ಗೋವಾ ಚುನಾವಣೆ: ಮಾವ ಕಾಂಗ್ರೆಸ್ ನಿಂದ ಸೊಸೆ ಬಿಜೆಪಿಯಿಂದ ಅದೃಷ್ಟ ಪರೀಕ್ಷೆ
Team Udayavani, Jan 25, 2022, 5:07 PM IST
ಪಣಜಿ: ಗೋವಾದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪ್ರತಾಪಸಿಂಹ ರಾಣೆ ಪೊರಿಯಮ್ ಮತ ಕ್ಷೇತ್ರದಲ್ಲಿ ತಮ್ಮ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ವಿಶೇಷವೆಂದರೆ ಪೊರಿಯಮ್ ಕ್ಷೇತ್ರದಲ್ಲಿ ಬಿಜೆಪಿಯಿಂದ ರಾಣೆ ಯವರ ಸೊಸೆ ಡಾ. ದಿವ್ಯಾ ರಾಣೆ ಸ್ಫರ್ಧಿಸಿದ್ದು ಒಂದೇ ಕುಟುಂಬದಿಂದ ಇಬ್ಬರು ಬೇರೆ ಬೇರೆ ಪಕ್ಷದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಪ್ರತಾಪಸಿಂಹ ರಾಣೆಯವರು ಚುನಾವಣೆಯಲ್ಲಿ ಸ್ಫರ್ಧಿಸದಂತೆ ತಡೆಯಲು ಬಿಜೆಪಿ ಶತಾಯಗತಾಯ ಪ್ರಯತ್ನ ನಡೆಸಿದಂತೆ ಕಂಡುಬರುತ್ತಿದೆ. ಗೋವಾ ಸರ್ಕಾರವು ಪ್ರತಾಪಸಿಂಹ ರಾಣೆಗೆ ಅಜೀವ ಕ್ಯಾಬಿನೆಟ್ ಸ್ಥಾನ ನೀಡಿದ್ದು ರಾಜಕೀಯದಿಂದ ನಿವೃತ್ತಿಯಾಗಲು ದಾರಿ ಮಾಡಿಕೊಟ್ಟಂತಿತ್ತು. ಗೌರವಯುತವಾಗಿ ನಿವೃತ್ತಿಯಾಗುವಂತೆ ಸಚಿವ ವಿಶ್ವಜಿತ್ ರಾಣೆ ಕೂಡ ತಂದೆ ಪ್ರತಾಪಸಿಂಹ ರಾಣೆಗೆ ಸಲಹೆ ನೀಡಿದ್ದರು ಎನ್ನಲಾಗಿದೆ. ಆದರೆ ಪ್ರತಾಪಸಿಂಹ ರಾಣೆ ತನ್ನ ಸೊಸೆಯ ವಿರುದ್ಧ ಪೊರಿಯಮ್ ಕ್ಷೇತ್ರದಿಂದ ಸ್ಫರ್ಧಿಸುವುದಾಗಿ ಘೋಷಿಸಿದ್ದು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
ಸುಮಾರು ಐದು ದಶಕಗಳಿಂದ ಪೊರಿಯಮ್ ಪ್ರತಿನಿಧಿಸುತ್ತಿರುವ ರಾಣೆ ಅವರು ಕಾಂಗ್ರೆಸ್ಗೆ ನಂಬಿಗಸ್ತರಾಗಿದ್ದಾರೆ ಆದರೆ 2007 ರಿಂದ ನೆರೆಯ ವಾಲ್ಪೊಯ್ ಸ್ಥಾನವನ್ನು ಪ್ರತಿನಿಧಿಸುತ್ತಿರುವ ಅವರ ಮಗ ವಿಶ್ವಜಿತ್ 2017 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. . ಬಿಜೆಪಿ ಈಗ ವಿಶ್ವಜಿತ್ ಅವರ ಪತ್ನಿ ದಿವ್ಯಾ ಅವರನ್ನು ಪೊರಿಯಮ್ನಿಂದ ಕಣಕ್ಕಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
MUST WATCH
ಹೊಸ ಸೇರ್ಪಡೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ