ಗುಂಡ್ಲುಪೇಟೆ: ಲಾರಿ ಹರಿದು ಸ್ಕೂಟರ್ ನಲ್ಲಿದ್ದ ವಿದ್ಯಾರ್ಥಿನಿ ಸಾವು,ಇಬ್ಬರು ಪಾರು
Team Udayavani, Nov 7, 2021, 5:47 PM IST
ಗುಂಡ್ಲುಪೇಟೆ: ಟೈಲ್ಸ್ ತುಂಬಿಕೊಂಡು ತೆರಳುತ್ತಿದ್ದ ಲಾರಿ ವಿದ್ಯಾರ್ಥಿನಿ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಭಾನುವಾರ ನಡೆದಿದೆ.
ತಾಲೂಕಿನ ಕಣ್ಣೇಗಾಲ ಗ್ರಾಮದ ಪ್ರಿಯಾ(19) ಮೃತಪಟ್ಟ ವಿದ್ಯಾರ್ಥಿನಿ. ಈಗೆ ತಂದೆಯೊಂದಿಗೆ ಬೆಳಗ್ಗೆ ಸ್ಕೂಟರ್ನಲ್ಲಿ ಹೋಗುತ್ತಿದ್ದ ವೇಳೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಕೇರಳದಿಂದ ಟೈಲ್ಸ್ ತುಂಬಿಕೊಂಡು ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಪ್ರಿಯಾ ತಂದೆ ರಾಜು ಮತ್ತು ತಂಗಿ ಅದೃಷ್ಟವಶಾತ್ ಪಾರಾಗಿದ್ದಾರೆ. ಇವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿದ್ಯಾರ್ಥಿನಿ ಪ್ರಿಯಾ ಚಾಮರಾಜನಗರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮೊ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.
ಕಣ್ಣೇಗಾಲದಿಂದ ರಾಜು ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ಸ್ಕೂಟರ್ ನಲ್ಲಿ ಹೆಲ್ಮೇಟ್ ಧರಿಸದೆ ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಮೂವರು ಕೆಳಗೆ ಬಿದ್ದಿದ್ದಾರೆ. ಸಹೋದರಿ ಮತ್ತು ತಂದೆ ಎಡಗಡೆಗೆ ಬಿದ್ದರೆ, ಪ್ರಿಯಾ ಬಲಗಡೆಗೆ ಬಿದ್ದಿದ್ದರಿಂದ ಪಕ್ಕದಲ್ಲೇ ಹಾದುಹೋಗುತ್ತಿದ್ದ ಟಿಪ್ಪರ್ ಹರಿದಿದೆ ಎನ್ನಲಾಗಿದೆ.
ನಂತರ ಶವವನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಪಟ್ಟಣ ಠಾಣೆ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು