ರಷ್ಯಾ ಯುದ್ಧದ ಪರಿಣಾಮ; ಷೇರುಪೇಟೆ ಸೆನ್ಸೆಕ್ಸ್ ಇಳಿಕೆ, ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ
22 ಕ್ಯಾರೆಟ್ ನ 10 ಗ್ರಾಮ್ ಚಿನ್ನದ ಬೆಲೆ 49,400 ರೂಪಾಯಿಗೆ ಏರಿಕೆ
Team Udayavani, Mar 8, 2022, 1:26 PM IST
ನವದೆಹಲಿ: ರಷ್ಯಾ, ಉಕ್ರೇನ್ ನಡುವಿನ ಯುದ್ಧದ ಪರಿಣಾಮ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಷೇರುಪೇಟೆಯಲ್ಲಿ ಸೆನ್ಸೆಕ್ಸ್ ಕುಸಿತದಿಂದ ಹೂಡಿಕೆದಾರರು ಚಿನ್ನ ಖರೀದಿಯಲ್ಲಿ ಹೆಚ್ಚು ಒಲವು ತೋರಿದ ಹಿನ್ನೆಲೆಯಲ್ಲಿ ಭಾರತದಲ್ಲಿ ಮಂಗಳವಾರ(ಮಾರ್ಚ್ 08) ಚಿನ್ನದ ಬೆಲೆ ಮತ್ತಷ್ಟು ಏರಿಕೆಯಾಗಿದೆ.
ಇದನ್ನೂ ಓದಿ:ಗಂಡು ಮಗುವಿನ ನಿರೀಕ್ಷೆ: 7 ದಿನದ ಹೆಣ್ಣು ಮಗುವನ್ನು ಗುಂಡಿಟ್ಟು ಕೊಂದ ತಂದೆ
ಇಂದಿನ ಮಾರುಕಟ್ಟೆ ದರದ ಪ್ರಕಾರ, ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10 ಗ್ರಾಮ್ ಚಿನ್ನದ ಬೆಲೆ 49,400 ರೂಪಾಯಿಗೆ ಏರಿಕೆಯಾಗಿದ್ದು, 24ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 53,890ಕ್ಕೆ ಹೆಚ್ಚಳವಾಗಿದೆ.
ಏತನ್ಮಧ್ಯೆ ಭಾರತದಲ್ಲಿ ಬೆಳ್ಳಿ ಬೆಲೆಯೂ ಏರಿಕೆಯಾಗಿದ್ದು, ಒಂದು ಕೆ.ಜಿ ಬೆಳ್ಳಿ ಬೆಲೆಯಲ್ಲಿ 700 ರೂಪಾಯಿ ಹೆಚ್ಚಳವಾಗಿದ್ದು, ಪ್ರಸ್ತುತ ಒಂದು ಕೆಜಿ ಬೆಳ್ಳಿ ಬೆಲೆ 70,700 ರೂಪಾಯಿಗೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 50,200 ರೂಪಾಯಿಯಾಗಿದ್ದು, 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನದ ಬೆಲೆ 54,760 ರೂಪಾಯಿ. ಮುಂಬಯಿಯಲ್ಲಿ 22 ಕ್ಯಾರೆಟ್ ನ 10 ಗ್ರಾಮ್ ಚಿನ್ನದ ಬೆಲೆ 49,400 ರೂಪಾಯಿ, 24 ಕ್ಯಾರೆಟ್ ನ 10 ಗ್ರಾಮ್ ಚಿನ್ನದ ಬೆಲೆ 53, 890ಕ್ಕೆ ಹೆಚ್ಚಳವಾಗಿದೆ.
ದೆಹಲಿಯಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನಕ್ಕೆ 49,400 ರೂಪಾಯಿ, 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನಕ್ಕೆ 53,890 ರೂಪಾಯಿ. ಹೈದರಾಬಾದ್ ನಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನಕ್ಕೆ 49,400 ರೂಪಾಯಿ, 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನಕ್ಕೆ 53,890 ರೂಪಾಯಿ.
ಕೇರಳದಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನಕ್ಕೆ 49,400 ರೂಪಾಯಿ, 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನಕ್ಕೆ 53,890 ರೂಪಾಯಿ. ಕೊಯಂಮತ್ತೂರ್ ನಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನಕ್ಕೆ 50, 200 ರೂಪಾಯಿ, 24 ಕ್ಯಾರೆಟ್ ನ ಹತ್ತು ಗ್ರಾಮ್ ಚಿನ್ನಕ್ಕೆ 54,760 ರೂಪಾಯಿ.
ಷೇರುಪೇಟೆ ಸೆನ್ಸೆಕ್ಸ್ ಇಳಿಕೆ:
ರಷ್ಯಾ, ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 432.62 ಅಂಕ ಇಳಿಕೆಯಾಗಿದ್ದು, 52,410.13 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 147.80 ಅಂಕ ಇಳಿಕೆಯಾಗಿದ್ದು, 15,715.40 ಅಂಕಗಳ ಮಟ್ಟದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?