ಹದಿನೇಳೆಂಟು: ಹದಿಹರೆಯದವರ ಸಮಸ್ಯೆಯ ಬಗ್ಗೆ ಸಮಾಜದ ಉಪೇಕ್ಷೆಯನ್ನು ಬಿಂಬಿಸುವ ಚಿತ್ರ

ಇಫಿ ಚಿತ್ರೋತ್ಸವ

Team Udayavani, Nov 23, 2022, 3:14 PM IST

1-sdasa-asd

ಪಣಜಿ: ಕನ್ನಡದ ‘ಹದಿನೇಳೆಂಟು’ ಇಫಿ ಚಿತ್ರೋತ್ಸವದ ಭಾರತೀಯ ಪನೋರಮಾ ವಿಭಾಗದ ಉದ್ಘಾಟನಾ ಚಿತ್ರವಾಗಿ ಪ್ರದರ್ಶಿತವಾದ ಪೃಥ್ವಿ ಕೊಣನೂರು ಅವರ ಚಿತ್ರ.

ಚಿತ್ರದ ಕಥಾವಸ್ತು ಹದಿಹರೆಯದ ಇಬ್ಬರು ವಿದ್ಯಾರ್ಥಿಗಳು ತಮ್ಮ ಕೆಲವು ಖಾಸಗಿ ಗಳಿಗೆಗಳನ್ನು ವಿಡಿಯೋ ಮಾಡಿಕೊಂಡಿರುತ್ತಾರೆ. ಅದು ಇಂಟರ್‌ ನೆಟ್‌ ನಲ್ಲಿ ಸಿಗತೊಡಗಿದಾಗ ಸಮಸ್ಯೆ ಟಿಸಿಲೊಡೆಯುತ್ತದೆ. ಸಂಬಂಧಪಟ್ಟ ಶಾಲೆಯ ಆಡಳಿತ ಮಂಡಳಿ ತಮ್ಮ ಶಾಲೆಯ ಹೆಸರು ಕೆಡುತ್ತದೆಂದು ಅವರಿಬ್ಬರ ಮೇಲೂ ಕ್ರಮ ಕೈಗೊಳ್ಳಲು ನಿರ್ಧರಿಸುತ್ತಾರೆ. ಆ ಸಂದರ್ಭದಲ್ಲಿ ಜಾತಿ, ಆರ್ಥಿಕ ಸ್ಥಿತಿಗತಿ ಎಲ್ಲವೂ ಚರ್ಚೆಗೆ ಬಂದು ಒಟ್ಟೂ ಪರಿಸ್ಥಿತಿಯನ್ನು ಅಸಹನೀಯಗೊಳಿಸುತ್ತದೆ. ಸಮಾಜದ ಬೇಜವಾಬ್ದಾರಿತನಕ್ಕೂ ಇಲ್ಲಿ ಪಾತ್ರವಿದೆ. ಮುಖ್ಯವಾಗಿ ವಿದ್ಯಾರ್ಥಿಗಳಿಬ್ಬರ ಬದುಕನ್ನು ಸಂಕಷ್ಟಕ್ಕೀಡು ಮಾಡುತ್ತದೆ.

ಇಂದಿನ ಸಾಮಾಜಿಕ ಮಾಧ್ಯಮಗಳ ಜಗತ್ತಿನಲ್ಲಿ ಆಗುತ್ತಿರುವ ಪ್ರಮಾದಗಳ ಹಾಗೂ ಹದಿಹರೆಯದ ಮನಸ್ಸುಗಳಿಗೆ ದೊರಕಬೇಕಾದ ಸರಿಯಾದ ಸಲಹೆ, ಸಮಾಲೋಚನೆಗಳ ಕೊರತೆಯನ್ನೂ ಎತ್ತಿ ಹಿಡಿಯುವಂಥ ಚಿತ್ರವಿದು. ಈ ಚಿತ್ರದ ಕುರಿತಾಗಿ ಇಫಿ ಚಿತ್ರೋತ್ಸವದಲ್ಲಿ ಮಾತನಾಡಿದ ಪೃಥ್ವಿ ಕೊಣನೂರು,  ʼನನ್ನ ಚಿತ್ರ ಸಮಾಜದ ಅಜಾಗರೂಕತೆ, ಉಪೇಕ್ಷೆಯ ದೆಸೆಯಿಂದ ಇಬ್ಬರು ಹದಿಹರೆಯದವರ ಬದುಕನ್ನು ಅಸಹನೀಯಗೊಳಿಸುವುದರ ಕುರಿತಾದದ್ದುʼ ಎಂದರು.

ʼಇಂಥ ಸಮಸ್ಯೆಗಳಿಗೆ ನಾವು ತತ್‌ ಕ್ಷಣ ಪರಿಹಾರಕ್ಕೆ ಪ್ರಯತ್ನಿಸುವ ಬದಲು ಹೊಣೆಗಾರಿಕೆಯನ್ನು ಒಬ್ಬರಿಂದ ಒಬ್ಬರಿಗೆ ವರ್ಗಾಯಿಸುತ್ತಾ ಹೋಗುತ್ತೇವೆ. ಅದರಿಂದ ಹಲವರು ಬದುಕು ಸಂಕಷ್ಟಕ್ಕೀಡಾಗುತ್ತದೆ. ಇದನ್ನು ಹೇಳುವುದೇ ಈ ಸಿನಿಮಾ. ಇದಲ್ಲದೇ ನನ್ನ ಸಿನಿಮಾ ಪಿತೃಪ್ರಧಾನ ವ್ಯವಸ್ಥೆ, ಜಾತಿ ಪದ್ಧತಿ, ಆರ್ಥಿಕ ಅಸಮಾನತೆ, ಸಮಾಜದಲ್ಲಿನ ಸಂಕೀರ್ಣತೆ ಎಲ್ಲವನ್ನೂ ಹೇಳುತ್ತದೆʼ ಎನ್ನುತ್ತಾರೆ ಪೃಥ್ವಿ ಕೊಣನೂರು.

ನಾನು ಯಾರ ಪರವೂ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ಅದನ್ನು ಪ್ರೇಕ್ಷಕರಿಗೇ ಬಿಟ್ಟಿದ್ದೇನೆ ಎನ್ನುವ ಅವರು, ಜನಸಾಮಾನ್ಯರು ಕೆಲವೊಮ್ಮೆ ಇಂಥ ಸನ್ನಿವೇಶಗಳಿಗೆ ತೆರೆದುಕೊಂಡಾಗ ಎದುರಿಸುವ ಅನಿರೀಕ್ಷಿತ ಸನ್ನಿವೇಶ ಕಟ್ಟಿಕೊಡಲು ಯತ್ನಿಸಿದ್ದೇನೆ ಎನ್ನುತ್ತಾರೆ.

ಅರ್ಜುನ್‌ ರಾಜಾ ಅವರ ಸಿನೆಛಾಯಾಗ್ರಹಣ, ಶಿವಕುಮಾರ ಸ್ವಾಮಿಯವರ ಸಂಕಲನವಿದ್ದರೆ, ಅನುಪಮಾ ಹೆಗಡೆ ಚಿತ್ರಕಥೆಗೆ ಸಹಯೋಗ ನೀಡಿದ್ದಾರೆ. ಶೆರ್ಲಿನ್‌ ಭೋಸಲೆ, ನೀರಜ್‌ ಮ್ಯಾಥ್ಯೂ, ರೇಖಾ ಕೂಡ್ಲಿಗಿ, ಭವಾನಿ ಪ್ರಕಾಶ್‌, ರವಿ ಹೆಬ್ಬಳ್ಳಿ ಮತ್ತಿತರರು ತಾರಾಗಣದಲ್ಲಿದ್ದಾರೆ

ಟಾಪ್ ನ್ಯೂಸ್

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: ಚಲನಚಿತ್ರೋತ್ಸವದ ತೀರ್ಪುಗಾರ ನಡಾವ್ ಲ್ಯಾಪಿಡ್ ಟೀಕೆ

“ದಿ ಕಾಶ್ಮೀರ್ ಫೈಲ್ಸ್” ಇದೊಂದು ಅಸಭ್ಯ ಚಿತ್ರ: IFFI ಚಿತ್ರೋತ್ಸವದಲ್ಲಿ ತೀರ್ಪುಗಾರ ನಡಾವ್ ಲ್ಯಾಪಿಡ್

1-sadsad

53 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ; ಸ್ಪ್ಯಾನಿಷ್‌ ಚಿತ್ರಕ್ಕೆ ಗೋಲ್ಡನ್‌ ಪೀಕಾಕ್‌ ಪ್ರಶಸ್ತಿ

1-daadad

ಸಿನಿಮಾ ರಂಗದಿಂದಲೇ ನಾನು ಚಿರಂಜೀವಿ: ಇಫಿಯಲ್ಲಿ ಚಿರಂಜೀವಿ ಭಾವುಕ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.