ಹಳ್ಳಿ, ಹಳ್ಳಿಗೂ ಹೋಗಿ ಜನರ ಮಧ್ಯೆ ಹೋರಾಟ: ಡಿ.ಕೆ. ಶಿವಕುಮಾರ್

ಆಗ್ರಹ ಈಡೇರುವವರೆಗೂ ನಾವು ಅಧಿವೇಶನ ನಡೆಯಲು ಬಿಡುವುದಿಲ್ಲ

Team Udayavani, Feb 19, 2022, 1:06 PM IST

d-k-shi

ಬೆಂಗಳೂರು: ಈಶ್ವರಪ್ಪನ ವಜಾಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಸೋಮವಾರ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸುತ್ತೇವೆ, ನಂತರ ಹಳ್ಳಿ, ಹಳ್ಳಿಗೂ ಹೋಗಿ ಜನರ ಮಧ್ಯೆ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶನಿವಾರ ಹೇಳಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ನಾವು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿಯನ್ನು ಎರಡು ದಿನ ಪೂರೈಸಿದ್ದು, ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟವನ್ನು ಮುಂದುವರಿಸುತ್ತೇವೆ.ನಾವು ಬಚ್ಚಲು ಬಾಯಿ ಈಶ್ವರಪ್ಪನ ರಾಜೀನಾಮೆ ಕೇಳುತ್ತಿಲ್ಲ. ಅವನನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದ್ದೇವೆ. ನಮ್ಮ ಆಗ್ರಹ ಈಡೇರುವವರೆಗೂ ನಾವು ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದರು.

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ, ಈಗ ದೊಡ್ಡ ಸಾಧನೆ ಮಾಡಿರುವಂತೆ ಬೀಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದೆ. ರಾಷ್ಟ್ರಗೀತೆ, ಧ್ವಜ, ಪ್ರಜಾಪ್ರಭುತ್ವ, ಸಂವಿಧಾನ ನೀಡಿದ್ದೇವೆ.ನಾವು ಅಧಿವೇಶನದ ಸಮಯದಲ್ಲಿ ರಾಷ್ಟ್ರಧ್ವಜ ಹಾರಿಸಿ ತಪ್ಪು ಮಾಡಿದ್ದರೆ ನಮ್ಮ ಮೇಲೆ ಕೇಸ್ ದಾಖಲಿಸಲಿ. ಕಾನೂನು ಕ್ರಮ ಕೈಗೊಳ್ಳಲಿ. ಇನ್ನು ಯಾಕೆ ದಾಖಲಿಸಿಲ್ಲ? ಅದಕ್ಕಿಂತ ಮೊದಲು ದೇಶದ ಧ್ವಜಕ್ಕೆ ಅಪಮಾನ ಮಾಡಿರುವ ಈತನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಿ ಎಂದು ಕಿಡಿ ಕಾರಿದರು.

ಈಶ್ವರಪ್ಪ ದೊಡ್ಡ ಸಾಧನೆ ಮಾಡಿರುವಂತೆ ಅವರಿಗೆ ಸ್ವಾಗತ ಕೋರಲು ಐನೂರು ಮಂದಿ ಸೇರಿದ್ದಾರಂತೆ. ಸಂತೋಷ ಅವರು ಏನಾದರೂ ಮಾಡಿಕೊಳ್ಳಲಿ.ಆದರೆ ದೇಶದ್ರೋಹದ ಹೇಳಿಕೆ ಕೊಟ್ಟ ಈಶ್ವರಪ್ಪನ ವಿರುದ್ಧ ಪ್ರಕರಣ ದಾಖಲಿಸದೆ, ಅವರ ಹೇಳಿಕೆ ವಿರುದ್ಧ ಕಪ್ಪು ಬಾವುಟ ಹಾರಿಸಲು ಹೋದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ನಾನು ಎಸ್ಪಿ ಹಾಗೂ ಡಿಜಿ ಜೊತೆ ಮಾತನಾಡುತ್ತೇನೆ. ಅವರು ಪೊಲೀಸ್ ಸಮವಸ್ತ್ರ ಕಳಚಿ ಕೇಸರಿ ಬಟ್ಟೆ ಧರಿಸಿ ಬಿಜೆಪಿಯ ಕಾರ್ಯಕರ್ತರಾಗಿ ಕೆಲಸ ಮಾಡುವಂತೆ ಹೇಳುತ್ತೇನೆ ಎಂದು ಕಿಡಿ ಕಾರಿದರು.

ನಾವು ಪಾದಯಾತ್ರೆ ಮಾಡಿದಾಗ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದರು, ಬಿಜೆಪಿಯ ಹಲವು ನಾಯಕರು ಸಾವಿರಾರು ಜನ ಸೇರಿಸಿ ಕಾರ್ಯಕ್ರಮ ಮಾಡಲಿಲ್ಲವೇ? ಅವರ ವಿರುದ್ಧ ಯಾಕೆ ಕೇಸ್ ಹಾಕಿಲ್ಲ? ಮುಖ್ಯಮಂತ್ರಿಗಳು ನಿಷ್ಪಕ್ಷಪಾತರಾಗಿರುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರೂ ಅವರ ಕೈಗೊಂಬೆಯಾಗಿದ್ದಾರೆ. ಅವರು ಮುಖ್ಯಮಂತ್ರಿ ಕೆಲಸ ಮಾಡುತ್ತಿಲ್ಲ. ಅವರ ಮೊದಲ ಆದ್ಯತೆ ಅವರ ಪಕ್ಷದ ಅಜೆಂಡಾ.ಸಂವಿಧಾನದ ಮೇಲೆ ಪ್ರಮಾಣ ಮಾಡಿ, ಈಗ ಅದರಂತೆ ಅವರು ನಡೆದುಕೊಳ್ಳುತ್ತಿಲ್ಲ ಎಂದರು.

ಮೇಕೆದಾಟು ಪಾದಯಾತ್ರೆ ಪುನಾರಂಭ

ಇದೇ 27ರಿಂದ ಮತ್ತೆ ಮೇಕೆದಾಟು ಪಾದಯಾತ್ರೆ ಆರಂಭಿಸುತ್ತಿದ್ದು, ಈ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ನಾವು ತಯಾರಿ ಮಾಡಿಕೊಳ್ಳುತ್ತಿದ್ದು ಬೆಳಗ್ಗೆ ಎದ್ದು ನಡೆಯುತ್ತಿದ್ದೇವೆ.ರಾಜ್ಯ ಹಾಗೂ ರಾಷ್ಟ್ರದ ಹಿತಕ್ಕಾಗಿ ನಾವು ಹೋರಾಟ ಮಾಡುತ್ತಿದ್ದು, ಬೆಂಗಳೂರು ಜನರ ಕುಡಿಯುವ ನೀರಿಗೆ, ರೈತರ ಹಿತಕ್ಕೆ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ.

ಬಿಜೆಪಿಯವರಿಗೆ ರಾಜ್ಯದ ನೀರಾವರಿ ವಿಚಾರವಾಗಿ ಆಸಕ್ತಿ ಇಲ್ಲ. ಅವರಲ್ಲಿ ಡಬಲ್ ಇಂಜಿನ್ ಸರ್ಕಾರವಿದ್ದರೂ ಅವರು ಯಾವಾಗ ಬೇಕಾದರೂ ಕೆಲಸ ಆರಂಭಿಸಬಹುದು. ಈ ಯೋಜನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದು, ಕೇವಲ ಹೇಳಿದರೆ ಸಾಲದು. ಅಧಿಸೂಚನೆ ಹೊರಡಿಸಿ, ಜಾಗ ವಶಪಡಿಸಿಕೊಳ್ಳಬೇಕು, ಭೂಮಿ ಪೂಜೆ ಮಾಡಬೇಕು ಎಂದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.