ವಿಜೃಂಭಿಸಿದ ಗೌರಿಮಾರು ಕಟ್ಟೆ ಉತ್ಸವ


Team Udayavani, Dec 4, 2021, 4:19 PM IST

17gowrikatte

ಕಣ್ಣು ಕೋರೈಸುವ ದೀಪಗಳ‌ ಸಾಲು, ಎಲ್ಲಿ‌ ನೋಡಲಲ್ಲಿ ಕಿಕ್ಕಿರಿದು ನಿಂತ ಜನ, ಆಕರ್ಷಕವಾಗಿ ಅಲಂಕೃತಗೊಂಡ ದೇವಾಲಯ, ಓಂ ನಮಃ ಶಿವಾಯ ಎಂಬ ಭಕ್ತಿ ಪೂರ್ವಕ ಉದ್ಘೋಷ, ಭಕ್ತರಿಗೆಂದೇ ಭೂಮಿಗಿಳಿದು ಬಂದಂತೆ ಕಾಣುತ್ತಿದ್ದ ಶ್ರೀಮಂಜುನಾಥ ಸ್ವಾಮಿ. ಇದು ಕಾರ್ತಿಕ ಲಕ್ಷ ದೀಪೋತ್ಸವದ ಕೊನೆಯದಿನದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಕಂಗಳಿಸುತ್ತಿದ್ದ ರೀತಿ. ಪಾದಯಾತ್ರೆಯೊಂದಿಗೆ ಆರಂಭವಾಗಿದ್ದ ಲಕ್ಷದೀಪೋತ್ಸವದ ಉತ್ಸವಗಳು ಕಾರ್ತಿಕ ಮಾಸದ ಅಮಾವಾಸ್ಯೆಯಂದು ಜರುಗಿದ ಗೌರಿಮಾರು ಕಟ್ಟೆ ಉತ್ಸವದೊಂದಿಗೆ ಸಂಪನ್ನವಾಯಿತು.

ಎಂದಿನಂತೆ ಚಂಡೆ ವಾದನದ ಮೂಲಕ ದೇವಾಲಯದ ಪ್ರಾಂಗಣಕ್ಕೆ ದೇವರನ್ನು ಸ್ವಾಗತಿಸಲಾಯಿತು. ನಂತರ ಅಮ್ಮನವರ ಪ್ರಧಾನ ಅರ್ಚಕರು ದೇವಾಲಯದಲ್ಲಿರುವ ಬಲಿ ಪೀಠಗಳಿಗೆ, ಅಷ್ಟ ದಿಗ್ಪಾಲಕರಿಗೆ ಬಿಲ್ವಪತ್ರೆ, ಅಕ್ಷತೆಗಳ ಮೂಲಕ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸ್ವಾಮಿಗೆ ಪೂಜೆ ಮಾಡುವ ಪ್ರಧಾನ ಅರ್ಚಕರು ಹೂವು ಮತ್ತು ವಿವಿಧ ಆಭರಣಗಳಿಂದ ಸಿಂಗರಿಸಿದ ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ತಲೆಯ ಮೇಲೆ ಹೊತ್ತು ದೇವಾಲಯ ಪ್ರದಕ್ಷಿಣೆ ಮಾಡಿದರು.

ಪೂಜೆ, ಆರತಿಯ ಬಳಿಕ ದೇವರನ್ನು ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ಅಷ್ಟಾವಧಾನ ಸೇವೆ ಸಲ್ಲಿಸಲಾಯಿತು. ಚತುರ್ವೇದ ಪಾರಾಯಣ, ಪುರಾಣ, ಗೀತ, ಪಂಚಾಗ, ಸುಶಿರವಾದ್ಯಗಳಾದ ಕೊಳಲು, ಓಲಗ, ಚರ್ಮವಾದ್ಯಗಳಾದ ಚಂಡೆ, ಮದ್ದಳೆ, ಶಂಖ, ಜಾಗಟೆ, ಸಂಗೀತ ಗಾಯನದ ಮೂಲಕ ದೇವರಿಗೆ ಪೂಜೆ ಸಲ್ಲಿಸಲಾಯಿತು. ಹದಿನಾರು ಸುತ್ತಿನ ಬಳಿಕ ದೇವರನ್ನು ಹೊತ್ತು ದೇವಾಲಯದ ಮುಂಭಾಗದಲ್ಲಿ ಹೂವು, ದೀಪಗಳಿಂದ ಸಜ್ಜಾಗಿ ನಿಂತಿದ್ದ ಬೆಳ್ಳಿರಥಕ್ಕೆ ತರಲಾಯಿತು.

ರಥಾರೋಹಣನಾದ ಶ್ರೀ ಸ್ವಾಮಿಯನ್ನು ಆನೆ, ನಂದಿ, ತಮಟೆ, ಮಂಗಳವಾದ್ಯ, ಛತ್ರ ಚಾಮಾರಾದಿಗಳ ಸಹಿತ ದೇವಾಲಯ ಪ್ರದಕ್ಷಿಣೆ ಬಂದು ಶ್ರೀ ಕ್ಷೇತ್ರದ ಮುಖ್ಯ ದ್ವಾರದ ಬಳಿಯಿರುವ ಗೌರಿಮಾರು ಕಟ್ಟೆಗೆ ಕರೆತರಲಾಯಿತು. ಅಲ್ಲಿ ದೇವರನ್ನು ಪ್ರತಿಷ್ಠಾಪಿಸಿ, ಪೂಜಾಕೈಂಕರ್ಯಗಳನ್ನು ನೆರವೇರಿಸಲಾಯಿತು. ಋತ್ವಿಕರು, ಆಗಮಿಕರಿಂದ ವೇದಘೋಷ, ಮಂಗಳವಾದ್ಯ ವಾದನ, ಸಂಗೀತ ಗಾಯನ ಸೇರಿದಂತೆ ಮಹಾ ಮಂಗಳಾರತಿ ಬೆಳಗುವುದರೊಂದಿಗೆ ಗೌರಿಮಾರುಕಟ್ಟೆಯ ಪೂಜೆ ಸಾಂಗವಾಗಿ ನೆರವೇರಿಸಲಾಯಿತು.

ಪೂಜೆಯ ನಂತರ ದೇವಾಲಯಕ್ಕೆ ಹಿಂತಿರುಗಿದ ರಥದಿಂದ ಶ್ರೀ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಾಲಯಕ್ಕೆ ಕೊಂಡೊಯ್ಯಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ವಾದ್ಯ ವೃಂದ, ನಂದಿಕೋಲು ಕುಣಿತ, ವೀರಗಾಸೆ, ತಮಟೆ, ಕಂಸಾಳೆಗಳು ಜನರ ಮನಸೆಳೆದವು. ಕೆರೆಕಟ್ಟೆ ಉತ್ಸವದಿಂದ ಆರಂಭಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವಕ್ಕೆ ಗೌರಿ ಮಾರುಕಟ್ಟೆ ಉತ್ಸವ ಈ ವರ್ಷದ ಉತ್ಸವಗಳಿಗೆ ವಿರಾಮ ಹಾಕಿತು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.