ಗುಜರಾತ್: ವಡೋದರಾದಲ್ಲಿ ಪಟಾಕಿ ಸುಡುವ ವಿಚಾರದಲ್ಲಿ ಕೋಮು ಘರ್ಷಣೆ, 19 ಮಂದಿ ವಶಕ್ಕೆ
ಪಟಾಕಿ ಸಿಡಿಸಿದ ಪರಿಣಾಮ ಬೈಕ್ ವೊಂದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
Team Udayavani, Oct 25, 2022, 11:32 AM IST
ಅಹಮದಾಬಾದ್: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಸುಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಗುಜರಾತ್ ನ ವಡೋದರಾದಲ್ಲಿ ಮಂಗಳವಾರ (ಅಕ್ಟೋಬರ್ 25) ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 19 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಕೊಹ್ಲಿ ಔಟಾದರೂ ಮೂರು ರನ್ .. : ಅಂಪೈರ್ ನಿರ್ಧಾರಕ್ಕೆ ಸೈಮನ್ ಟಫೆಲ್ ಹೇಳುವುದೇನು?
ಕೋಮು ಸೂಕ್ಷ್ಮತೆಯ ಪಾನಿಗೇಟ್ ಪ್ರದೇಶದಲ್ಲಿ ಮಂಗಳವಾರ ನಸುಕಿನ ವೇಳೆ ಘರ್ಷಣೆ ನಡೆದಿರುವುದಾಗಿ ವರದಿ ತಿಳಿಸಿದೆ. ಘರ್ಷಣೆ ನಡೆದ ನಂತರ ಮನೆಯ ಮೂರನೇ ಮಹಡಿ ಮೇಲಿನಿಂದ ಪೊಲೀಸರ ಮೇಲೆ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿರುವುದಾಗಿ ವಡೋದರಾ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಯಶ್ ಪಾಲ್ ಜಗಾನಿಯಾ ಪಿಟಿಐಗೆ ತಿಳಿಸಿದ್ದಾರೆ.
ಕೋಮು ಘರ್ಷಣೆಯಲ್ಲಿ ಯಾರೂ ಕೂಡಾ ಗಾಯಗೊಂಡಿಲ್ಲ, ಆದರೆ ಪಟಾಕಿ ಸಿಡಿಸಿದ ಪರಿಣಾಮ ಬೈಕ್ ವೊಂದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಪಟಾಕಿ ಸಿಡಿಸುವ ವಿಚಾರದಲ್ಲಿ ಘರ್ಷಣೆ ನಡೆದ ಪರಿಣಾಮ ಎರಡು ಕೋಮುಗಳ ನಡುವೆ ಕಲ್ಲು ತೂರಾಟ ನಡೆಸಿರುವುದಾಗಿ ಯಶ್ ಪಾಲ್ ತಿಳಿಸಿರುವುದಾಗಿ ವರದಿಯಾಗಿದೆ.
ಘರ್ಷಣೆ ನಡೆದ ಹಿನ್ನೆಲೆಯಲ್ಲಿ ಪಾನಿಗೇಟ್ ಪ್ರದೇಶದಲ್ಲಿ ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು