“ಪತ್ರಕರ್ತನ ಹತ್ಯೆಯಲ್ಲಿ ಮೇ| ಜನರಲ್ ಕೈವಾಡ”: ಇಮ್ರಾನ್ ಖಾನ್ ಆರೋಪ
Team Udayavani, May 8, 2023, 8:08 AM IST
ಲಾಹೋರ್: “ಪಾಕಿಸ್ಥಾನದ ಹಿರಿಯ ಪತ್ರಕರ್ತ ಅರ್ಷದ್ ಶರೀಫ್ ಅವರ ಬರ್ಬರ ಹತ್ಯೆಯಲ್ಲಿ ಐಎಸ್ಐ ಅಧಿಕಾರಿ ಮೇಜರ್ ಜನರಲ್ ಫೈಸಲ್ ನಸೀರ್ ಅವರ ಕೈವಾಡವಿದೆ” ಎಂದು ಪಾಕಿಸ್ಥಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದಾರೆ. ಪಾಕಿಸ್ಥಾನ ಸೇನೆಯ ವಿಮರ್ಶಕರಾಗಿದ್ದ ಅರ್ಷದ್ ಶರೀಫ್, ತಮ್ಮ ಪ್ರಾಣಕ್ಕೆ ಬೆದರಿಕೆ ಹಿನ್ನೆಲೆಯಲ್ಲಿ ಕೀನ್ಯಾಗೆ ಹೋಗಿ ನೆಲೆಸಿದ್ದರು. ಕಳೆದ ಅಕ್ಟೋಬರ್ನಲ್ಲಿ ಕೀನ್ಯಾದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದರ ವಿರುದ್ಧ ಪಾಕಿಸ್ಥಾನದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪವಾಗಿತ್ತು. ರವಿವಾರ ಲಾಹೋರ್ನಲ್ಲಿ ನಡೆದ ಪಾಕಿಸ್ಥಾನ್ ತೆಹ್ರೀಕ್ ಇ ಇನ್ಸಾಫ್(ಪಿಟಿಐ) ರ್ಯಾಲಿಯಲ್ಲಿ ಮಾತನಾಡಿದ ಇಮ್ರಾನ್ ಖಾನ್, “ನನ್ನನ್ನು ಹತ್ಯೆ ಮಾಡಲು ಮೇಜರ್ ಜನರಲ್ ಫೈಸಲ್ ನಸೀರ್ ಎರಡು ಬಾರಿ ಪ್ರಯತ್ನಿ ಸಿದ್ದರು. ಅಲ್ಲದೇ ಪಿಟಿಐ ಸಂಸದ ಅಜಮ್ ಸ್ವಾತಿ ಅವರನ್ನು ಬೆತ್ತಲೆಗೊಳಿಸಿ, ತೀವ್ರವಾಗಿ ದೈಹಿಕ ಹಿಂಸೆ ನೀಡಿದ್ದರು’ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ