ರಾಹುಲ್ ಗಾಂಧಿ ಕ್ಷಮೆಗೆ ಬಿಜೆಪಿ ಪಟ್ಟು ; ಸಂಸತ್ ಕಲಾಪ ಇಂದೂ ವ್ಯರ್ಥ
ಜಿದ್ದಿಗೆ ಜಿದ್ದು ; ರಾಜ್ಯಸಭೆ ಮತ್ತು ಲೋಕಸಭೆ ಕಲಾಪ ಮುಂದೂಡಿಕೆ
Team Udayavani, Mar 16, 2023, 3:18 PM IST
ನವದೆಹಲಿ: ದ್ವಿತೀಯಾರ್ಧದ ಬಜೆಟ್ ಅಧಿವೇಶನದಲ್ಲಿ ಸರಕಾರ ಮತ್ತು ವಿರೋಧ ಪಕ್ಷಗಳ ಹಗ್ಗಜಗ್ಗಾಟದಿಂದ ಎಲ್ಲ ಕೆಲಸಗಳು ಸ್ಥಗಿತಗೊಳ್ಳುವ ಲಕ್ಷಣ ಕಂಡು ಬಂದಿದೆ. ಬುಧವಾರದ ದಿನವಿಡೀ ಮುಂದೂಡಲ್ಪಟ್ಟ ನಂತರ, ರಾಜ್ಯಸಭೆ ಮತ್ತು ಲೋಕಸಭೆಯು ಕೇಂದ್ರ ಬಜೆಟ್ 2023 ಕುರಿತು ಚರ್ಚಿಸಲು ಪುನಃ ಸೇರಿದ ಬಳಿಕ ಗುರುವಾರವೂ ಎರಡೂ ಕಡೆಯ ಪ್ರತಿಭಟನೆಯಿಂದಾಗಿ ಉಭಯ ಸದನಗಳ ಕಲಾಪವನ್ನು ಶುಕ್ರವಾರ 11 ಗಂಟೆಗೆ ಮುಂದೂಡಲಾಗಿದೆ.
ಅದಾನಿ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಪ್ರತಿಪಕ್ಷಗಳು ಬೇಡಿಕೆಯನ್ನು ಎತ್ತಿದಾಗ, ಆಡಳಿತ ಪಕ್ಷಗಳು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಲಂಡನ್ನಲ್ಲಿ ಮಾಡಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.
ಸದನದೊಳಗೆ ಮಾತನಾಡುತ್ತೇನೆ
”ಅವರು ನನಗೆ ಅವಕಾಶ ನೀಡಿದರೆ ನಾನು ಸದನದೊಳಗೆ ಮಾತನಾಡುತ್ತೇನೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕ್ಷಮೆಯಾಚನೆಗೆ ಬಿಜೆಪಿಯ ಬೇಡಿಕೆಗಳ ಕುರಿತು ಪ್ರತಿಕ್ರಿಯಿಸಿ “ನಾನು ಯಾವುದೇ ಭಾರತ ವಿರೋಧಿ ಭಾಷಣ ಮಾಡಿಲ್ಲ”ಎಂದರು.
ಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಸದಸ್ಯರು ಸ್ಪೀಕರ್ ಪೀಠದ ಸುತ್ತ ಕಪ್ಪು ರಿಬ್ಬನ್ನಿಂದ ಬಾಯಿ ಮುಚ್ಚಿಕೊಂಡು ಪ್ರತಿಭಟನೆ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಕಿರಣ್ ರಿಜಿಜು, ರಾಹುಲ್ ಗಾಂಧಿ ಯುಕೆಯಲ್ಲಿ ಸುಳ್ಳು ಹೇಳಿದ್ದಾರೆ ಮತ್ತು ರಾಷ್ಟ್ರವನ್ನು ಅವಮಾನಿಸಿದ್ದಾರೆ. ಈ ದೇಶದಲ್ಲಿ ಹೆಚ್ಚು ಮಾತನಾಡುವ ಮತ್ತು ಹಗಲು ರಾತ್ರಿ ಸರ್ಕಾರವನ್ನು ಗುರಿಯಾಗಿಸುವ ವ್ಯಕ್ತಿ, ಭಾರತದಲ್ಲಿ ಮಾತನಾಡಲು ಸ್ವಾತಂತ್ರ್ಯವಿಲ್ಲ ಎಂದು ವಿದೇಶದಲ್ಲಿ ಹೇಳುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ