ಛತ್ರಪತಿ ಶಿವಾಜಿ ಕರ್ನಾಟಕದ ಹೊಯ್ಸಳ ವಂಶಸ್ಥ :ಡಿಸಿಎಂ ಕಾರಜೋಳ


Team Udayavani, Mar 2, 2021, 7:45 PM IST

ಛತ್ರಪತಿ ಶಿವಾಜಿ ಕರ್ನಾಟಕದ ಹೊಯ್ಸಳ ವಂಶಸ್ಥ :ಡಿಸಿಎಂ ಕಾರಜೋಳ

ವಿಜಯಪುರ : ಛತ್ರಪತಿ ಶಿವಾಜಿ ಕರ್ನಾಟಕದ ಮೂಲದ ಕನ್ನಡದ ಶೂರ ಅರಸರಾಗಿದ್ದರು. ಇತಿಹಾಸದ ಆಳಕ್ಕೆ ಇಳಿದರೆ ಶಿವಾಜಿ ಕರ್ನಾಟಕದ ಹೊಯ್ಸಳ ವಂಶಸ್ಥರು ಎಂಬ ಸತ್ಯ ಹೊರ ಬೀಳುತ್ತದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮಿತ್ರ ಮಂಡಳಿ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಶಿವಾಜಿ ಜನಿಸದೇ ಇದ್ದಿದ್ದರೆ ಭಾರತದಲ್ಲಿ ಹಿಂದೂ ಧರ್ಮ ಎಂಬುದೇ ಅಸ್ತಿತ್ವದಲ್ಲಿ ಇರುತ್ತಿರಲಿಲ್ಲ. ಶಿವಾಜಿ ಮಹಾರಾಜರ ಹೆಸರು ದೇಶದ 130 ಕೋಟಿ ಜನಸಂಖ್ಯೆಗೆ ಅರಿಯುವ ಅವಗತ್ಯವಿದ್ದು, ಇದಕ್ಕಾಗಿ ದೇಶಾದ್ಯಂತ ಕಾರ್ಯಕ್ರಮ ಆಯೋಜಿಸಬೇಕು ಎಂದರು.

ಶಿವಾಜಿ ಮಹಾರಾಜರು ಕನ್ನಡಿಗರು, ಜೊತೆಗೆ ಕರ್ನಾಟಕದಲ್ಲಿರುವ ಮರಾಠಾ ಜಾತಿಯ ಜನರೂ ಕನ್ನಡಿಗರೇ ಆಗಿದ್ದಾರೆ. ಶಿವಾಜಿ ಮಹಾರಾಜರು ತಮಗಾಗಿ ಸಾಮ್ರಾಜ್ಯ ಕಟ್ಟಲಿಲ್ಲ. ದೇಶ ರಕ್ಷಣೆಗಾಗಿ, ಹಿಂದು ಧರ್ಮದ ರಕ್ಷಣೆಗಾಗಿ ಸಾಮ್ರಾಜ್ಯ ಕಟ್ಟಿದ ಮಹತ್ವಕಾಂಕ್ಷೆಯ ಅರಸರಾಗಿದ್ದರು ಎಂದು ಬಣ್ಣಿಸಿದರು.

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಮಾತನಾಡಿ, ಭಾರತ ದೇಶದಲ್ಲಿ ಹಿಂದೂ ಧರ್ಮದ ರಕ್ಷಣೆಗಾಗಿ ಮೂರು ಜನಾಂಗದವರ ಕೊಡುಗೆ ಅತ್ಯಮೂಲ್ಯವಾಗಿದೆ. ಮರಾಠಾರು, ಶಿಖ್ಖರು ಹಾಗೂ ರಜಪೂತರು ಹಿಂದು ಧರ್ಮವನ್ನು ಮುಸಲ್ಮಾನರ ದಬ್ಬಾಳಿಕೆಯಿಂದ ಉಳಿಸಿದರು. ಹೀಗಾಗಿ ಇಂತಹ ಸಮುದಾಯಗಳ ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ಬೆನ್ನೆಲುಬಾಗಿ ನಿಲ್ಲಬೇಕಿದೆ ಎಂದರು.

ಇದನ್ನೂ ಓದಿ :2027ಕ್ಕೆ ಬಾಹ್ಯಾಕಾಶದಲ್ಲಿ ನಿರ್ಮಾಣವಾಗಲಿದೆ ತೇಲುವ ರೆಸಾರ್ಟ್‌!

ಕಾಖಂಡಕಿಯ ಗುರುದೇವಾಶ್ರಮದ ಸಂದೀಪ ಮಹೋದಯರು, ಹಿರೇಮಠದ ಸಿದ್ದರಾಮಯ್ಯಶ್ರೀ ಸಾನ್ನಿಧ್ಯ ವಹಿಸಿದ್ದರು. ಗ್ರಾಮದ ಹಿರಿಯ ರಾಮನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಯುವ ಧುರೀಣ ಗುರುಲಿಂಗಪ್ಪ ಅಂಗಡಿ, ಅಪ್ಪುಗೌಡ ಪಾಟೀಲ, ಅರ್ಜುನ ದೇವಕ್ಕಿ, ಕಾಖಂಡಕಿ ಗ್ರಾ.ಪಂ. ಅಧ್ಯಕ್ಷ ಜಾನುಬಾ ಸಿಂಧೆ, ಜಿ.ಪಂ. ಮಾಜಿ ಸದಸ್ಯ ಮುತ್ತಪ್ಪ ಶಿವನ್ನವರ, ಮರಾಠಾ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯಕುಮಾರ ಚವ್ಹಾಣ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಜಿಲ್ಲಾಧ್ಯಕ್ಷ ಭೀಮಾಶಂಕರ ಶಿವಾಳಕರ, ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ವಿಜಯಕುಮಾರ ಘಾಟಗೆ, ಬಿ.ಟಿ.ತರಸೆ, ಸುಭಾಶ ವಿಕ್ರಮ, ಜ್ಯೋತಿಬಾ ಮೋರೆ, ವಿಜಯಪುರ ತಾಲೂಕು ಮರಾಠಾ ಸಮಾಜದ ಅಧ್ಯಕ್ಷ ರಾಮು ಜಾಧವ, ಕೃಷ್ಣ ಜಾಧವ ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರರಾಗಿ ಆಯ್ಕೆಯಾಗಿರುವ ಕಾಖಂಡಕಿ ಗ್ರಾಮದವರಾದ ಆರ್ ಕವಿತಾ ಅವರನ್ನು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ, ಗುದೇವಾಶ್ರಮದ ಸಂದೀಪ ಮಹೋದಯ, ಸಮಾಜದ ಮುಖಂಡ ರಾಮು ಜಾಧವ ಸನ್ಮಾನಿಸಿ ಗೌರವಿಸಿದರು.

ಇದಕ್ಕೂ ಮೊದಲು ಕಾಖಂಡಕಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ನಿಯೋಜಿತ ವೃತ್ತದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಮತ್ತಿತರರು ಭೂಮಿ ಪೂಜೆ ನೆರವೇರಿಸಿದರು.
ವಸಂತ ಜಗತಾಪ ಸ್ವಾಗತಿಸಿದರೆ, ಅಡವಯ್ಯ ಹಿರೇಮಠ ನಿರೂಪಿಸಿದರು. ಸುರೇಶ ಗೌಡಪ್ಪಗೋಳ ವಂದಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.