GST council Meeting:ಬ್ಲ್ಯಾಕ್ ಫಂಗಸ್ ಔಷಧಕ್ಕೆ ತೆರಿಗೆ ಇಲ್ಲ, ಕೋವಿಡ್ ಲಸಿಕೆಗೆ ಶೇ.5 GST
ಸೀಕ್ವೆನ್ಸಿಂಗ್ ಕಿಟ್ಸ್ ಮೇಲೆ ವಿಧಿಸಿರುವ ಶೇ.12ರಷ್ಟು ಜಿಎಸ್ ಟಿ ಶುಲ್ಕ ಅದೇ ದರವನ್ನು ಮುಂದುವರಿಸಲಾಗಿದೆ
Team Udayavani, Jun 12, 2021, 4:10 PM IST
ನವದೆಹಲಿ:ದೇಶದಲ್ಲಿ ಕೋವಿಡ್ ಎರಡನೇ ಅಲೆಯ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ನಡುವೆ ಶನಿವಾರ(ಜೂನ್ 12) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಮಂಡಳಿಯ 44ನೇ ಸಭೆ ನಡೆಯಿತು.
ಇದನ್ನೂ ಓದಿ:ಅಂದು ರಸ್ತೆಯಲ್ಲಿ ಉರುಳಾಡಿದ ಶೋಭಾ ಕರಾಂದ್ಲಾಜೆ ಇಂದು ಎಲ್ಲಿದ್ದಾರೆ? ವಿನಯ್ ಕುಮಾರ್ ಸೊರಕೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್ ಟಿ ಮಂಡಳಿ ಸಭೆಯಲ್ಲಿ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿತ್ತ ಸಚಿವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಕೋವಿಡ್ 19 ಪರಿಹಾರ ಸಾಮಗ್ರಿಗಳ ಮೇಲಿನ ಜಿಎಸ್ಟಿ ದರಗಳ ಕುರಿತು ಸರ್ಕಾರದ ಶಿಫಾರಸುಗಳನ್ನು ಜಿಎಸ್ ಟಿ ಮಂಡಳಿ ಈಗ ಅನುಮೋದನೆ ನೀಡಿದೆ. ಕೋವಿಡ್ 19 ಲಸಿಕೆ ಮೇಲಿನ ಶೇ.5ರಷ್ಟು ಜಿಎಸ್ ಟಿ ದರ ವಿಧಿಸಲು ಒಪ್ಪಿಗೆ ಸೂಚಿಸಿದೆ. ಕೋವಿಡ್ ಲಸಿಕೆಯ ಜಿಎಸ್ ಟಿ ದರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಕೋವಿಡ್ ಸೋಂಕಿತರ ಮೇಳೆ ಪರಿಣಾಮ ಬೀರುವ ಮಾರಕ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಬಳಸುವಂತಹ ಟುಸಿಲಿಝುಮಾಬ್ ಮತ್ತು ಆಂಫೋಟೆರಿಸಿನ್ ಬಿ ಔಷಧಗಳ ಮೇಳೆ ಯಾವುದೇ ತೆರಿಗೆ ವಿಧಿಸುವುದಿಲ್ಲ ಎಂದು ಹೇಳಿದೆ. ತೆರಿಗೆ ಕಡಿತ ಸೆಪ್ಟೆಂಬರ್ ವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದೆ.
ಈಗಾಗಲೇ ಆರ್ ಟಿ ಪಿಸಿಆರ್ ಯಂತ್ರಗಳು, ಆರ್ ಎನ್ ಎ ಯಂತ್ರ ಮತ್ತು ಜಿನೋಮ್ ಸೀಕ್ವೆನ್ಸಿಂಗ್ ಯಂತ್ರಗಳ ಮೇಲೆ ವಿಧಿಸಿರುವ ಶೇ.18ರ ಜಿಎಸ್ ಟಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದೆ. ಅಲ್ಲದೇ ಜಿನೋಮ್ ಸೀಕ್ವೆನ್ಸಿಂಗ್ ಕಿಟ್ಸ್ ಮೇಲೆ ವಿಧಿಸಿರುವ ಶೇ.12ರಷ್ಟು ಜಿಎಸ್ ಟಿ ಶುಲ್ಕ ಅದೇ ದರವನ್ನು ಮುಂದುವರಿಸಲಾಗಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ