ಯಾವ ಪುಟಗೋಸಿ ಟಿಪ್ಪು?: ಇಮ್ರಾನ್ ಪ್ರತಾಪ್ ಗಡಿ ವಿರುದ್ಧ ಗೋ ಮಧುಸೂದನ್ ಕಿಡಿ


Team Udayavani, Nov 17, 2021, 12:49 PM IST

1-go

ಬೆಂಗಳೂರು : ಕಾಂಗ್ರೆಸ್ ಅಲ್ಪ ಸಂಖ್ಯಾತ ರಾಷ್ಟ್ರೀಯ ಅಧ್ಯಕ್ಷ ಇಮ್ರಾನ್ ಗಡಿ ನೀಡಿದ ವಿವಾದಾತ್ಮಕ ಹೇಳಿಕೆ ವಿರುದ್ಧ ಬಿಜೆಪಿ ಮುಖಂಡ ಗೋ ಮಧುಸೂದನ್ ಬುಧವಾರ ಕಿಡಿ ಕಾರಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ‘ನೀವು ಟಿಪ್ಪು ವಂಶಸ್ಥರಿರಬಹುದು, ಬಾಬರ್ ವಂಶಸ್ಥರಿರಬಹುದು, ಅಲ್ಲಾವುದ್ದೀನ್ ಖಿಲ್ಜಿ ವಂಶಸ್ಥರಿರಬಹುದು, ದೇಶದ ಮೇಲೆ ದಾಳಿ ಮಾಡಿದ ಯಾವುದೇ ದುರಾಕ್ರಮಣಿಗಳ ವಂಶಸ್ಥರಿರಬಹುದು. ಆಕ್ರಮಣ ಮಾಡಿದವರೆಲ್ಲ ಪರಾಸ್ತ್ರರಾಗಿದ್ದಾರೆ ವಿನಃ ದೇಶ ಸಾವಿರಾರು ವರ್ಷಗಳಿಂದ ಹಾಗೇ ಉಳಿದಿದೆ. ಇದು ದೇವಭೂಮಿ ಭಾರತ, ನೂರಾರು ವರ್ಷ ಗುಲಾಮಗಿರಿ ಅನುಭವಿಸಿದರೂ ಕೂಡ ಈ ದೇಶವನ್ನು ಕ್ರಿಶ್ಚಿಯನ್ ಮಯ, ಮುಸ್ಲಿಂಮಯ ಮಾಡಲು ಆಗಿಲ್ಲ. ೯೦% ಭಾರತೀಯರು ಹಿಂದೂಗಳಾಗಿ ಉಳಿದಿದ್ದಾರೆ. ದೇಶಕ್ಕೋಸ್ಕರ ಧರ್ಮಕ್ಕೋಸ್ಕರ ತಮ್ಮ ತಲೆ ಕೊಟ್ಟಿದ್ದಾರೆ. ಇತಿಹಾಸದಲ್ಲಿ ಯಾರೂ ತಲೆ ತಗ್ಗಿಸಿಲ್ಲ. ಹಿಂದೂಗಳು ತಾಳ್ಮೆಯಿಂದ ಇದ್ದಾರೆ, ಹಿಂದೂಗಳು ಸಹನೆಯಿಂದ ಇದ್ದಾರೆ. ಹಿಂದೂಗಳು ಹೇಡಿಗಳು ಅನ್ನೋ ಮನೋಭಾವನೆಯಿಂದ ಇರಬೇಡಿ. ಹಿಂದೂ ಎದ್ದರೆ ಕೇಸರಿ, ಹಿಂದೂ ಎದ್ದರೆ ವ್ಯಾಘ್ರ. ನಮ್ಮನ್ನು ಕೆರಳಿಸಬೇಡಿ, ಈ ದೇಶವನ್ನು ಉಳಿಸಿಕೊಳ್ಳೋದು ಹಿಂದುಗಳಿಗೆ ಗೊತ್ತಿದೆ. ನಾವು ನಿಮ್ಮ ಯಾರ ಕೃಪೆಯಿಂದಲೂ ಬದುಕಿಲ್ಲ. ನಾವು ಭಗವಂತನ ಸೇವೆಯಲ್ಲಿ ಬದುಕಿದ್ದೇವೆ, ಇದು ಭಗವಂತ ನಿರ್ಮಾಣ ಮಾಡಿದ ದೇಶ, ಧರ್ಮ ಸಂಸ್ಕೃತಿ ಸಂಸ್ಕಾರವಿರುವಂತಹದ್ದು.ಇದನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು’ ಎಂದರು.

‘ಯಾವ ಪುಟಗೋಸಿ ಟಿಪ್ಪು ಬಗ್ಗೆ ಮಾತಾಡ್ತೀರಿ? ನಾಚಿಕೆಗೆಟ್ಟ ಕಾಂಗ್ರೆಸ್, ಇಮ್ರಾನ್ ಪ್ರತಾಪ್ ಗಡಿ ಹೇಳಿಕೆ ಅವಹೇಳನಕಾರಿ, ಅಪಮಾನಕಾರಿ. ಇದುವರೆಗೆ ರಾಮಮಂದಿರಲ್ಲ ಆಗಿಲ್ಲ ಅನ್ನುತ್ತಿದ್ದಿರಿ , ಈಗ ರಾಮ ಮಂದಿರ ಆಗಿದೆ ನೋಡಿ’ ಎಂದರು.

‘ಕರ್ನಾಟಕದಲ್ಲೇ ಟಿಪ್ಪು ಸುಲ್ತಾನ್ ಯಾರಿಗೂ ಬೇಕಾಗಿಲ್ಲ, ಟಿಪ್ಪು ಜಯಂತಿಯನ್ನು ಶ್ರೀರಂಗಪಟ್ಟಣದಲ್ಲೇ ಯಾರಾದ್ರೂ ಆಚರಣೆ ಮಾಡಿದ್ರಾ? ಇಂಥ ಹೇಳಿಕೆ ಕೊಡುವುದನ್ನು ಕಾಂಗ್ರೆಸ್ ಬಿಡಬೇಕು ಅಂತ ಎಚ್ಚರಿಕೆ ಕೊಡುತ್ತೇನೆ’ ಎಂದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗಡಿ ‘ನೀವು ಟಿಪ್ಪು ಸುಲ್ತಾನ್ ನೆಲದಿಂದ ಬಂದವರು, ನಿಮಗೆ ತಲೆ ಕತ್ತರಿಸುವುದು ಗೊತ್ತಿದೆ, ತಲೆ ತಗ್ಗಿಸುವುದು ಗೊತ್ತಿಲ್ಲ. ನಿಮಗೆ ತಲೆ ಬಾಗುವುದು ತಿಳಿದಿಲ್ಲ, ತಲೆ ಎತ್ತುವುದು ತಿಳಿದಿದೆ’ ಎಂದು ವಿವಾದಿತ ಭಾಷಣ ಮಾಡಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.