ಗೋವಾ ಸಿಎಂ ಅಭ್ಯರ್ಥಿ: ಭಂಡಾರಿ ಸಮುದಾಯಯಕ್ಕೆ ಮಣೆ ಹಾಕಿದ ಆಪ್
Team Udayavani, Jan 19, 2022, 5:49 PM IST
ಪಣಜಿ: ಗೋವಾ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ಬುಧವಾರ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ್ದು, ಜಾತಿ ಲೆಕ್ಕಾಚಾರವನ್ನೂ ಹಾಕಿಕೊಂಡಿದೆ ಎನ್ನುವುದು ಸ್ಪಷ್ಟವಾಗಿದೆ.
ಪಣಜಿಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅಮಿತ್ ಪಾಲೇಕರ್ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿ, ಗೋವಾದಲ್ಲಿ ಕೆಲ ಪಕ್ಷಗಳು ಹಣದ ಬಲದಿಂದ ಅಧಿಕಾರ ಪಡೆದುಕೊಂಡಿದ್ದಾರೆ. ಈ ಪಕ್ಷಗಳಿಂದ ಗೋವಾದ ಜನತೆ ಬೇಸರಗೊಂದಿದ್ದಾರೆ. ಇದರಿಂದಾಗಿ ದೆಹಲಿಯಂತೆಯೇ ಅಭಿವೃದ್ಧಿ ಮಾಡಲು ಆಮ್ ಆದ್ಮಿ ಪಕ್ಷ ಗೋವಾಕ್ಕೆ ಬಂದಿದೆ ಎಂದರು.
ಮುಖ್ಯಮಂತ್ರಿ ಅಭ್ಯರ್ಥಿ ಹೊಸ ಮುಖವಾಗಿದ್ದು, ಗೋವಾವನ್ನು ಪ್ರೀತಿಸುವರು ಗೋವಾಕ್ಕಾಗಿ ಪ್ರಾಣಕೊಡಬಲ್ಲ ವ್ಯಕ್ತಿ ಮಾತ್ರ ಗೋವಾದ ಮುಖ್ಯಮಂತ್ರಿಯಾಗಬೇಕು. ಗೋವಾ ಮುಖ್ಯಮಂತ್ರಿ ಸುಶಿಕ್ಷಿತರಾಗಿರಬೇಕು, ಸಮುದಾಯಕ್ಕೆ ಸೇವೆ ಸಲ್ಲಿಸುವವರಾಗಿರಬೇಕು. ಪ್ರಾಮಾಣಿಕ ವ್ಯಕ್ತಿಯಾಗಿರಬೇಕು ಎಂದರು.
ಗೋವಾದಲ್ಲಿ ಭಂಡಾರಿ ಸಮುದಾಯದ ಜನರು ಹೆಚ್ಚಿದ್ದಾರೆ, ಆದರೆ ಅವರಿಗೆ ಅನ್ಯಾಯ ಮಾಡಲಾಗಿದೆ. ನಾವು ಪ್ರತಿ ಸಮುದಾಯಕ್ಕೂ ನ್ಯಾಯ ನೀಡುತ್ತೇವೆ. ಹಾಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಭಂಡಾರಿ ಸಮುದಾಯದ ಅಭ್ಯರ್ಥಿಯೇ ಸೂಕ್ತ ಎಂದು ಕೇಜ್ರಿವಾಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ