ಸಿಬಿಐ ಅಧಿಕಾರ ನನಗೆ ಕೊಡಿ… ಮೋದಿ, ಅದಾನಿಯನ್ನು 2 ಗಂಟೆಯಲ್ಲಿ ಬಂಧಿಸುತ್ತೇನೆ: ಆಪ್ ಶಾಸಕ
Team Udayavani, Feb 27, 2023, 4:32 PM IST
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನದಿಂದ ಬಿಜೆಪಿ ವಿರುದ್ಧ ಆಪ್ ಕೆಂಡ ಕಾರುತ್ತಿದೆ. ಮನೀಶ್ ಸಿಸೋಡಿಯಾ ಬಂಧನದ ಹಿಂದೆ ಬಿಜೆಪಿ ಷಡ್ಯಂತ್ರವಿದೆ ಎಂದು ಆಪ್ ಮುಖಂಡರು ಕಿಡಿಕಾರಿದ್ದಾರೆ. ಸಿಸೋಡಿಯಾ ಬಂಧನ ವಿರೋಧಿಸಿ ಆಪ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು ಭಾರತ್ ಬಂದ್ಗೂ ಒತ್ತಾಯಿಸಿದೆ.
ಅದರಲ್ಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಆಪ್ ಶಾಸಕ ಸಂಜಯ್ ಸಿಂಗ್,ʻ ಸಿಬಿಐ, ಇಡಿಯ ಅಧಿಕಾರ ನನ್ನ ಕೈಗೆ ಕೊಡಿ. ಕೇವಲ 2 ಗಂಟೆಯಲ್ಲಿ ನಾನು ಮೋದಿ, ಅಮಿತ್ ಶಾ, ಅದಾನಿ ಅವರನ್ನು ಬಂಧಿಸುತ್ತೇನೆʼ ಎಂದು ಹೇಳಿದ್ದಾರೆ.
ಸಿಸೋಡಿಯಾ ಬೆಂಬಲಿಸಿ ಸಿಬಿಐ ಕಛೇರಿ ಎದುರು ಪ್ರತಿಭಟಿಸಿದ್ದಕ್ಕಾಗಿ ಪಕ್ಷದ ಇತರೆ ಮುಖಂಡರೊಂದಿಗೆ ಬಂಧನಕ್ಕೊಳಗಾಗಿ ಬಿಡುಗಡೆಯಾದ ಸಂಜಯ್ ಸಿಂಗ್, ʻಬಿಜೆಪಿ , ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವುದಕ್ಕೆ ಈ ರೀತಿಯ ಕೆಲಸ ಮಾಡುತ್ತಿದೆʼ ಎಂದು ಆರೋಪಿಸಿದ್ದಾರೆ.
ಅಲ್ಲದೇ, ʻನರೇಂದ್ರ ಮೋದಿಯ ಸರ್ವಾಧಿಕಾರ ಶೀಘ್ರವೇ ಕೊನೆಯಾಗಲಿದೆ. ಅವರು ದೇಶದ ಒಬ್ಬ ಉತ್ತಮ ಶಿಕ್ಷಣ ಸಚಿವನನ್ನು ಬಂಧಿಸಿದ್ದಾರೆ. ಇದು ಕೇಂದ್ರ ಸರ್ಕಾರದ ಹೇಡಿತನದ ನಡೆʼ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್