ಟಿಎಂಸಿಗೆ ಸೇರಿದ್ದು ತಪ್ಪು; ಕಾಂಗ್ರೆಸ್ ಗೆ ಮರಳುವ ಸುಳಿವು ನೀಡಿದ ಅಲೆಕ್ಸೊ

ಗೋವಾದಲ್ಲಿ ಜೋರಾದ ಸಂಗೀತ ಕುರ್ಚಿ ..!

Team Udayavani, Jan 17, 2022, 3:23 PM IST

1-asddsa

ಪಣಜಿ: ಕಾಂಗ್ರೆಸ್ ಪಕ್ಷದಿಂದ ಹೊರನಡೆದು, ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ವಾರಗಳ ನಂತರ, ಯಾವುದೇ ಕಾರಣ ನೀಡದೆ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ತೊರೆದಿರುವ ಅಲೆಕ್ಸೊ ರೆಜಿನಾಲ್ಡೊ ಲೌರೆಂಕೊ ಸೋಮವಾರ ತಮ್ಮ ಮಾತೃಪಕ್ಷಕ್ಕೆ ಮರುಸೇರ್ಪಡೆಯಾಗುವ ಸುಳಿವು ನೀಡಿದ್ದಾರೆ.

ಅಲೆಕ್ಸೊ, ವಿಧಾನಸಭಾ ಚುನಾವಣೆಗೆ ಮುನ್ನ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷಕ್ಕೆ ಸೇರಿ ತಪ್ಪು ಮಾಡಿದ್ದಕ್ಕಾಗಿ ಬೆಂಬಲಿಗರು ಮತ್ತು ಹಿತೈಷಿಗಳಲ್ಲಿ ಕ್ಷಮೆಯಾಚಿಸಿದ್ದಾರೆ. ಸೋಮವಾರ ಪಣಜಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಲೌರೆಂಕೊ ಅವರು ಟಿಎಂಸಿಗೆ ಸೇರಲು ನಿರ್ಧರಿಸಿದ ನಂತರ ತೀವ್ರ ಹಿನ್ನಡೆಯನ್ನು ಎದುರಿಸಬೇಕಾಯಿತು, ಇದು “ಹೊಸ ಉದಯದ” ಭರವಸೆ ನೀಡಿದೆ ಎಂದು ಹೇಳಿದರು.

‘ಈಗ ನಾನು ಜನರು ನಂಬುವ ಅದೇ ವ್ಯಕ್ತಿಯಾಗಲು ನಾನು ಬಯಸುತ್ತೇನೆ ಎಂದು ಹೇಳಿದರು.ನಾನು ಟಿಎಂಸಿಗೆ ಸೇರುವ ಮೂಲಕ ಅನೇಕ ಸ್ನೇಹಿತರನ್ನು ಮತ್ತು ನನ್ನ ಹತ್ತಿರದ ಮತ್ತು ಆತ್ಮೀಯ ಬೆಂಬಲಿಗರನ್ನು ನೋಯಿಸಿದ್ದೇನೆ. ನಾನು ನನ್ನ ಕುಟುಂಬ ಸದಸ್ಯರಿಗೆ ಮತ್ತು ನನ್ನೊಂದಿಗೆ ಸದಾ ಕಾಲ ನಿಂತವರನ್ನು ಸಹ ನೋಯಿಸಿದ್ದೇನೆ’ ಎಂದರು.

‘ಜನರ ಹಿತದೃಷ್ಟಿಯಿಂದ ಟಿಎಂಸಿಗೆ ಸೇರಲು ನಿರ್ಧರಿಸಿದ್ದೆ, ಏಕೆಂದರೆ ಅವರಿಗೆ “ಹೊಸ ಉದಯ” ಎಂದು ಭರವಸೆ ನೀಡಲಾಗಿತ್ತು. “ನಾನು ಜನರಿಗಾಗಿ ಹೋರಾಡಿದ್ದೇನೆ. ಅವರ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೆ. ನಾನು ಹೃದಯ ಮತ್ತು ಮನಸ್ಸಿನಿಂದ ಜನರಿಗಾಗಿ ಕೆಲಸ ಮಾಡಿದ್ದೇನೆ’ ಎಂದರು.

ತಮ್ಮ ಭವಿಷ್ಯದ ರಾಜಕೀಯದ ಕುರಿತು ಮಾತನಾಡಿ, ‘ತಮ್ಮ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸೇರುವಂತೆ ಕೇಳಿಕೊಂಡಿದ್ದಾರೆ’ ಎಂದರು.

‘ಕಾಂಗ್ರೆಸ್ ನಾಯಕ ಮೈಕೆಲ್ ಲೋಬೋ ಅವರು ನನ್ನನ್ನು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರುವಂತೆ ಕೇಳಿಕೊಂಡಿದ್ದಾರೆ. ನನ್ನ ಜನರು ಹೇಳುವುದನ್ನು ನಾನು ಕೇಳುತ್ತೇನೆ’ ಎಂದರು.

ಟಿಎಂಸಿಗೆ ಸೇರುವುದರಿಂದ ಮತಗಳನ್ನು ವಿಭಜಿಸುವ “ಹೊರಗಿನ ಪಕ್ಷ”ವನ್ನು ಗೋವಾಕ್ಕೆ ಆಹ್ವಾನಿಸಿದಂತೆ ಎಂದು ಅವರ ಬೆಂಬಲಿಗರು ಆತಂಕ ವ್ಯಕ್ತಪಡಿಸಿದ್ದರು. ಅಲೆಕ್ಸೊ ಕಳೆದ ಡಿಸೆಂಬರ್‌ನಲ್ಲಿ ಟಿಎಂಸಿ ಸೇರಲು ಕರ್ಟೋರಿಮ್‌ನ ಶಾಸಕ ಸ್ಥಾನಕ್ಕೆ ಮತ್ತು ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಆಗ ಅವರು ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದರು.

ಭಾನುವಾರ, ಅವರು ಟಿಎಂಸಿ ತೊರೆಯುವ ನಿರ್ಧಾರದ ಬಗ್ಗೆ ಬ್ಯಾನರ್ಜಿ ಅವರಿಗೆ ಕಳುಹಿಸಿದ ಪತ್ರದಲ್ಲಿ ಯಾವುದೇ ಕಾರಣವನ್ನು ನೀಡದೆ ಟಿಎಂಸಿಗೆ ರಾಜೀನಾಮೆ ನೀಡಿದ್ದಾರೆ.

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.