ತೌಕ್ತೆ ಚಂಡಮಾರುತದಿಂದ ಹಾನಿ: ಮೀನುಗಾರರಿಗೆ 105 ಕೋಟಿ ರೂ. ಪ್ಯಾಕೇಜ್ ಘೋಷಣೆ: ಗುಜರಾತ್
ಒಂದು ಸಾವಿರ ರೂಪಾಯಿಗಿಂತ ಹೆಚ್ಚು ಪರಿಹಾರ ನೀಡಲಾಗುವುದು ಎಂದು ವರದಿ ತಿಳಿಸಿದೆ.
Team Udayavani, Jun 2, 2021, 2:25 PM IST
ನವದೆಹಲಿ: ಕಳೆದ ತಿಂಗಳು ತೌಕ್ತೆ ಚಂಡಮಾರುತದಿಂದ ಸಂಭವಿಸಿದ ಹಾನಿಯ ಹಿನ್ನೆಲೆಯಲ್ಲಿ ಮೀನುಗಾರರಿಗೆ 105 ಕೋಟಿ ರೂಪಾಯಿ ಆರ್ಥಿಕ ನೆರವಿನ ಪ್ಯಾಕೇಜ್ ಅನ್ನು ಪಶ್ಚಿಮಬಂಗಾಳ ಸರ್ಕಾಆರ ಬುಧವಾರ(ಜೂನ್ 02) ಘೋಷಿಸಿದೆ.
ಇದನ್ನೂ ಓದಿ:ನೀರು ಸರಬರಾಜು ಇಳಿಸುವ ವೇಳೆ ಸುಪರ್ ವೈಸರ್ ಮೇಲೆ ಬಿದ್ದ ಪೈಪ್: ಗಾಯಗೊಂಡ ಸುಪರ್ ವೈಸರ್ ಸಾವು
ತೌಕ್ತೆ ಚಂಡಮಾರುತದಿಂದ ಸಂಭವಿಸಿದ ನಷ್ಟದ ಪುನರ್ ಪರಿಶೀಲನಾ ಸಭೆಯ ನಂತರ ಮುಖ್ಯಮಂತ್ರಿ ವಿಜಯ್ ರೂಪಾನಿ ಈ ಆರ್ಥಿಕ ಪ್ಯಾಕೇಜ್ ಘೋಷಿಸುವ ನಿರ್ಧಾರ ತೆಗೆದುಕೊಂಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಮೇ 17ರ ರಾತ್ರಿ ಗುಜರಾತ್ ಕರಾವಳಿ ಪ್ರದೇಶದ ಮೇಲೆ ಗಂಟೆಗೆ 220 ಕಿಲೋ ಮೀಟರ್ ವೇಗದಲ್ಲಿ ತೌಕ್ತೆ ಚಂಡಮಾರುತ ಅಪ್ಪಳಿಸಿತ್ತು. ಇದರ ಪರಿಣಾಮವಾಗಿ ಸಣ್ಣ ದೋಣಿ, ಬಲೆ ಸೇರಿದಂತೆ ಅಪಾರ ಪ್ರಮಾಣದ ನಷ್ಟ ಸಂಭವಿಸಿತ್ತು.
ಗುಜರಾತ್ ನ ಜಫ್ರಾಬಾದ್, ರಾಜುಲಾ, ಸೈಯದ್ ರಾಜ್ ಪಾರಾ, ಶಿಯಾಲ್ ಬೆಟ್ ಮತ್ತು ನವಬಂದರು ಪ್ರದೇಶಗಳಲ್ಲಿ ಚಂಡಮಾರುತ ತೌಕ್ತೆ ಅಪಾರ ಹಾನಿಯನ್ನು ಉಂಟು ಮಾಡಿತ್ತು. ಚಂಡಮಾರುತದಿಂದ ಹಾನಿಗೊಳಗಾದ ಸಣ್ಣ ಮತ್ತು ದೊಡ್ಡ ಪ್ರಮಾಣದ ದೋಣಿಗಳಿಗೆ ಒಂದು ಸಾವಿರ ರೂಪಾಯಿಗಿಂತ ಹೆಚ್ಚು ಪರಿಹಾರ ನೀಡಲಾಗುವುದು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ