ಗರುಡ ಗಮನ ವೃಷಭ ವಾಹನ ಚಿತ್ರಕ್ಕೆ ಭಟ್ಟರ ಪ್ರಶಂಸೆ
Team Udayavani, Nov 28, 2021, 3:52 PM IST
ಬೆಂಗಳೂರು: ಸ್ಯಾಂಡಲ್ವುಡ್ ಚಿತ್ರ “ಗರುಡ ಗಮನ ವೃಷಭ ವಾಹನ” ಚಿತ್ರ ಬಾಕ್ಸ್ ಆಫೀಸ್ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಛಾಪು ಮೂಡಿಸುತ್ತಿರುವ ಯುವ ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರ ವಿನೂತನ ಪ್ರಯತ್ನಕ್ಕೆ ಎಲ್ಲೆಡೆ ಪ್ರಶಂಸೆಗಳ ಸುರಿಮಳೆ ಹರಿದು ಬರುತ್ತಿದೆ.
ಇದೀಗ ಕನ್ನಡ ಚಿತ್ರರಂಗ ನಿರ್ದೇಶಕ ಯೋಗರಾಜ್ ಭಟ್ ‘ಗರುಡ ಗಮನ ವೃಷಭ ವಾಹನ’ ಚಿತ್ರ ವೀಕ್ಷಿಸಿ, ಮೆಚ್ಚಿಕೊಂಡಿದ್ದಾರೆ.
‘ಗರುಡ ಗಮನ ವೃಷಭ ವಾಹನ’ ಚಿತ್ರವನ್ನು ನೋಡಿದೆ. ಆನಂದಿಸಿದೆ.. ಒಳ್ಳೆಯ ಪ್ರಯೋಗಗಳು, ಒಳ್ಳೆಯ ಫಲಿತಾಂಶ ಕೊಡುವ ಕಾಲ ಕನ್ನಡಕ್ಕೆ ಬಂದಂತಿದೆ. ನಿರ್ದೇಶಕ, ಮಿತ್ರ ರಾಜ್ ಶೆಟ್ಟಿಗೆ ಅಭಿನಂದನೆ, ಶುಭವಾಗಲಿ ಎಂದು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ.