ಗೋವಾದ ನೀರು ಕೊಲ್ಲಿ ರಾಷ್ಟ್ರಗಳಿಗೆ ಕೊಂಡೊಯ್ಯಲು ಸಾಧ್ಯ : ಸಚಿವ ರವಿ
Team Udayavani, Apr 8, 2022, 1:07 PM IST
ಪಣಜಿ: ಸಚಿವ ರವಿ ನಾಯ್ಕ ತಮ್ಮ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ, ಇದೀಗ ಮತ್ತೊಂದು ಹೇಳಿಕೆ ನೀಡಿ ಚರ್ಚೆಗೆ ಕಾರಣವಾಗಿದ್ದಾರೆ. ಗೋವಾದಲ್ಲಿ ನೀರು ಸಂಗ್ರಹಿಸಿ ಕೊಲ್ಲಿ ರಾಷ್ಟ್ರಗಳಿಗೆ ಕೊಂಡೊಯ್ಯಲು ಸಾಧ್ಯ ಎಂಬ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಗೋವಾದಲ್ಲಿ ಅಣೆಕಟ್ಟುಗಳನ್ನು ನಿರ್ಮಿಸಿ ನೀರಿನ ಕೊರತೆಯಿರುವ ಸ್ಥಳಗಳಿಗೆ ನೀರು ಪೂರೈಸಲು ಸಾಧ್ಯ. ಗೋವಾದಲ್ಲಿ ಸಂಗ್ರಹವಾಗಿರುವ ನೀರನ್ನು ನೇರವಾಗಿ ಕೊಲ್ಲಿ ರಾಷ್ಟ್ರಗಳಿಗೆ ಕೊಂಡೊಯ್ಯಲು ಸಾಧ್ಯವಿದೆ ಎಂದು ರವಿ ನಾಯ್ಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ರವಿ ನಾಯ್ಕ ಕೃಷಿ ಸಚಿವರಾಗಿದ್ದು, ಅಧಿಕಾರ ಸ್ವೀಕರಿಸಿದ ನಂತರ ಅವರು ನೀಡಿದ ಮೊದಲ ಹೇಳಿಕೆ ಇದಾಗಿದೆ.
ನನ್ನ ಯೋಜನೆಗಳನ್ನು ತಿಳಿದುಕೊಳ್ಳಲು ನೀವು ಏಕೆ ಆತುರಪಡುತ್ತೀರಿ ಎಂದು ಸುದ್ಧಿಗಾರರನ್ನು ಪ್ರಶ್ನಿಸಿ, ಗೋವಾ ರಾಜ್ಯದಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ರಾಜ್ಯದ ಹಲವೆಡೆ ಸದ್ಯ ಪ್ರತಿದಿನ ಎರಡರಿಂದ ನಾಲ್ಕು ಗಂಟೆಗಳು ಮಾತ್ರ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ. ಇನ್ನೂ ಕೆಲವೆಡೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತದೆ. ಇನ್ನು ಮುಂದೆ ಗೋವಾದಿಂದ ನೀರನ್ನು ರಫ್ತು ಮಾಡುವುದಾಗಿ ಹೇಳಿದ್ದಾರೆ.
ರವಿ ನಾಯ್ಕರವರು ಗೋವಾ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಪೊಂಡಾ ಕ್ಷೇತ್ರದಲ್ಲಿ 77 ಮತಗಳಿಂದ ಜಯಗಳಿಸಿದ್ದರು. ಸದ್ಯ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸಂಪುಟದಲ್ಲಿ ಕೃಷಿ ಖಾತೆಯೊಂದಿಗೆ ಕರಕುಶಲ ಮತ್ತು ನಾಗರೀಕ ಸರಬರಾಜು ಖಾತೆಯನ್ನು ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ