ಶಿರಾಡಿ ಘಾಟ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಚಾಲಕ ಗಂಭೀರ
Team Udayavani, Oct 7, 2021, 10:26 AM IST
ಸಕಲೇಶಪುರ :ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ತಾಲೂಕಿನ ಮಾರನಹಳ್ಳಿ ಸಮೀಪ ಗುರುವಾರ ಮುಂಜಾನೆ ನಡೆದಿದೆ.ಘಟನೆಯಲ್ಲಿ ಟ್ಯಾಂಕರ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುವ ಸಾಧ್ಯತೆಗಳಿದ್ದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಾರನಹಳ್ಳಿ ಸಮೀಪ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ, ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಇಂಜಿನ್ ಒಳಗೆ ಚಾಲಕ ಸಿಕ್ಕಿಹಾಕಿಕೊಂಡಿದ್ದು, ಚಾಲಕನನ್ನು ಕ್ರೇನ್ ಸಹಾಯದಿಂದ ಮೇಲಕ್ಕೆತ್ತಲು ಅಗ್ನಿಶಾಮಕ ದಳಡಾ ಸಿಬ್ಬಂದಿಗಳು , ಪೊಲೀಸರು ಮತ್ತು ಸ್ಥಳೀಯರು ಸುಮಾರು ಎರಡು ಗಂಟೆಗಳ ಕಾಲ ಹರಸಾಹಸ ಪಡುಬೇಕಾಯಿತು.
ಕ್ರೇನ್ ಸಹಾಯದಿಂದ ಟ್ಯಾಂಕರ್ ಮೇಲಕ್ಕೆತ್ತಲಾಗಿದ್ದು, ಅದ್ರಷ್ಟವಷಾತ್ ಅನಿಲ ಸೋರಿಕೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಚಾಲಕನನ್ನ ಹಾಸನ ಜಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ