ಗೋವಾ ದಲ್ಲಿ ಗ್ರಾ.ಪಂ.ಚುನಾವಣೆ; ಮೀಸಲಾತಿಗೆ ಬದ್ದ ಎಂದ ಸಿಎಂ ಸಾವಂತ್
Team Udayavani, Jul 2, 2022, 4:18 PM IST
ಪಣಜಿ: ಪಂಚಾಯತ್ ಚುನಾವಣೆಯ ಜೊತೆಗೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಎಲ್ಲ 19 ಉಪಜಾತಿಗಳಿಗೆ ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಪ್ರಸಕ್ತ ಪಂಚಾಯತ್ ಚುನಾವಣೆಯಲ್ಲೂ ಒಬಿಸಿಗೆ ಮೀಸಲಾತಿ ನೀಡಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ 8 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿಯ ವಿಮರ್ಶೆಯ ಇ-ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಪ್ರಿಂ ಕೋರ್ಟ ನೀಡಿರುವ ಆದೇಶದಂತೆ ರಾಜ್ಯದಲ್ಲಿ ಒಬಿಸಿಗಳಿಗೆ ಶೇ 27 ಮೀಸಲಾತಿ ನೀಡಲು ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ. ಇದೀಗ ಹೈಕೋರ್ಟ್ ನಿರ್ದೇಶನದಂತೆ ಗೋವಾದಲ್ಲಿ ಅಗಷ್ಟ್ 10 ರಂದು ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ. ಇದಕ್ಕಾಗಿ ಒಬಿಸಿಯ ಎಲ್ಲ ಮಾಹಿತಿಯನ್ನು ಮುಂದಿನ ನಾಲ್ಕೈದು ದಿನಗಳಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ನೀಡಲಾಗುವುದು. ಚುನಾವಣಾ ಆಯೋಗದ ಸೂಚನೆಯಂತೆ ಚುನಾವಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ, ಮಾಜಿ ಶಾಸಕ ಸಿದ್ಧಾರ್ಥ ಕುಂಕೊಳಿಕರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜು ಶ್ರೀವಾಸ್ತವ್ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು?
ಅತ್ಯಾಚಾರ ವಿರೋಧಿಸಿದ ಬ್ಯಾಸ್ಕೆಟ್ಬಾಲ್ ಆಟಗಾರ್ತಿ: 25 ಅಡಿ ಎತ್ತರದಿಂದ ತಳ್ಳಿದ ದುರುಳರು
ಯಾವ ದೂರೂ ಬಂದಿಲ್ಲ: ಜಾಕ್ವೆಲಿನ್ ಪರ ವಕೀಲ
RTO ಅಧಿಕಾರಿ ಮನೆ ಮೇಲೆ ದಾಳಿ: ಆದಾಯಕ್ಕಿಂತ 650 ಪಟ್ಟು ಹೆಚ್ಚು ಮೌಲ್ಯದ ಆಸ್ತಿ ಪತ್ತೆ!
ರೇಪ್ ಕೇಸ್; ಬಿಜೆಪಿ ನಾಯಕ ಶಹನವಾಜ್ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶ
MUST WATCH
ಹೊಸ ಸೇರ್ಪಡೆ
ಸಾವರ್ಕರ್ ದೇಶಪ್ರೇಮಿ ಎಂದು ಯಾಕೆ ಕರೆಯಬೇಕು?: ಸಿದ್ದರಾಮಯ್ಯ
ಫಿಬಾ U-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ಗೆ ಸಕಲ ಸಿದ್ಧತೆ
ರಾಜು ಶ್ರೀವಾಸ್ತವ್ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು?
ಅತ್ಯಾಚಾರ ವಿರೋಧಿಸಿದ ಬ್ಯಾಸ್ಕೆಟ್ಬಾಲ್ ಆಟಗಾರ್ತಿ: 25 ಅಡಿ ಎತ್ತರದಿಂದ ತಳ್ಳಿದ ದುರುಳರು
ದೇಶದಲ್ಲಿ ಮಠಗಳಿಂದ ಶೈಕ್ಷಣಿಕ ಕ್ರಾಂತಿ; ನಿರಂಜನಾನಂದಪುರಿ ಶ್ರೀ