ಇಂದು ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ಗೆ ಶಂಕು
ಮಾ.12ರಂದು ಹೊಸ ವಂದೇಭಾರತ್ ರೈಲಿಗೂ ಚಾಲನೆ
Team Udayavani, Mar 10, 2024, 6:13 AM IST
ಹೊಸದಿಲ್ಲಿ: ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಲ್ಲಿ ಹೊಸ ಟರ್ಮಿನಲ್ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ಸುಮಾರು 908 ಕೋಟಿ ರೂ. ವೆಚ್ಚದಲ್ಲಿ ಹೊಸ ಟರ್ಮಿನಲ್ಗಳನ್ನು ನಿರ್ಮಾಣ ಮಾಡಲಾಗುತ್ತದೆ. ಇದಲ್ಲದೇ ದೇಶಾದ್ಯಂತ ವಿಮಾನ ನಿಲ್ದಾಣಗಳ ವಿಸ್ತರಣೆ ಸಹಿತ 15 ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ.
ವಂದೇ ಭಾರತ್ ರೈಲಿಗೆ ಚಾಲನೆ
ಮಾ.12ರಂದು ಕರ್ನಾಟಕದ 7ನೇ ವಂದೇ ಭಾರತ್ ರೈಲಿಗೂ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ಈ ರೈಲು ಬೆಂಗಳೂರು ಮತ್ತು ಕಲಬುರಗಿಯ ನಡುವೆ ಕಾರ್ಯಾಚರಣೆ ನಡೆಸಲಿದ್ದು, ಇದು ಕಲ್ಯಾಣ ಕರ್ನಾಟಕ ವಿಭಾಗದ ಮೊದಲ ವಂದೇ ಭಾರತ್ ರೈಲು ಆಗಿದೆ.
ಕರ್ನಾಟಕದಲ್ಲಿ ಈಗಾಗಲೇ ಮೈಸೂರು- ಚೆನ್ನೈ, ಬೆಂಗಳೂರು- ಹೈದರಾಬಾದ್, ಬೆಂಗಳೂರು- ಧಾರವಾಡ, ಬೆಂಗಳೂರು ಕೊಯಮತ್ತೂರು, ಮಂಗಳೂರು – ತಿರುವನಂತಪುರ, ಮಂಗಳೂರು -ಮಡಗಾಂವ್ ವಂದೇ ಭಾರತ್ ರೈಲುಗಳು ಕಾರ್ಯಾಚರಣೆ ನಡೆಸುತ್ತಿವೆ.