JDS ಜಿಲ್ಲಾಧ್ಯಕ್ಷರಿಂದ ಗ್ರಾ.ಪಂ. ನೂತನ ಸದಸ್ಯರಿಗೆ ಹಣ ಹಂಚಿಕೆ: ಫೋಟೋ ವೈರಲ್
Team Udayavani, Jan 25, 2021, 8:14 PM IST
ಹನೂರು (ಚಾಮರಾಜನಗರ) : ಅಧಿಕಾರಕ್ಕಾಗಿ ಧರ್ಮಸ್ಥಳದ ಮಂಜುನಾಥನ ದೇವಾಲಯದ ಮುಂದೆ ಆಣೆ -ಪ್ರಮಾಣದ ವಿಡಿಯೋ ಒಂದೆಡೆಯಾದರೆ ಮತ್ತೊಂದೆಡೆ ದೇವಾಲಯದ ಮುಂಭಾಗ ಹಣದ ಕಂತೆಗಳನ್ನು ನೀಡುತ್ತಿರುವ ಭಾವಚಿತ್ರಗಳು ವೈರಲ್ ಆಗಿರುವುದು ತಾಲೂಕಿನ ರಾಜಕೀಯದಲ್ಲಿ ಕುರುಡು ಕಾಂಛಾಣದ ನರ್ತನಕ್ಕೆ ಸಿಕ್ಕಂತಹ ಪುರಾವೆಯಾಗಿದೆ.
ತಾಲೂಕಿನ ಕೌದಳ್ಳಿ ಗ್ರಾಮದ ನಾಯಕರ ಬಡಾವಣೆಯ ಹುಚ್ಚಪ್ಪನ ದೇವಾಲಯದ ಮುಂಭಾಗ ಗ್ರಾಮ ಪಂಚಾಯಿತಿಯ ನೂತನ ಸದಸ್ಯರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ್ ಹಣದ ಕಂತೆಗಳನ್ನು ವಿತರಿಸುತ್ತಿರುವ ಭಾವಚಿತ್ರಗಳು ವೈರಲ್ ಆಗಿವೆ.
ಚುನಾವಣೆ ಹಿನ್ನೆಲೆ ಹಣ ಹಂಚಿಕೆಯೇ?: ಕೌದಳ್ಳಿ ಗ್ರಾಮ ಪಂಚಾಯಿತಿಯಲ್ಲಿ 23 ಸದಸ್ಯ ಬಲಹೊಂದಿದ್ದು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 15 ಬಿಜೆಪಿ ಬೆಂಬಲಿತ 6 ಮತ್ತು ಜೆಡಿಎಸ್ ಬೆಂಬಲಿತರು 2 ಗೆಲುವು ಸಾಧಿಸಿದ್ದಾರೆ. ಈ ಪಂಚಾಯಿತಿಗೆ ಅಧ್ಯಕ್ಷ ಹುದ್ದೆ ಸಾಮಾನ್ಯ ವರ್ಗಕ್ಕೂ ಉಪಾಧ್ಯಕ್ಷ ಹುದ್ದೆ ಪರಿಶಿಷ್ಠ ಜಾತಿ ಮಹಿಳೆಗೂ ಮೀಸಲಾಗಿದ್ದು ಜನವರಿ 28ರಂದು ಚುನಾವಣೆ ನಿಗದಿಯಾಗಿದೆ. ಈ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತರಿಗೆ ಬಹುಮತ ಲಭಿಸಿದೆ. ಆದರೂ ಕೂಡ ಹೇಗಾದರೂ ಮಾಡಿ ಅಧಿಕಾರ ಹಿಡಿಯಲೇ ಬೇಕು ಎಂಬ ಹಠಕ್ಕೆ ಬಿದ್ದಿರುವ ಮಂಜುನಾಥ್ ಮಲ್ಲಯ್ಯನಪುರ ರವಿ, ಪುದುನಗರ ಟಿ.ಎಂ.ನಾರಾಯಣ, ಎಂ.ಟಿ.ದೊಡ್ಡಿ ಅನಿಲ್ ಕುಮಾರ್ ಸೇರಿದಂತೆ ಕೆಲ ಸದಸ್ಯರಿಗೆ ಹಣವನ್ನು ನೀಡಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಬಹುಮತಕ್ಕೆ ಬೇಕಾದ ಇನ್ನಷ್ಟು ಸದಸ್ಯರನ್ನು ಮೈತ್ರಿ ಪಕ್ಷಕ್ಕೆ ಕರೆತರುವಂತೆ ಸೂಚನೆ ನೀಡಿ ನೂತನ ಸದಸ್ಯರುಗಳಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ಇದನ್ನೂ ಓದಿ:ಸೆನ್ಸೆಕ್ಸ್ 531 ಅಂಕ ಕುಸಿತ, ನಿಫ್ಟಿ 133 ಅಂಕ ಇಳಿಕೆ ; IT ಕ್ಷೇತ್ರದ ಷೇರುಗಳಿಗೆ ನಷ್ಟ
ಕ್ರಮಕ್ಕೆ ಸೂಚಿಸಿದ ಉಸ್ತುವಾರಿ ಸಚಿವರು: ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಮತ್ತು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು 2 ದಿನಗಳ ಜಿಲ್ಲಾ ಪ್ರವಾಸ ಕೈಗೊಂಡಿರುವ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ಈ ಭಾವಚಿತ್ರಗಳು ಬಂದಿದ್ದು ಈ ಸಂಬಂಧ ಕೂಡಲೇ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಹಣ ವಿತರಿಸುತ್ತಿರುವ ಬಗ್ಗೆ ತಮ್ಮ ಗಮನಕ್ಕೂ ಬಂದಿದ್ದು ಗ್ರಾಮಕ್ಕೆ ಭೇಟಿನೀಡಿ ಮುಖಂಡರು ಮತ್ತು ಗ್ರಾಮಸ್ಥರಿಂದ ಅಗತ್ಯ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಗ್ರಾಮಸ್ಥರು ದೂರು ನೀಡಿದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವ ಬಗ್ಗೆ ಕ್ರಮವಹಿಸಲಾಗಿದೆ.
– ಜಿ.ಎಚ್. ನಾಗರಾಜು, ತಹಸೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್