ಪಿಎಂ ಸ್ವಾಸ್ಥ್ಯ ನಿಧಿ ಸ್ಥಾಪನೆಗೆ ಕೇಂದ್ರ ಸಂಪುಟ ಅಸ್ತು: ನಿರ್ವಹಣೆ ಹೊಣೆ ಆರೋಗ್ಯ ಇಲಾಖೆಗೆ
Team Udayavani, Mar 10, 2021, 8:35 PM IST
ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳಿಗಾಗಿ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ನಿಧಿ (ಪಿಎಂಎಸ್ಎಸ್ಎನ್) ಎಂಬ ಮೀಸಲು ನಿಧಿಯೊಂದನ್ನು ಸ್ಥಾಪಿಸುವ ಪ್ರಸ್ತಾವನೆಗೆ ಬುಧವಾರದಂದು ಪ್ರಧಾನಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಶಾಶ್ವತ ಹಾಗೂ ಮೀಸಲು ನಿಧಿಯಾಗಿರುವುದು ಇದರ ವಿಶೇಷ.
2007ರ ಹಣಕಾಸು ಕಾಯ್ದೆ ಪ್ರಕಾರ ಜಾರಿಗೊಳಿಸಲಾಗಿರುವ ಶಿಕ್ಷಣ ಮತ್ತು ಆರೋಗ್ಯ ಸೆಸ್ ಮೂಲಕ ಸಂಗ್ರಹವಾಗುವ ಹಣವನ್ನು ಈ ನಿಧಿಯಲ್ಲಿ ಸಂಗ್ರಹಿಸಲಾಗುತ್ತದೆ. ಅದನ್ನು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆಯುಷ್ಮಾನ್ ಭಾರತ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿಎಂಜೆಎವೈ), ಆಯುಷ್ಮಾನ್ ಭಾರತ್ – ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು (AB-HWC), ರಾಷ್ಟ್ರೀಯ ಆರೋಗ್ಯ ಮಿಷನ್, ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (ಪಿಎಂಎಸ್ಎಸ್ವೈ), ತುರ್ತು ಚಿಕಿತ್ಸೆ, ಪ್ರಕೃತಿ ವಿಕೋಪ ಸಿದ್ಧತೆ-ಆರೋಗ್ಯ ತುರ್ತು ಸಂದರ್ಭಗಳ ಸ್ಪಂದನೆ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಲಾಗುವ ಯಾವುದೇ ಆರೋಗ್ಯ ಸೇವೆಗಳಿಗೆ ಬಳಸಬಹುದಾಗಿದೆ. ನಿಧಿಯ ನಿರ್ವಹಣೆಯ ಜವಾಬ್ದಾರಿಯನ್ನು ಕೇಂದ್ರ ಆರೋಗ್ಯ ಇಲಾಖೆಗೆ ವಹಿಸಲಾಗಿದೆ.
ಇದನ್ನೂ ಓದಿ :ಶಂಕರ್ ಬಿದರಿ ಇ-ಮೇಲ್ ಹ್ಯಾಕ್: ನಾಗಲ್ಯಾಂಡ್ ಮೂಲದ ಮೂವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ