ಒಂದೂವರೆ ವರ್ಷದ ಬಳಿಕ ಕಲಬುರಗಿಗೆ ಖರ್ಗೆ:ಅದ್ಧೂರಿ ಸ್ವಾಗತ
Team Udayavani, Oct 2, 2021, 2:51 PM IST
ಕಲಬುರಗಿ: ರಾಜ್ಯಸಭಾ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶನಿವಾರ ಭರ್ಜರಿ ಸ್ವಾಗತ ನೀಡಲಾಗಿದೆ.
ಕಳೆದ ವರ್ಷ ರಾಜ್ಯಸಭಾ ಸದಸ್ಯರಾದ ಬಳಿಕ ಖರ್ಗೆ ಸಂಸತ್ತಿನ ಮೇಲ್ಮನೆಯ ಅಧಿಕೃತ ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿದ್ದರು. ತದನಂತರ ಅವರು ಕಲಬುರಗಿ ಜಿಲ್ಲೆಗೆ ಆಗಮಿಸರಲಿಲ್ಲ.
ಸುಮಾರು ಒಂದೂವರೆ ವರ್ಷದ ಬಳಿಕ ಖರ್ಗೆ ಅವರು ಕಲಬುರಗಿಗೆ ಬಂದಿರುವ ಹಿನ್ನಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅದ್ಧೂರಿಯಾಗಿ ಸ್ವಾಗತ ಕೋರಿ ಅಭಿನಂದನಾ ಕಾರ್ಯಕ್ರಮ ಆಯೋಜಸಲಾಗಿದೆ.
ಬೆಂಗಳೂರಿನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಖರ್ಗೆ ಅವರನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬರ ಮಾಡಿಕೊಂಡರು. ಅಲ್ಲಿಂದ ಬೃಹತ್ ಮೆರವಣಿಗೆಯಲ್ಲಿ ಅವರನ್ನು ಭವಾನಿ ಕಲ್ಯಾಣ ಮಂಟಪದವರಿಗೆ ಕರೆದುಕೊಂಡು ಬರಲಾಯಿತು.
ಮರೆವಣಿಗೆಯುದ್ಧಕ್ಕೂ ಪುಷ್ಪಗಳು ಮಳೆಗೆರೆದು, ಜೆಸಿಬಿ ಮೂಲಕ ಬೃಹತ್ ಮಾಲಾರ್ಪಣೆ ಮಾಡಿದ ನೂರಾರು ಕಾರ್ಯಕರ್ತರು ಜಯ ಘೋಷಗಳನ್ನು ಕೂಗುತ್ತಾ ಕುಣಿದು ಕುಪ್ಪಳಿಸಿದರು.
ಅಭಿನಂದನಾ ಕಾರ್ಯಕ್ರಮದಲ್ಲಿ ಕಲಬುರಗಿ, ಯಾದಗಿರಿ, ಬೀದರ್ ಹಾಗೂ ರಾಯಚೂರು ಸೇರಿ ವಿವಿಧ ಜಿಲ್ಲೆಗಳ ನಾಯಕರು, ಮುಖಂಡರು ಹಾಗೂ ಪ್ರಮುಖರು ಪಾಲ್ಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ