ಗೋವಾ ಜುವಾರಿ ರಸಗೊಬ್ಬರ ಕಾರ್ಖಾನೆ ಭೂಮಿ ಮಾರಾಟ ಸ್ಥಗಿತ
ಭೂಮಿ ಮಾರಾಟ 50 ಸಾವಿರ ಕೋಟಿ ಹಗರಣ ಎಂದು ವಿಜಯ್ ಸರ್ದೇಸಾಯಿ ಆರೋಪ
Team Udayavani, Jul 16, 2022, 3:36 PM IST
ಪಣಜಿ: ಜುವಾರಿ ರಸಗೊಬ್ಬರ ಕಾರ್ಖಾನೆಯನ್ನು ವರ್ಗಾವಣೆ ಮಾಡಿದ ನಂತರ ಹೊಸ ಪ್ರವರ್ತಕರ ಭೂಮಿ ಮಾರಾಟವನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ. ಗೋವಾ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಈ ಮಾಹಿತಿ ನೀಡಿದ್ದಾರೆ. ಇದು ಸಾವಿರಾರು ಕೋಟಿ ಹಗರಣ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.
ವಿಜಯ್ ಸರ್ದೇಸಾಯಿ ಅವರು ಗೋವಾ ವಿಧಾನಸಭೆಯಲ್ಲಿ ಸತತ ಎರಡು ದಿನಗಳ ಕಾಲ ಈ ಬಗ್ಗೆ ಧ್ವನಿ ಎತ್ತಿದ್ದರು. ಈ ಹಿನ್ನೆಲೆಯಲ್ಲಿ ಅಧಿವೇಶನ ಪ್ರಶ್ನೋತ್ತರ ವೇಳೆಯಲ್ಲಿ ವಿಪಕ್ಷ ನಾಯಕ ಮೈಕೆಲ್ ಲೋಬೋ ಅವರು ಕಂದಾಯ ಸಚಿವ ಬಾಬುಷ್ ಮಾನ್ಸೆರಾಟ್ ಅವರಿಗೆ ಪ್ರಶ್ನೆ ಕೇಳಿದರು. ಮುರಗಾಂವ್ ಶಾಸಕ ಸಂಕಲ್ಪ್ ಅಮೋನ್ಕರ್ ಸೇರಿದಂತೆ ಪ್ರತಿಪಕ್ಷ ಸದಸ್ಯರು ಭೂಮಿ ಮಾರಾಟದ ವ್ಯವಹಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಜುವಾರಿಗೆ ರಾಜ್ಯ ಸರ್ಕಾರವು ಕಡಿಮೆ ಬೆಲೆಗೆ ನೀಡಿದ ಭೂಮಿ ಕೈಗಾರಿಕಾ ಉದ್ದೇಶಗಳಿಗಾಗಿ ಮಾತ್ರ, ಈಗ ಭೂಮಿಯನ್ನು ವಸತಿಗಾಗಿ ಬಳಸಲು ಯೋಜಿಸಲಾಗಿದೆ. ಜುವಾರಿಯ ಹೊಸ ಪ್ರವರ್ತಕರು ಕೈಗಾರಿಕಾ ಅಭಿವೃದ್ಧಿ ಮತ್ತು ರಾಜ್ಯದ ಆರ್ಥಿಕ ಅಭಿವೃದ್ಧಿಯೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿದವು.
ಇದು 50 ಸಾವಿರ ಕೋಟಿ ಹಗರಣ..!
ಅಂದಿನ ಗೋವಾ ಮುಖ್ಯಮಂತ್ರಿ ದಯಾನಂದ ಬಾಂದೋಡ್ಕರ್ ರಾಜ್ಯದ ಅಭಿವೃದ್ಧಿಗಾಗಿ ಜುವಾರಿ ಆಗ್ರೋ ಕೆಮಿಕಲ್ ಲಿಮಿಟೆಡ್ ಸ್ಥಾಪಿಸಿದರು. ಈ ಕಂಪನಿಗೆ 50 ಹೆಕ್ಟೇರ್ ಸಂಕ್ವಾಲ್ ಕಮ್ಯುನಿದಾದ್ ಭೂಮಿಯನ್ನು ಅನ್ನು ಅತ್ಯಂತ ಕಡಿಮೆ ಬೆಲೆಗೆ ನೀಡಲಾಗಿತ್ತು. ಜೂನ್ 1, 2022 ರಂದು, ಕಂಪನಿಯು ಸಂಪೂರ್ಣ ಯೋಜನೆಯನ್ನು ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ಗೆ ಮಾರಾಟ ಮಾಡಿದೆ. ಮುಖ್ಯ ರಸಗೊಬ್ಬರ ಕಾರ್ಖಾನೆಯನ್ನು ಹೊರತುಪಡಿಸಿ, ಕಂಪನಿಯು ಇತರ ಹೆಚ್ಚುವರಿ ಭೂಮಿಯನ್ನು ಮಾರಾಟ ಮಾಡಿದೆ. ಈ ದೇಶದಲ್ಲಿ ದೊಡ್ಡ ಬಿಲ್ಡರ್ ಲಾಬಿ ಕೆಲಸ ಮಾಡುತ್ತಿದೆ ಮತ್ತು ಅಂದಾಜು 50 ಸಾವಿರ ಕೋಟಿ ಹಗರಣ ಇರಬಹುದು ಎಂದು ಶಾಸಕ ವಿಜಯ್ ಸರ್ದೇಸಾಯಿ ಆರೋಪಿಸಿದ್ದಾರೆ.
ಏತನ್ಮಧ್ಯೆ, ರಾಜ್ಯದ ಭೂಮಿ ಉಳಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಕಾನೂನು ಇಲಾಖೆ ಮತ್ತು ಅಡ್ವೊಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ದೋಷಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ ಸಂದರ್ಭದಲ್ಲಿ, ಮಾರಾಟ ಒಪ್ಪಂದವನ್ನು ರದ್ದುಗೊಳಿಸಲಾಗುತ್ತದೆ. ಒಂದು ತಿಂಗಳಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಎಲ್ಲಾ ರಸಗೊಬ್ಬರ ಮಾರಾಟವನ್ನು ನಿಲ್ಲಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ