ಹದಿನೇಳೆಂಟು: ಹದಿಹರೆಯದವರ ಸಮಸ್ಯೆಯ ಬಗ್ಗೆ ಸಮಾಜದ ಉಪೇಕ್ಷೆಯನ್ನು ಬಿಂಬಿಸುವ ಚಿತ್ರ

ಇಫಿ ಚಿತ್ರೋತ್ಸವ

Team Udayavani, Nov 23, 2022, 3:14 PM IST

1-sdasa-asd

ಪಣಜಿ: ಕನ್ನಡದ ‘ಹದಿನೇಳೆಂಟು’ ಇಫಿ ಚಿತ್ರೋತ್ಸವದ ಭಾರತೀಯ ಪನೋರಮಾ ವಿಭಾಗದ ಉದ್ಘಾಟನಾ ಚಿತ್ರವಾಗಿ ಪ್ರದರ್ಶಿತವಾದ ಪೃಥ್ವಿ ಕೊಣನೂರು ಅವರ ಚಿತ್ರ.

ಚಿತ್ರದ ಕಥಾವಸ್ತು ಹದಿಹರೆಯದ ಇಬ್ಬರು ವಿದ್ಯಾರ್ಥಿಗಳು ತಮ್ಮ ಕೆಲವು ಖಾಸಗಿ ಗಳಿಗೆಗಳನ್ನು ವಿಡಿಯೋ ಮಾಡಿಕೊಂಡಿರುತ್ತಾರೆ. ಅದು ಇಂಟರ್‌ ನೆಟ್‌ ನಲ್ಲಿ ಸಿಗತೊಡಗಿದಾಗ ಸಮಸ್ಯೆ ಟಿಸಿಲೊಡೆಯುತ್ತದೆ. ಸಂಬಂಧಪಟ್ಟ ಶಾಲೆಯ ಆಡಳಿತ ಮಂಡಳಿ ತಮ್ಮ ಶಾಲೆಯ ಹೆಸರು ಕೆಡುತ್ತದೆಂದು ಅವರಿಬ್ಬರ ಮೇಲೂ ಕ್ರಮ ಕೈಗೊಳ್ಳಲು ನಿರ್ಧರಿಸುತ್ತಾರೆ. ಆ ಸಂದರ್ಭದಲ್ಲಿ ಜಾತಿ, ಆರ್ಥಿಕ ಸ್ಥಿತಿಗತಿ ಎಲ್ಲವೂ ಚರ್ಚೆಗೆ ಬಂದು ಒಟ್ಟೂ ಪರಿಸ್ಥಿತಿಯನ್ನು ಅಸಹನೀಯಗೊಳಿಸುತ್ತದೆ. ಸಮಾಜದ ಬೇಜವಾಬ್ದಾರಿತನಕ್ಕೂ ಇಲ್ಲಿ ಪಾತ್ರವಿದೆ. ಮುಖ್ಯವಾಗಿ ವಿದ್ಯಾರ್ಥಿಗಳಿಬ್ಬರ ಬದುಕನ್ನು ಸಂಕಷ್ಟಕ್ಕೀಡು ಮಾಡುತ್ತದೆ.

ಇಂದಿನ ಸಾಮಾಜಿಕ ಮಾಧ್ಯಮಗಳ ಜಗತ್ತಿನಲ್ಲಿ ಆಗುತ್ತಿರುವ ಪ್ರಮಾದಗಳ ಹಾಗೂ ಹದಿಹರೆಯದ ಮನಸ್ಸುಗಳಿಗೆ ದೊರಕಬೇಕಾದ ಸರಿಯಾದ ಸಲಹೆ, ಸಮಾಲೋಚನೆಗಳ ಕೊರತೆಯನ್ನೂ ಎತ್ತಿ ಹಿಡಿಯುವಂಥ ಚಿತ್ರವಿದು. ಈ ಚಿತ್ರದ ಕುರಿತಾಗಿ ಇಫಿ ಚಿತ್ರೋತ್ಸವದಲ್ಲಿ ಮಾತನಾಡಿದ ಪೃಥ್ವಿ ಕೊಣನೂರು,  ʼನನ್ನ ಚಿತ್ರ ಸಮಾಜದ ಅಜಾಗರೂಕತೆ, ಉಪೇಕ್ಷೆಯ ದೆಸೆಯಿಂದ ಇಬ್ಬರು ಹದಿಹರೆಯದವರ ಬದುಕನ್ನು ಅಸಹನೀಯಗೊಳಿಸುವುದರ ಕುರಿತಾದದ್ದುʼ ಎಂದರು.

ʼಇಂಥ ಸಮಸ್ಯೆಗಳಿಗೆ ನಾವು ತತ್‌ ಕ್ಷಣ ಪರಿಹಾರಕ್ಕೆ ಪ್ರಯತ್ನಿಸುವ ಬದಲು ಹೊಣೆಗಾರಿಕೆಯನ್ನು ಒಬ್ಬರಿಂದ ಒಬ್ಬರಿಗೆ ವರ್ಗಾಯಿಸುತ್ತಾ ಹೋಗುತ್ತೇವೆ. ಅದರಿಂದ ಹಲವರು ಬದುಕು ಸಂಕಷ್ಟಕ್ಕೀಡಾಗುತ್ತದೆ. ಇದನ್ನು ಹೇಳುವುದೇ ಈ ಸಿನಿಮಾ. ಇದಲ್ಲದೇ ನನ್ನ ಸಿನಿಮಾ ಪಿತೃಪ್ರಧಾನ ವ್ಯವಸ್ಥೆ, ಜಾತಿ ಪದ್ಧತಿ, ಆರ್ಥಿಕ ಅಸಮಾನತೆ, ಸಮಾಜದಲ್ಲಿನ ಸಂಕೀರ್ಣತೆ ಎಲ್ಲವನ್ನೂ ಹೇಳುತ್ತದೆʼ ಎನ್ನುತ್ತಾರೆ ಪೃಥ್ವಿ ಕೊಣನೂರು.

ನಾನು ಯಾರ ಪರವೂ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ಅದನ್ನು ಪ್ರೇಕ್ಷಕರಿಗೇ ಬಿಟ್ಟಿದ್ದೇನೆ ಎನ್ನುವ ಅವರು, ಜನಸಾಮಾನ್ಯರು ಕೆಲವೊಮ್ಮೆ ಇಂಥ ಸನ್ನಿವೇಶಗಳಿಗೆ ತೆರೆದುಕೊಂಡಾಗ ಎದುರಿಸುವ ಅನಿರೀಕ್ಷಿತ ಸನ್ನಿವೇಶ ಕಟ್ಟಿಕೊಡಲು ಯತ್ನಿಸಿದ್ದೇನೆ ಎನ್ನುತ್ತಾರೆ.

ಅರ್ಜುನ್‌ ರಾಜಾ ಅವರ ಸಿನೆಛಾಯಾಗ್ರಹಣ, ಶಿವಕುಮಾರ ಸ್ವಾಮಿಯವರ ಸಂಕಲನವಿದ್ದರೆ, ಅನುಪಮಾ ಹೆಗಡೆ ಚಿತ್ರಕಥೆಗೆ ಸಹಯೋಗ ನೀಡಿದ್ದಾರೆ. ಶೆರ್ಲಿನ್‌ ಭೋಸಲೆ, ನೀರಜ್‌ ಮ್ಯಾಥ್ಯೂ, ರೇಖಾ ಕೂಡ್ಲಿಗಿ, ಭವಾನಿ ಪ್ರಕಾಶ್‌, ರವಿ ಹೆಬ್ಬಳ್ಳಿ ಮತ್ತಿತರರು ತಾರಾಗಣದಲ್ಲಿದ್ದಾರೆ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chef chidambara kannada movie

Chef Chidambara: ಅನಿರುದ್ಧ್ ಅಡುಗೆ ಶುರು

tdy-7

Bollywood: ರಿಮೇಕ್‌ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್‌ ಸಿನಿಮಾಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: ಚಲನಚಿತ್ರೋತ್ಸವದ ತೀರ್ಪುಗಾರ ನಡಾವ್ ಲ್ಯಾಪಿಡ್ ಟೀಕೆ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: IFFI ಚಿತ್ರೋತ್ಸವದಲ್ಲಿ ತೀರ್ಪುಗಾರ ನಡಾವ್ ಲ್ಯಾಪಿಡ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.