಯಕ್ತಪಡಿಸಿವೆ.

ಮುಖ್ಯಮಂತ್ರಿಗೆ ಮನವಿ
ಸ್ಥಳೀಯ ಸರಕಾರಗಳಾದ ಗ್ರಾ.ಪಂ.ಗಳನ್ನು ಸದೃಢಗೊಳಿಸುವ ಹಾಗೂ ಉತ್ತಮ ಆಡಳಿತ ವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದ ಗಾಂಧಿ ಗ್ರಾಮ ಪುರಸ್ಕಾರ ವಿತರಣೆಯನ್ನು ಸರಕಾರ ಮುಂದುವರಿಸ ಬೇಕು. ಈ ಹಿಂದೆ ಆಯ್ಕೆ ಮಾಡಿರುವ ಗ್ರಾ.ಪಂ.ಗಳಿಗೆ ಪುರಸ್ಕಾರಗಳನ್ನು ನೀಡಬೇಕು ಮತ್ತು ಪುರಸ್ಕಾರದ ಮೊತ್ತವನ್ನು 10 ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾ.ಪಂ. ಸದಸ್ಯರ ಮಹಾ ಒಕ್ಕೂಟ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿದೆ.

ಎರಡು ವರ್ಷಗಳಿಂದ ಗಾಂಧಿ
ಗ್ರಾಮ ಪುರಸ್ಕಾರ ನೀಡಿಲ್ಲ. ಈ ವರ್ಷ ಇಲ್ಲಿಯ ವರೆಗೆ ಗ್ರಾ.ಪಂ.ಗಳ ಆಯ್ಕೆ ಪ್ರಕ್ರಿಯೆ ಆರಂಭಿಸಿಲ್ಲ. ಇದಕ್ಕೆ ಪಂಚಾಯತ್‌ಗಳಿಂದ ಬೇಸರ ವ್ಯಕ್ತವಾಗುತ್ತಿದೆ. ಆದ್ದರಿಂದ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಲಾಗಿದೆ.
-ಕಾಡಶೆಟ್ಟಿಹಳ್ಳಿ ಸತೀಶ್‌,
ಅಧ್ಯಕ್ಷ, ಕರ್ನಾಟಕ ರಾಜ್ಯ ಗ್ರಾ.ಪಂ. ಸದಸ್ಯರ
ಮಹಾ ಒಕ್ಕೂಟ

 

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.