ಸೇತುವೆ ಮೇಲೆ ಹಳಿ ತಪ್ಪಿದ ಸರಕು ಸಾಗಣೆ ರೈಲು, ನದಿಗೆ ಬಿದ್ದ ಒಂಬತ್ತು ಬೋಗಿ…
ಕಳೆದ ಎರಡು ದಿನಗಳಿಂದ ಟಾಲ್ಚೆರ್ ಪ್ರದೇಶದಲ್ಲಿ ದಾಖಲೆಯ 394 ಮಿಲಿ ಮೀಟರ್ ಮಳೆಯಾಗಿತ್ತು.
Team Udayavani, Sep 14, 2021, 3:20 PM IST
ಭುವನೇಶ್ವರ್: ಸರಕು ಸಾಗಣೆ ರೈಲೊಂದು ಹಳಿ ತಪ್ಪಿದ ಪರಿಣಾಮ ಒಂಬತ್ತು ಬೋಗಿಗಳು ನದಿಗೆ ಬಿದ್ದಿರುವ ಘಟನೆ ಒಡಿಶಾದ ಆ್ಯಂಗುಲ್-ಟಾಲ್ಚೆರ್ ರೈಲ್ವೆ ಮಾರ್ಗದಲ್ಲಿ ಮಂಗಳವಾರ(ಸೆಪ್ಟೆಂಬರ್ 14) ಮುಂಜಾನೆ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:‘ಡಾಗ್ ಆಫ್ ದಿ ಮಂತ್’: ಫೀಲ್ಡಿಂಗ್ ಮಾಡಿದ ನಾಯಿಗೆ ವಿಶೇಷ ಪುರಸ್ಕಾರ ನೀಡಿದ ಐಸಿಸಿ
ಗೋಧಿ ಚೀಲ ತುಂಬಿದ್ದ ಸರಕು ಸಾಗಣೆ ರೈಲು ಮುಂಜಾನೆ 2.30ರ ಹೊತ್ತಿಗೆ ಹಳಿ ತಪ್ಪಿದ್ದು, ಒಂಬತ್ತು ಬೋಗಿಗಳು ನದಿಗೆ ಬಿದ್ದಿದ್ದು, ಘಟನೆಯಲ್ಲಿ ರೈಲಿನ ಚಾಲಕ, ಇತರ ಸಿಬಂದಿಗಳಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿ ವಿವರಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆ ಸುರಿಯುತ್ತಿದ್ದು, ಈ ಕಾರಣದಿಂದ ಫಿರೋಜ್ ಪುರ್ ನಿಂದ ಖುದ್ರಾಗೆ ತೆರಳುತ್ತಿದ್ದ ಸರಕು ಸಾಗಣೆ ರೈಲು ನಂದಿರಾ ಸೇತುವೆ ಬಳಿ ಹಳಿ ತಪ್ಪಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಟಾಲ್ಚೆರ್ ಪ್ರದೇಶದಲ್ಲಿ ದಾಖಲೆಯ 394 ಮಿಲಿ ಮೀಟರ್ ಮಳೆಯಾಗಿತ್ತು. ರೈಲು ಹಳಿತಪ್ಪಿದ ಘಟನೆ ನಡೆದ ನಂತರ ಈ ಮಾರ್ಗದಲ್ಲಿ ಸಂಚರಿಸುವ 12 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ