ಮಹಾರಾಷ್ಟ್ರ:ಬದ್ಲಾಪುರದಲ್ಲಿ ರಾಸಾನಿಕ ಅನಿಲ ಸೋರಿಕೆ, ಉಸಿರಾಟದ ತೊಂದರೆ; ಸ್ಥಳೀಯರಲ್ಲಿ ಆತಂಕ
ಪ್ರಾಥಮಿಕ ಚಿಕಿತ್ಸೆ ನಂತರ ಡಿಸ್ ಚಾರ್ಜ್ ಮಾಡಲಾಯಿತು ಎಂದು ವರದಿ ವಿವರಿಸಿದೆ.
Team Udayavani, Jun 4, 2021, 11:51 AM IST
ಮುಂಬಯಿ:ಮಹಾರಾಷ್ಟ್ರದ ಬದ್ಲಾಪುರದಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಗುರುವಾರ(ಜೂನ್ 03) ತಡರಾತ್ರಿ ಅನಿಲ ಸೋರಿಕೆಯಾಗಿದ್ದು, ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕಪ್ಪು ಶಿಲೀಂಧ್ರ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ: ಹುಬ್ಬಳ್ಳಿಯಲ್ಲಿ ಮೂವರ ಬಂಧನ
ಶಿರ್ಗಾಂವ್ ನ ಎಂಐಡಿಸಿಯ ನೊಬೆಲ್ ಇಂಟರ್ಮಿಡಿಯೇಟ್ಸ್ ಪ್ರೈವೇಟ್ ಲಿ. ಕಂಪನಿಯಲ್ಲಿ ಅನಿಲ ಸೋರಿಕೆಯಾದ ನಂತರ ಸುಮಾರು ಮೂರು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನೆಲೆಸಿದ್ದ ಜನರು ಉಸಿರಾಟ ಸಮಸ್ಯೆ, ಕಣ್ಣುಗಳಲ್ಲಿ ಉರಿ ಕಾಣಿಸಿಕೊಂಡಿರುವುದಾಗಿ ದೂರಿದ್ದಾರೆ.
ಈ ಘಟನೆ ಗುರುವಾರ ರಾತ್ರಿ 10.30ರ ಸುಮಾರಿಗೆ ಸಂಭವಿಸಿರುವುದಾಗಿ ಥಾಣೆ ಮುನ್ಸಿಪಲ್ ಕಾರ್ಪೋರೇಶನ್ ತಿಳಿಸಿದೆ. ಅಲ್ಲದೇ ಒಂದು ಗಂಟೆಯೊಳಗೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ವಿವರಿಸಿದೆ. ಅನಿಲ ಸೋರಿಕೆಯ ಪರಿಣಾಮ ಜನರು ಉಸಿರಾಟದ ತೊಂದರೆ ಅನುಭವಿಸುವಂತಾಗಿತ್ತು. 11.24ಕ್ಕೆ ಅಗ್ನಿಶಾಮಕ ದಳ ಅನಿಲ ಸೋರಿಕೆಯಾಗುವುದನ್ನು ನಿಲ್ಲಿಸಿತ್ತು. ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಮುನ್ಸಿಪಲ್ ಕಾರ್ಪೋರೇಶನ್ ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.
#WATCH | A gas leak from a factory in Maharashtra’s Badlapur was reported at around 10:22 pm on Thursday. People in the area were having trouble breathing. Fire brigade stopped the leak at 11:24 pm. The situation is under control. No one injured: Thane Municipal Corporation pic.twitter.com/djdZY77DAE
— ANI (@ANI) June 3, 2021
ಅತಿಯಾದ ಬಿಸಿಯಿಂದಾಗಿ ಅನಿಲ ಸೋರಿಕೆಯಾಗಲು ಕಾರಣವಾಗಿದೆ ಎಂದು ಕಾರ್ಪೋರೇಶನ್ ತಿಳಿಸಿದೆ. ಉಸಿರಾಟದ ತೊಂದರೆ ಅನುಭವಿಸಿದ ಕೆಲವು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ನಂತರ ಡಿಸ್ ಚಾರ್ಜ್ ಮಾಡಲಾಯಿತು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
MUST WATCH
ಹೊಸ ಸೇರ್ಪಡೆ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು