ಪಣಜಿ: ತೆರೆದುಕೊಂಡ ಚಿತ್ರ ಜಗತ್ತು ; ಎರಡನೇ ದಿನ ಪರವಾಗಿಲ್ಲ


Team Udayavani, Jan 17, 2021, 3:35 PM IST

ಪಣಜಿ: ತೆರೆದುಕೊಂಡ ಚಿತ್ರ ಜಗತ್ತು ; ಎರಡನೇ ದಿನ ಪರವಾಗಿಲ್ಲ

ಪಣಜಿ : ಜಗತ್ತನ್ನು ಕಾಡುತ್ತಿರುವ ಕೊರೊನಾ ಸಾಂಕ್ರಾಮಿಕಕ್ಕೆ ಲಸಿಕೆ ಸಿಕ್ಕ ಶುಭ ದಿನದಂದೇ (ಶನಿವಾರ ದೇಶಾದ್ಯಂತ ಲಸಿಕೆ ಹಾಕಿದ ದಿನ) ಗೋವಾದ ರಾಜಧಾನಿಯಲ್ಲಿ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವ ಮಂದಹಾಸ ಬೀರಿದ್ದು ವಿಶೇಷ.

ಶನಿವಾರ ಸಂಜೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕನ್ನಡದ ನಟ ಸುದೀಪ್ ಸಂಜೀವ್‌ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಹೇಳಿದ ಮಾತು ಸದಾಶಯವಾದದ್ದು. ‘ಸಿನಿಮಾ ಎಂಬುದು ನ್ಯೂ ಕೊರೊನಾ, ನ್ಯೂ ಪಾಂಡೆಮಿಕ್‌ ಆಗಲಿ. ಎಲ್ಲರನ್ನೂ ಆವರಿಸಿಕೊಳ್ಳಲಿ, ಎಲ್ಲವನ್ನೂ ಆಕ್ರಮಿಸಿಕೊಳ್ಳಲಿ‘. ಈ ಹೇಳಿಕೆ ನಿಜಕ್ಕೂ ಸತ್ಯವಾಗಬೇಕು, ಸತ್ಯವಾಗಲಿ ಎಂಬುದು ಸಿನಿ ರಸಿಕರ ಮನದಾಳದ ಮಾತು.

ರವಿವಾರ ಚಿತ್ರೋತ್ಸವದ ಎರಡನೇ ದಿನ. ಈ ಬಾರಿ ಚಿತ್ರೋತ್ಸವ ಆರಂಭವಾದದ್ದೇ ವೀಕೆಂಡ್‌ನಲ್ಲಿ. ಉದ್ಘಾಟನಾ ಚಿತ್ರ ಅನದರ್‌ ರೌಂಡ್‌ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಡ್ಯಾನಿಷ್‌ ಸಿನಿಮಾ ನಿರ್ದೇಶಕ ಥಾಮಸ್‌ ವಿಂಟರ್‌ ಬರ್ಗ್‌ನ ಸಿನಿಮಾ ಇದು. ಸಿನಿಮಾದಲ್ಲಿ ಕಾನ್‌ ಸಿನಿಮೋತ್ಸವದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದ ಮಾಡ್ಸ್ ಮಿಕ್ಕೆಲ್ಸೆನ್ ಪ್ರಧಾನ ಪಾತ್ರದಲ್ಲಿರುವುದು ವಿಶೇಷ. ಆಸ್ಕರ್‌ ಪ್ರಶಸ್ತಿಗೆ ಕಳುಹಿಸಲ್ಪಟ್ಟಿರುವ ಡ್ಯಾನಿಷ್‌ ಭಾಷೆಯ ಸಿನಿಮಾ ಇದು.

ರವಿವಾರವಾದ ಕಾರಣ ಸಿನಿಮಾಹಾಲ್‌ಗಳಲ್ಲಿ ಸ್ವಲ್ಪ ಪ್ರೇಕ್ಷಕರಿದ್ದಾರೆ. ಚಿತ್ರೋತ್ಸವ ಇಲಾಖೆ ಹಾಗೂ ಇಎಸ್‌ಜಿ ಸುಮಾರು 2500 ಮಂದಿಗೆ ನೋಂದಣಿಗೆ ಅವಕಾಶ ನೀಡಲಾಗಿತ್ತು. ಲಭ್ಯ ಮಾಹಿತಿ ಪ್ರಕಾರ 1500 ಮಂದಿ ಈಗಾಗಲೇ ತಮ್ಮ ಕಾರ್ಡ್‌ ಪಡೆದಿದ್ದಾರೆ. ಸೋಮವಾರದಿಂದ ಚಿತ್ರೋತ್ಸವಕ್ಕೆ ಯಾವ ಬಗೆಯ ಪ್ರತಿಕ್ರಿಯೆ ಇದೆ ಎಂಬುದು ಖಚಿತವಾಗಲಿದೆ.

ಇದನ್ನೂ ಓದಿ:ಗೋವಾ ಚಿತ್ರೋತ್ಸವಕ್ಕೆ ಸುದೀಪ್‌ ಚಾಲನೆ : ಕನ್ನಡದಲ್ಲೇ ಮಾತು ಆರಂಭಿಸಿದ ಕಿಚ್ಚ

ಇದೇ ಸಂದರ್ಭದಲ್ಲಿ ಇದು ಹೈಬ್ರಿಡ್‌ ಚಿತ್ರೋತ್ಸವ. ಹಲವು ಮಂದಿ ಸಿನೆ ಪ್ರೇಕ್ಷಕರು ಆನ್‌ ಲೈನ್‌ ಮೂಲಕವೂ ನೋಂದಣಿ ಮಾಡಿಕೊಂಡಿದ್ದು, ಓಟಿಟಿ ಫ್ಲಾಟ್‌ ಫಾರಂನಲ್ಲೂ ಚಿತ್ರ ವೀಕ್ಷಣೆಗೆ ಅವಕಾಶವಿದೆ.

ಸಿನಿಮಾ ಕಡಿಮೆ

ಕಳೆದ ಚಿತ್ರೋತ್ಸವಗಳಿಗೆ ಹೋಲಿಸಿದರೆ ಈ ಬಾರಿ ಚಿತ್ರ ಪ್ರದರ್ಶನ ಕಡಿಮೆ. ಪ್ರತಿ ಪ್ರದರ್ಶನ ಮುಗಿದ ಮೇಲೂ ಇಡೀ ಚಿತ್ರಮಂದಿರವನ್ನು ಸ್ಯಾನಿಟೈಷನ್‌ ಮಾಡಬೇಕಾಗಿರುವುದರಿಂದ ಅದಕ್ಕೆ ಒಂದಿಷ್ಟು ಸಮಯವನ್ನು ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ದಿನದ ಪ್ರದರ್ಶನದಲ್ಲಿ ಕೊಂಚ ಕಡಿಮೆ ಆಗಿದೆ.

ಒಂಬತ್ತು ದಿನಗಳ ಚಿತ್ರೋತ್ಸವದಲ್ಲಿ 220 ಕ್ಕೂ ಹೆಚ್ಚು ಚಲನಚಿತ್ರಗಳು ಪ್ರದರ್ಶನಗೊಳ್ಳಲಿದ್ದು, 60 ಕ್ಕೂ ಹೆಚ್ಚು ದೇಶಗಳ ಸಿನಿಮಾಗಳು ಭಾಗವಹಿಸಿವೆ.

ಸಾಂಸ್ಕೃತಿಕ ಸಂಭ್ರಮ

ಸಾಂಸ್ಕೃತಿಕ ಸಂಭ್ರಮದ ಮೂಲಕವೇ ಚಿತ್ರೋತ್ಸವಕ್ಕೆ ಭರ್ಜರಿ ಚಾಲನೆ ದೊರಕಿತು. ಹಲವಾರು ನೃತ್ಯಪಟುಗಳು ಪ್ರಸ್ತುತಪಡಿಸಿದ ನೃತ್ಯ ಪ್ರದರ್ಶನವನ್ನು ಚಿತ್ರ ರಸಿಕರು ವೀಕ್ಷಿಸಿ ಆನಂದ ಪಟ್ಟರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chef chidambara kannada movie

Chef Chidambara: ಅನಿರುದ್ಧ್ ಅಡುಗೆ ಶುರು

tdy-7

Bollywood: ರಿಮೇಕ್‌ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್‌ ಸಿನಿಮಾಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: ಚಲನಚಿತ್ರೋತ್ಸವದ ತೀರ್ಪುಗಾರ ನಡಾವ್ ಲ್ಯಾಪಿಡ್ ಟೀಕೆ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: IFFI ಚಿತ್ರೋತ್ಸವದಲ್ಲಿ ತೀರ್ಪುಗಾರ ನಡಾವ್ ಲ್ಯಾಪಿಡ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.