ಸೋಂಕಿನಿಂದ ಸಾವನ್ನಪ್ಪಿದವರ ಅಸ್ಥಿ 15 ದಿನಗಳೊಳಗೆ ಪಡೆಯದಿದ್ದಲ್ಲಿ ಸರ್ಕಾರದಿಂದಲೇ ವಿಸರ್ಜನೆ
Team Udayavani, May 22, 2021, 7:25 PM IST
ಬೆಂಗಳೂರು : ಕೋವಿಡ್ ಸೋಂಕಿನಿಂದ ಪ್ರಾಣ ಕಳೆದುಕೊಂಡವರ ಅಂತಿಮ ಕ್ರಿಯೆಯ ನಂತರದಲ್ಲಿ ಸಾವಿರಾರು ಜನರ ಅಸ್ಥಿಗಳು ಹಿಂಪಡೆಯದೆ ಚಿತಾಗಾರದಲ್ಲಿ ಹಾಗೇ ಉಳಿದುಕೊಂಡಿವೆ. ಇಂಥಹ ಚಿತಾಭಸ್ಮವನ್ನ 15 ದಿನಗಳ ನಂತರ ಸರ್ಕಾರವೇ ಗೌರವಪೂರ್ವಕವಾಗಿ ವಿಸರ್ಜನೆ ಮಾಡಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು ,”ನಾನಾ ಕಾರಣಗಳಿಂದ ಸೋಂಕಿನಿಂದ ಸಾವನ್ನಪ್ಪಿದವರ ಚಿತಾಭಸ್ಮವನ್ನ ಅವರ ಕುಟುಂಬಸ್ಥರು ಇಂದಿಗೂ ಚಿತಾಗಾರದಿಂದ ತೆಗದುಕೊಂಡು ಹೋಗಿಲ್ಲ. ಈಗಾಗಲೇ ಸಾವಿರಕ್ಕೂ ಅಧಿಕ ಅಸ್ಥಿಗಳು ಚಿತಾಗಾರಗಳಲ್ಲಿ ಉಳಿದುಕೊಂಡಿವೆ. ಸಾಮಾನ್ಯವಾಗಿ ಒಂದೆರಡು ದಿನಗಳ ನಂತರ ಅವರ ಸಂಬಂಧಿಗಳು ಬಂದು ಅಸ್ಥಿ ತೆಗೆದುಕೊಂಡು ಹೋಗುತ್ತಾರೆ. ಆದರೆ ಕೆಲ ಪ್ರಕರಣಗಳಲ್ಲಿ ಹಲವು ದಿನಗಳಿಂದ ಸಂಬಂಧಿಸಿದವರು ಬರದೆ ಅನೇಕ ಅಸ್ಥಿಗಳು ಚಿತಾಗಾರಗಳಲ್ಲಿ ಹಾಗೇ ಉಳಿದುಕೊಂಡಿವೆ. ಈಗಾಗಲೇ ಸಂಬಂಧಿಸಿದವರನ್ನ ಕರೆ ಮಾಡಿ ಸಂಪರ್ಕಿಸಲು ಪ್ರಯತ್ನಿಸಲಾಗಿದ್ದು, ಅವರ ಫೋನ್ ನಂಬರ್ ಸ್ವಿಚ್ ಆಫ್ ಆಗಿವೆ. ಹೀಗಾಗಿ ಆ ಚಿತಾಭಸ್ಮವನ್ನ ಸರ್ಕಾರವೇ ಗೌರವಪೂರ್ವಕವಾಗಿ ವಿಸರ್ಜನೆ ಮಾಡುವ ನಿರ್ಧಾರ ಮಾಡಿದೆ”, ಎಂದು ತಿಳಿಸಿದರು.
ಇದನ್ನೂ ಓದಿ :ಕೋವಿಡ್ ಸಂಕಷ್ಟದಲ್ಲಿ ಮಗ ಮನೆಬಿಟ್ಟು ಹೋದರೂ ಎದೆಗುಂದದ ವೃದ್ಧೆಯ ಸ್ವಾವಲಂಬಿ ಬದುಕು
ಈ ಕುರಿತಂತೆ ಗಡುವು ನಿಗದಿಪಡಿಸಿದ್ದರ ಕುರಿತು ಮಾತನಾಡಿದ ಸಚಿವರು,”ಇನ್ನು ಮುಂದೆ ಸಂಬಂಧಿಸಿದವರ ಅಸ್ಥಿಗಳನ್ನ 15 ದಿನಗಳ ಕಾಲ ಕುಟುಂಬಸ್ಥರಿಗೆ ಹಸ್ತಾಂತರಿಸುವದಕ್ಕಾಗಿ ಕಾಯ್ದಿರಿಸಲಾಗುತ್ತದೆ. ಅಷ್ಟರೊಳಗೆ ಸಂಬಂಧಪಟ್ಟವರು ಬಂದು ತೆಗೆದುಕೊಂಡು ಹೋಗದಿದ್ದಲ್ಲಿ, ಅವರ ಪರವಾಗಿ ಸರ್ಕಾರವೇ ವಿಧಿವತ್ತಾಗಿ ಆ ಅಸ್ಥಿಗಳನ್ನ ನೀರಿನಲ್ಲಿ ವಿಸರ್ಜಿಸುವುದಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಹೀಗಾಗಿ 15 ದಿನಗಳೊಳಗೆ ಬಂದು ತಮ್ಮವರ ಚಿತಾಭಸ್ಮವನ್ನ ಪಡೆದುಕೊಂಡು ಹೋಗಬೇಕು,” ಎಂದು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ