ಕಲಬುರಗಿ ಚಿನ್ನದ ವ್ಯಾಪಾರಿಯ ಕೊಲೆ: ಆರೋಪಿಗಳ ಬಂಧನ


Team Udayavani, Jan 15, 2022, 10:00 AM IST

1arrest

ವಾಡಿ: ನಗರದ ಗಾಜಿಪುರ ಚಕ್ರಕಟ್ಟಾ ಬಡಾವಣೆಯ ಚಿನ್ನದ ವ್ಯಾಪಾರಿ ಮಂಜುನಾಥ ತೆಗನೂರ ಎಂಬಾತನನ್ನು ಸೈಜುಗಲ್ಲು ಎತ್ತಿ ಹಾಕಿ ಭೀಕರವಾಗಿ ಕೊಂದು ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ವಾಡಿ ಠಾಣೆ ಪೊಲೀಸರು ಬಂದಿದ್ದಾರೆ.

ಚಿತ್ತಾಪುರ ಪಟ್ಟಣದ ಖಾಸಗಿ ಗೂಡ್ಸ್ ವಾಹನ ಚಾಲಕ ಮಹ್ಮದ್ ಸಾಬ ಲಾಲ್‌ಸಾಬ (52), ಈತನ ಸಂಬಂಧಿ ರಹೆಮಾನ ಶೇಖ ರುಕ್ಮೋದ್ದಿನ್ ಶೇಖ (44) ಕೊಲೆ ಆರೋಪಿಗಳಾಗಿದ್ದಾರೆ.

ಮೃತ ಮಂಜುನಾಥ ಬಳಿ ಕೊಲೆಯ ಪ್ರಮುಖ ಆರೋಪಿ ಮಹ್ಮದ್ ಸಾಬ ಲಾಲ್‌ಸಾಬ ಎನ್ನುವಾತ ಕೆಲ ವರ್ಷಗಳ ಹಿಂದೆ 12 ಲಕ್ಷ ರೂ. ಸಾಲ ಪಡೆದಿದ್ದ. ಇನ್ನೋರ್ವ ಆರೋಪಿ ರಹೆಮಾನ್ ಶೇಖ ಕೂಡ ಒಂದು ಲಕ್ಷ ಸಾಲ ಪಡೆದಿದ್ದ. ಪಡೆದ ಹಣ ಮತ್ತು ಬಡ್ಡಿಯನ್ನು ಮರಳಿಸುವಂತೆ ಮಂಜುನಾಥ ಪದೇ ಪದೇ ಕಿರುಕುಳ ಕೊಡುತ್ತಿದ್ದನಲ್ಲದೆ, ಹೊಲ ಮಾರಿಯಾದರೂ ಹಣ ಒದಗಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ.

ಹೊಲ ಮಾರಲು ಹೆಂಡತಿ ಬಿಡುತ್ತಿರಲಿಲ್ಲ. ಇತ್ತ ಸಾಲಕ್ಕಾಗಿ ಮಂಜುನಾಥನ ಕಿರುಕುಳ ನಿಲ್ಲುತ್ತಿರಲಿಲ್ಲ. ಮಾನಸಿಕವಾಗಿ ರೋಸಿ ಹೋಗಿ ಒಮ್ಮೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದೆವು. ತದನಂತರ ಮಂಜುನಾಥನನ್ನು ಕೊಲ್ಲಲು ನಿರ್ಧರಿಸಿದ್ದೇವು. ವಾರದ ಹಿಂದೆ ಕೊಲೆಗೆ ಪ್ರಯತ್ನಿಸಿ ವಿಫಲರಾದೇವು. ಕೊನೆಗೆ ಜ.10 ರಂದು ಸಾಲದ ಹಣ ಹಿಂತಿರುಗಿಸುವುದಾಗಿ ನಂಬಿಸಿ ಆತನನ್ನು ಚಿತ್ತಾಪುರಕ್ಕೆ ಕರೆತಂದೇವು. ಹೊಲ ಖರೀದಿಸಿದ ವ್ಯಕ್ತಿ ಯಾದಗಿರಿಯಲ್ಲಿದ್ದಾನೆ ಅಲ್ಲಿಗೆ ಹೋಗೋಣ ಎಂದು ನಂಬಿಸಿ ಸುತ್ತಾಡಿಸಿದೇವು.

ಕೊಲೆಗೆ ಸೂಕ್ತವಾದ ಸ್ಥಳ ಸಿಗದಕ್ಕೆ ಮರಳಿ ಚಿತ್ತಾಪುರಕ್ಕೆ ಕರೆದುಕೊಂಡು ಬಂದು, ಚಿತ್ತಾಪುರ ಮಾರ್ಗದ ಯರಗಲ್ ರಸ್ತೆ ಬದಿಯಲ್ಲಿ ವಾಹನ ನಿಲ್ಲಿಸಿ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಇರಿದು ಮಂಜುನಾಥನನ್ನು ಕೊಲೆ ಮಾಡಿದೆವು. ವ್ಯಕ್ತಿಯ ಗುರುತು ಸಿಗಬಾರದು ಎಂಬ ಕಾರಣಕ್ಕೆ ಮುಖದ ಮೇಲೆ ಕಲ್ಲು ಹಾಕಿದ್ದೇವು ಎಂದು ವಿಚಾರಣೆ ವೇಳೆ ಬಂಧಿತ ಆರೋಪಿಗಳಾದ ಮಹ್ಮದ್ ಸಾಬ ಲಾಲ್‌ಸಾಬ ಹಾಗೂ ರಹೆಮಾನ್ ಶೇಖ ಹೇಳಿದ್ದಾರೆ ಎಂದು ಪಿಎಸ್‌ಐ ವಿಜಯಕುಮಾರ ಭಾವಗಿ ತಿಳಿಸಿದ್ದಾರೆ.

ಕೊಲೆಗೈದು ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆಹಚ್ಚಲು ಜಿಲ್ಲಾ ಪೊಲೀಸ್ ಇಲಾಖೆ, ಎಸ್‌ಪಿ ಇಶಾ ಪಂತ್ ಅವರ ಸೂಚನೆಯಂತೆ ಮತ್ತು ಹೆಚ್ಚುವರಿ ಎಸ್‌ಪಿ ಪ್ರಸನ್ನ ದೇಸಾಯಿ ಹಾಗೂ ಶಹಾಬಾದ ಡಿವೈಎಸ್‌ಪಿ ಉಮೇಶ ಚಿಕ್ಕಮಠ ಅವರ ಮಾರ್ಗದರ್ಶನದಲ್ಲಿ ಚಿತ್ತಾಪುರ ಸಿಪಿಐ ಕೃಷ್ಣಪ್ಪ ಕಲ್ಲೇದೇವರು ಹಾಗೂ ವಾಡಿ ಠಾಣೆ ಪಿಎಸ್‌ಐ ವಿಜಯಕುಮಾರ ಭಾವಗಿ ಅವರ ನೇತೃತ್ವದ ಎರಡು ವಿಶೇಷ ತನಿಖಾ ತಂಡಗಳನ್ನು ರಚಿಸಿತ್ತು. ಪ್ರೋಭೇಷನರಿ ಪಿಎಸ್‌ಐ ದಿನೇಶ, ಸಿಬ್ಬಂದಿಗಳಾದ ಲಕ್ಷ್ಮಣ, ದತ್ತಾತ್ರೇಯ, ರವಿ, ಮೇಲಗಿರಿ, ಶ್ರೀಮಂತ, ಮಧುಕರ ತಂಡದಲ್ಲಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.