ಗೋವಾ ದಲ್ಲಿ ಗ್ರಾ.ಪಂ.ಚುನಾವಣೆ; ಮೀಸಲಾತಿಗೆ ಬದ್ದ ಎಂದ ಸಿಎಂ ಸಾವಂತ್
Team Udayavani, Jul 2, 2022, 4:18 PM IST
ಪಣಜಿ: ಪಂಚಾಯತ್ ಚುನಾವಣೆಯ ಜೊತೆಗೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಎಲ್ಲ 19 ಉಪಜಾತಿಗಳಿಗೆ ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಪ್ರಸಕ್ತ ಪಂಚಾಯತ್ ಚುನಾವಣೆಯಲ್ಲೂ ಒಬಿಸಿಗೆ ಮೀಸಲಾತಿ ನೀಡಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ 8 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಕೈಗೊಂಡಿರುವ ಅಭಿವೃದ್ಧಿಯ ವಿಮರ್ಶೆಯ ಇ-ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಪ್ರಿಂ ಕೋರ್ಟ ನೀಡಿರುವ ಆದೇಶದಂತೆ ರಾಜ್ಯದಲ್ಲಿ ಒಬಿಸಿಗಳಿಗೆ ಶೇ 27 ಮೀಸಲಾತಿ ನೀಡಲು ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ. ಇದೀಗ ಹೈಕೋರ್ಟ್ ನಿರ್ದೇಶನದಂತೆ ಗೋವಾದಲ್ಲಿ ಅಗಷ್ಟ್ 10 ರಂದು ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದೆ. ಇದಕ್ಕಾಗಿ ಒಬಿಸಿಯ ಎಲ್ಲ ಮಾಹಿತಿಯನ್ನು ಮುಂದಿನ ನಾಲ್ಕೈದು ದಿನಗಳಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ನೀಡಲಾಗುವುದು. ಚುನಾವಣಾ ಆಯೋಗದ ಸೂಚನೆಯಂತೆ ಚುನಾವಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ, ಮಾಜಿ ಶಾಸಕ ಸಿದ್ಧಾರ್ಥ ಕುಂಕೊಳಿಕರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ