ಈ ವರ್ಷವೂ ಉತ್ತಮ ಮುಂಗಾರು! ಕರ್ನಾಟಕಕ್ಕೆ ಅಲ್ಪ ಮಳೆ ಕೊರತೆ ನಿರೀಕ್ಷೆ


Team Udayavani, Apr 14, 2021, 8:50 PM IST

ಈ ವರ್ಷವೂ ಉತ್ತಮ ಮುಂಗಾರು! ಕರ್ನಾಟಕಕ್ಕೆ ಅಲ್ಪ ಮಳೆ ಕೊರತೆ ನಿರೀಕ್ಷೆ

ನವದೆಹಲಿ: ಸತತ ಮೂರನೇ ವರ್ಷ ಮುಂಗಾರು ವಿಚಾರದಲ್ಲಿ ದೇಶದ ರೈತಾಪಿ ವರ್ಗಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ.
ಈ ವರ್ಷವೂ ದೇಶದಲ್ಲಿ ಉತ್ತಮ ಮುಂಗಾರು ಮಳೆಯಾಗಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್‌ ಮುನ್ಸೂಚನೆ ನೀಡಿದೆ. ವಿಶೇಷವೆಂದರೆ, ಸತತ ಮೂರನೇ ವರ್ಷ ದೇಶದಲ್ಲಿ ಸಾಮಾನ್ಯ ಮುಂಗಾರು ಕಾಣಲಿದೆ. ಅಂದರೆ, 2019, 2020ರಂತೆ 2021ರಲ್ಲೂ ಉತ್ತಮವಾಗಿ ಮುಂಗಾರು ಮಳೆಯಾಗಲಿದೆ ಎಂದು ಈ ಸಂಸ್ಥೆ ಭವಿಷ್ಯ ನುಡಿದಿದೆ.

ಮುಂಗಾರು ವಿಚಾರದಲ್ಲಿ ಹ್ಯಾಟ್ರಿಕ್‌ ಖುಷಿ ಸಿಗುತ್ತಿರುವುದು ಇದೇ ಮೊದಲಲ್ಲ. 1996, 1997 ಮತ್ತು 1998ರಲ್ಲಿಯೂ ಉತ್ತಮವಾಗಿ ಮುಂಗಾರು ಸುರಿದಿತ್ತು.

ಸ್ಕೈಮೆಟ್‌ ಹವಾಮಾನ ಸಂಸ್ಥೆ ಪ್ರಕಟಿಸಿದ ಮಾಹಿತಿ ಪ್ರಕಾರ ಸಾಮಾನ್ಯ ಮಳೆ ಪ್ರಮಾಣ ಸರಿ ಸುಮಾರು ಶೇ.103ರ ವರೆಗೆ ಆಗಲಿದೆ. ಅಂದರೆ ಜೂನ್‌ನಿಂದ ಸೆಪ್ಟೆಂಬರ್‌ ವರೆಗಿನ ಅವಧಿಯಲ್ಲಿ 880.6 ಮಿಲಿಮೀಟರ್‌ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳ ಕೆಲ ಪ್ರದೇಶಗಳಲ್ಲಿ ಈ ಅವಧಿಯಲ್ಲಿ ಮಳೆಯ ಕೊರತೆ ಉಂಟಾಗುವ ಅಪಾಯವನ್ನೂ ಮುನ್ಸೂಚನೆಯಲ್ಲಿ ನೀಡಲಾಗಿದೆ.

ಇದನ್ನೂ ಓದಿ :ಅವಳಿ ಕೊಲೆ ಪ್ರಕರಣ : ಬಂಧಿಸಲು ಹೋದ ಪೋಲೀಸರ ಮೇಲೆ ದಾಳಿ, ಆರೋಪಿ ಕಾಲಿಗೆ ಗುಂಡೇಟು

ಕರ್ನಾಟಕದಲ್ಲಿ ಅಲ್ಪ ಕೊರತೆ: ಜುಲೈನಿಂದ ಆಗಸ್ಟ್‌ ಅವಧಿಯಲ್ಲಿ ಕರ್ನಾಟಕದಲ್ಲಿ ಅಲ್ಪ ಕೊರತೆ ಉಂಟಾಗಲಿದೆ ಎಂದು ಉಲ್ಲೇಖೀಸಲಾಗಿದೆ. ಕರ್ನಾಟಕದ ಒಳನಾಡಿನ ಕೆಲವು ಕಡೆಗಳಲ್ಲಿ ಮಾತ್ರ ಒಂದಷ್ಟು ಕೊರತೆ ಕಾಣಿಸಿಕೊಳ್ಳಬಹುದು. ಒಟ್ಟಾರೆಯಾಗಿ ಹೇಳುವುದಿದ್ದರೆ ಜೂನ್‌ನಿಂದ ಸೆಪ್ಟೆಂಬರ್‌ ಮುಕ್ತಾಯದ ವರೆಗೆ ದೇಶ ಉತ್ತಮ ಮುಂಗಾರು ಮಳೆಯನ್ನು ಹೊಂದಲಿದೆ. ಜುಲೈನಲ್ಲಿ ಶೇ.97, ಆಗಸ್ಟ್‌ನಲ್ಲಿ ಶೇ.99ರಷ್ಟು ಮಳೆಯಾಗುವ ನಿರೀಕ್ಷೆ ಇದೆ.

ಅಸ್ತವ್ಯಸ್ತ: ಹವಾಮಾನ ಬದಲಾವಣೆಯಿಂದಾಗಿ ದೇಶದಲ್ಲಿ ಮುಂಗಾರು ಬಲವರ್ಧನೆಯಾಗಿದೆ. ಆದರೆ, ಅಸ್ತವ್ಯಸ್ತವಾಗಿ ಇರುತ್ತಿದೆ ಎಂದು “ಅರ್ತ್‌ ಸಿಸ್ಟಮ್‌ ಡೈನಾಮಿಕ್ಸ್‌’ ಎಂಬ ನಿಯತಕಾಲಿಕದಲ್ಲಿ ಬರೆಯಲಾಗಿರುವ ಲೇಖನದಲ್ಲಿ ಪ್ರಸ್ತಾಪಿಸಲಾಗಿದೆ. ಜಗತ್ತಿನ 30 ರಾಷ್ಟ್ರಗಳ ಹವಾಮಾನ ವ್ಯವಸ್ಥೆ ಅಧ್ಯಯನ ನಡೆಸಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಲೇಖಕ ಜರ್ಮನಿಯ ಅಂಜ ಕೇಟ್ಸ್‌ಬರ್ಜರ್‌ ಪ್ರತಿಪಾದಿಸಿದ್ದಾರೆ. 1950ರಿಂದ ಮೊದಲ್ಗೊಂಡು ಮಾನವ ಪ್ರಕೃತಿಯ ವ್ಯವಸ್ಥೆ ಮೇಲೆ ಹತೋಟಿ ಸಾಧಿಸುವ ಪ್ರಯತ್ನ ಶುರು ಮಾಡಿದ್ದಾನೆ. ಇದರಿಂದಾಗಿ ಅದು ಹಲವು ರೀತಿಯಲ್ಲಿ ಪ್ರತಿಕೂಲ ಪರಿಣಾಮಗಳನ್ನು ಉಂಟು ಮಾಡಿದೆ ಎಂದು ಲೇಖನದಲ್ಲಿ ಉಲ್ಲೇಖೀಸಲಾಗಿದೆ.

ಹಿಂದಿನ ಮಳೆ ಪ್ರಮಾಣ
2018 – ಶೇ.103
2019 – ಶೇ.110
2020 – ಶೇ.109
2021 – ಶೇ.103

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.