ಗೌಡ ಲಿಂಗಾಯತರಿಗೆ 2ಎ ನೀಡಲು ಒತ್ತಾಯಿಸಿ ಬೆಂಗಳೂರು ಚಲೋಗೆ ನಿರ್ಧಾರ


Team Udayavani, Feb 28, 2021, 8:50 PM IST

ಗೌಡ ಲಿಂಗಾಯತರಿಗೆ 2ಎ ನೀಡಲು ಒತ್ತಾಯಿಸಿ ಬೆಂಗಳೂರು ಚಲೋಗೆ ನಿರ್ಧಾರ

ಚಾಮರಾಜನಗರ: ರಾಜ್ಯ ಸರ್ಕಾರ ಹಳೆಯ ಮೈಸೂರು ಪ್ರಾಂತ್ಯದಲ್ಲಿರುವ ಗೌಡ ಲಿಂಗಾಯತ, ಒಕ್ಕಲಿಗ ಲಿಂಗಾಯತ, ಪಂಚಮಸಾಲಿ ಲಿಂಗಾಯತ ಸಮುದಾಯಗಳನ್ನು ಪ್ರವರ್ಗ2 ಎಗೆ ಸೇರಿಸಬೇಕೆಂದು ಒತ್ತಾಯಿಸಿ ಶೀಘ್ರವೇ ಬೆಂಗಳೂರು ಚಲೋ ನಡೆಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ತಾಲೂಕಿನ ಸಂತೆಮರಹಳ್ಳಿಯಲ್ಲಿರುವ ಕಲ್ಯಾಣಮಂಟಪದಲ್ಲಿ, ಭಾನುವಾರ ರೈತ ಮುಖಂಡ ಅಮ್ಮನಪುರ ಮಲ್ಲೇಶ್ ನೇತೃತ್ವದಲ್ಲಿ ನಡೆದ 2ಎ ಮೀಸಲಾತಿಗಾಗಿ ಗೌಡ ಲಿಂಗಾಯತರ ಪೂರ್ವಭಾವಿ ಸಭೆಯಲ್ಲಿ ಬೆಂಗಳೂರು ಚಲೋ ಸೇರಿದಂತೆ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಭೆ ಆರಂಭದಲ್ಲಿ ಅನೇಕ ಮುಖಂಡರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಪಂಚಮಸಾಲಿ ಸಮುದಾಯದ ಶ್ರೀಗಳು ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ಘೋಷಣೆ ಮಾಡಿದರು. 780 ಕಿ.ಮೀ ಪಾದಯಾತ್ರೆ ಮತ್ತು ಹೋರಾಟದ ನೇತೃತ್ವ ವಹಿಸಿರುವ ಸ್ವಾಮಿಗಳ ಕಾರ್ಯವನ್ನು ಶ್ಲಾಸಿದರು. ಹಳೇ ಮೈಸೂರು ಪ್ರಾಂತ್ಯದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಗೌಡ ಲಿಂಗಾಯತ, ಒಕ್ಕಲಿಗ ಲಿಂಗಾಯತ ಸಮುದಾಯದವರು ಇದ್ದಾರೆ. ಈ ಸಮುದಾಯಕ್ಕೆ 2ಎ ಕೊಡಿಸಲು ಈ ಭಾಗದ ಸ್ವಾಮೀಜಿಗಳು ಸಹ ನೇತೃತ್ವ ವಹಿಸಬೇಕು ಎಂಬ ಒತ್ತಾಯಗಳು ಸಭೆಯಲ್ಲಿ ಕೇಳಿ ಬಂದವು.

ಇದನ್ನೂ ಓದಿ :ವಿಶ್ವ ಚಾಂಪಿಯನ್ ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತೀಯ ಕುಸ್ತಿ ಪಟು ವಿನೇಶ್ ಪೋಗಟ್

ಜಿಲ್ಲೆಯ ಐದು ತಾಲೂಕಗಳಲ್ಲಿಯೂ ವೀರಶೈವ ಲಿಂಗಾಯತ ಮುಖಂಡರ ಸಭೆಗಳನ್ನು ನಡೆಸಿ, ಜಾಗೃತಿ ಮೂಡಿಸುವ ಜೊತೆಗೆ ಆಯಾ ಭಾಗದಲ್ಲಿರುವ ಮಠಾಧೀಶರು ನೇತೃತ್ವ ವಹಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳಬೇಕು. ಅಂತಿಮವಾಗಿ ಸಮಿತಿಯನ್ನು ರಚನೆ ಮಾಡಿಕೊಂಡು, ಸಂಘಟನೆಯನ್ನು ಬಲಿಷ್ಠಗೊಳಿಸಲು ಶ್ರಮ ವಹಿಸಬೇಕು ಎಂದು ತಿಳಿಸಲಾಯಿತು.

ನಂತರ ಈ ಭಾಗದ ಪ್ರಭಾವಿ ಮಠಾಧೀಶರಾದ ಸುತ್ತೂರುಶ್ರಿಗಳು ಹಾಗೂ ಸಿದ್ದಗಂಗಾಶ್ರಿಗಳನ್ನು ಭೇಟಿ ಮಾಡಿ, 2ಎ ಮೀಸಲಾತಿ ಕೊಡಿಸುವಂತೆ ಮನವಿ ಮಾಡಿಕೊಂಡು ಅವರ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಬೆಂಗಳೂರು ಚಲೋ ಮಾಡಲು ಸಭೆಯಲ್ಲಿ ನಿರ್ಣಯಕೊಳ್ಳಲಾಯಿತು.

ರೈತ ಮುಖಂಡ ಮಲ್ಲೇಶ್ ಮಾತನಾಡಿ, ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ವೀರಶೈವ ಲಿಂಗಾಯತರು ಗೌಡ ಲಿಂಗಾಯತ ಒಕ್ಕಲಿಗ ಲಿಂಗಾಯತ, ಪಂಚಮಸಾಲಿ ಎಂಬ ಪದಗಳು ಒಂದೇ ಸಮಾನಾರ್ಥ ಪದಗಳಾಗಿವೆ. ಈಗಾಗಲೇ ಪಂಚಮಸಾಲಿ ಲಿಂಗಾಯತರ ಹೋರಾಟ ತೀವ್ರವಾಗಿದೆ. ಅದೇ ಮಾದರಿಯಲ್ಲಿ ಹಳೇ ಮೈಸೂರು ಪ್ರಾಂತ್ಯದ ಗೌಡ ಲಿಂಗಾಯತರು ಹೋರಾಟ ಮಾಡಿ ಮೀಸಲಾತಿ ಪಡೆದುಕೊಳ್ಳಬೇಕಾಗಿದೆ. ನಮ್ಮ ಹೋರಾಟದ ಕಾವು ರಾಜಧಾನಿಗೆ ತಲುಪಬೇಕಾಗಿದೆ. ಈ ನಿಟ್ಟಿನಲ್ಲಿ ಸಮುದಾಯದವರು ಸಂಘಟಿತರಾಗಿ ನಮ್ಮ ಹಕ್ಕು ಕೇಳಬೇಕಾಗಿದೆ. ನಮ್ಮ ಹೋರಾಟ 2ಎಗೆ ಸೇರಿಸುವವರೆಗೆ ನಿರಂತರವಾಗಿರುತ್ತದೆ. ಇದು ಯಾವುದೇ ರಾಜಕೀಯ ಪಕ್ಷದ ವಿರುದ್ದ ಹೋರಾಟವಲ್ಲ. ನಮ್ಮ ಮುಂದಿನ ಪೀಳಿಗೆಗೆ ಈ ಹೋರಾಟ ಅನಿವಾರ್ಯವಾಗಿದೆ. ಇದಕ್ಕೆ ಸಮುದಾಯ ಸಹಕಾರ ಅಗತ್ಯ ಎಂದರು.

ಇದನ್ನೂ ಓದಿ:ಅಂಬಾನಿ ನಿವಾಸದ ಬಳಿ ಜಿಲೆಟಿನ್‌ ತುಂಬಿದ ಕಾರು ನಿಲ್ಲಿಸಿದ್ದು ನಾವೇ ಎಂದ ಜೈಶ್‌-ಉಲ್‌-ಹಿಂದ್‌

ಇದಲ್ಲದೇ, ಒಟ್ಟಾರೆ ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಓಬಿಸಿ ಪಟ್ಟಿಗೆ ಸೇರಿಸಬೇಕು.
ಸಭೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ಕೋಡಸೋಗೆ ಶಿವಬಸಪ್ಪ, ಅಧ್ಯಕ್ಷ ಮೂಡ್ಲುಪುರ ನಂದೀಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಉಡಿಗಾಲ ಪಾಪಣ್ಣ, ಗ್ರಾ.ಪಂ. ಅಧ್ಯಕ್ಷ ಎಂ.ಪಿ.ಶಂಕರ್, ಉದ್ಯಮಿ ಎಚ್.ಜಿ. ಮಹದೇವಪ್ರಸಾದ್, ಶಿವಪುರ ಸುರೇಶ್, ಬಂಡಹಳ್ಳಿ ಶಿವಕುಮಾರ್, ಡಾ. ಪರಮೇಶ್ವರಪ್ಪ, ಕೊತ್ತಲವಾಡಿ ಕುಮಾರ್, ಕಾವುದವಾಡಿ ಗುರು, ಅರಕವಾಡಿ ಮಹೇಶ್, ಕಮಲೇಶ್, ಅಲೂರು ಪ್ರದೀಪ್, ರಮೇಶ್‌ಬಾಬು, ಎನ್.ಆರ್. ಪುರುಷೋತ್ತಮ್, ಮರಹಳ್ಳಿ ರಾಜು, ಮಹದೇವಸ್ವಾಮಿ, ಶಿವಶಂಕರ್, ದುಗ್ಗಟ್ಟಿ ಶಿವಕುಮಾರ್, ಎಂ.ಪಿ. ಬಸವಣ್ಣ, ನಟರಾಜು, ಸುಭಾಷ್ ಭಾಗವಹಿಸಿದ್ದರು.

ಗೌಡ ಲಿಂಗಾಯತರ ಆಲಸ್ಯ ಕಾರಣ
ಚಾಮರಾಜನಗರ: ಗೌಡ ಲಿಂಗಾಯತ ಸಮುದಾಯವು, ಕುಂಭಕರ್ಣನ ನಿದ್ದೆಯಿಂದ ಎದ್ದು ಬಂದು ತಮಗೆ ಸಿಗಬೇಕಾದ ನ್ಯಾಯಕ್ಕಾಗಿ ಹೋರಾಟ ಮಾಡಬೇಕಾಗಿದೆ ಎಂದು ಅಮ್ಮನಪುರ ಮಲ್ಲೇಶ್ ಹೇಳಿದರು.

ಗೌಡ ಲಿಂಗಾಯತ ಸಮುದಾಯದಿಂದ ಐಎಎಸ್, ಐಪಿಎಸ್ ಅಧಿಕಾರಿಗಳಾಗಿಲ್ಲ. ನಿಗಮ ಮಂಡಳಿಗಳ ಅಧ್ಯಕ್ಷರಿಲ್ಲ, ಸಚಿವ, ಸಂಸದರಿಲ್ಲ. ಇದಕ್ಕೆಲ್ಲ ಕಾರಣ ರಾಜಕೀಯ ಪಕ್ಷಗಳ ನಿರ್ಲಕ್ಷ್ಯ ಹಾಗೂ ಗೌಡ ಲಿಂಗಾಯತರ ಆಲಸ್ಯ ಮನೋಭಾವ ಎಂದು ಅವರು ಹೇಳಿದರು.

ಹಳೆ ಮೈಸೂರು ಭಾಗದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಸಭೆ ನಡೆಸಿ, ಒಟ್ಟಾರೆ ನಿರ್ಣಯಗಳನ್ನು ಕೈಗೊಂಡು, ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಳ್ಳಲಾಗುವುದು. ಬೆಂಗಳೂರಿಗೆ, ಪಾದಯಾತ್ರೆ ಅಥವಾ ಬಸ್‌ಗಳಲ್ಲಿ ತೆರಳಿ, ಧರಣಿ, ಉಪವಾಸ ಸತ್ಯಾಗ್ರಹ ಅಥವಾ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಬಗ್ಗೆ ಎಲ್ಲ ಜಿಲ್ಲಾ ಕೇಂದ್ರಗಳ ಗೌಡ ಲಿಂಗಾಯತರ ಪ್ರಮುಖರ ಅಭಿಪ್ರಾಯಗಳನ್ನು ಪಡೆಯಲಾಗುತ್ತಿದೆ ಎಂದು ಮಲ್ಲೇಶ್ ತಿಳಿಸಿದರು.

ಟಾಪ್ ನ್ಯೂಸ್

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.