ಕಾಂಗ್ರೆಸ್ ಗೆ ಗುಡ್ ಬೈ; ಜಮ್ಮು-ಕಾಶ್ಮೀರದಲ್ಲಿ ಆಜಾದ್ ಹೊಸ ಪಕ್ಷ ಸ್ಥಾಪನೆ: ವರದಿ
ಕಾಂಗ್ರೆಸ್ ಹೈಕಮಾಂಡ್ ತನ್ನನ್ನು ಕಡೆಗಣಿಸಿದೆ ಎಂದು ಆಜಾದ್ ಆರೋಪಿಸಿದ್ದಾರೆ.
Team Udayavani, Aug 26, 2022, 4:17 PM IST
ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ಗುಲಾಂ ನಬಿ ಆಜಾದ್ ಜಮ್ಮು-ಕಾಶ್ಮೀರದಲ್ಲಿ ನೂತನ ಪಕ್ಷ ಸ್ಥಾಪಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ವಿಜಯಪುರದಲ್ಲಿ ಮುಂದುವರೆದ ಸರಣಿ ಭೂಕಂಪ : ಅಧ್ಯಯನಕ್ಕೆ ಬಂದ ತಜ್ಞರಿಗೂ ಕಂಪನದ ಅನುಭವ
“ನಾನು ಜಮ್ಮು-ಕಾಶ್ಮೀರಕ್ಕೆ ಹೋಗಿ, ನನ್ನದೇ ಆದ ಸ್ವಂತ ಪಕ್ಷವನ್ನು ಸ್ಥಾಪಿಸುತ್ತೇನೆ. ನಂತರ ಮುಂದಿನ ನಿರ್ಧಾರಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ” ಗುಲಾಂ ನಬಿ ಇಂಡಿಯಾ ಟುಡೇಗೆ ತಿಳಿಸಿರುವುದಾಗಿ ವರದಿಯಾಗಿದೆ.
2022ರ ಅಂತ್ಯದಲ್ಲಿ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯಲಿದೆ. ಜಮ್ಮು-ಕಾಶ್ಮೀರದ ಚುನಾವಣೆಗೂ ಮುನ್ನ ಗುಲಾಂ ನಬಿ ಅವರು ರಾಜ್ಯದಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸಲು ಉತ್ಸುಕರಾಗಿದ್ದಾರೆಂದು ಆಜಾದ್ ಅವರ ನಿಕಟವರ್ತಿ ಮೂಲಗಳು ತಿಳಿಸಿವೆ.
ಜಮ್ಮು-ಕಾಶ್ಮೀರದ ಕಾಂಗ್ರೆಸ್ ಚುನಾವಣಾ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಆಜಾದ್ ರಾಜೀನಾಮೆ ನೀಡಿದ ನಂತರ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ತನ್ನನ್ನು ಕಡೆಗಣಿಸಿದೆ ಎಂದು ಆಜಾದ್ ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಬಾಲಿಶ ನಡವಳಿಕೆ ಮತ್ತು ಅಪ್ರಬುದ್ಧತೆಯಿಂದ ಕಾಂಗ್ರೆಸ್ ಪಕ್ಷ ಅವನತಿಗೆ ಹೋಗುತ್ತಿದೆ. ಪಕ್ಷದಲ್ಲಿನ ಹಿರಿಯರನ್ನು, ಸಲಹೆಯನ್ನು ಕಡೆಗಣಿಸಲಾಗುತ್ತಿದೆ ಎಂದು ಆಜಾದ್ ಅವರು ಸೋನಿಯಾ ಗಾಂಧಿಗೆ ಬರೆದ 5 ಪುಟಗಳ ರಾಜೀನಾಮೆ ಪತ್ರದಲ್ಲಿ ಕಟುವಾಗಿ ಟೀಕಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ