ಹಳಗೇರಿ ಅರಣ್ಯ ಪ್ರದೇಶ ಇನ್ನು ಕೈಗಾರಿಕಾ ವಲಯ? ಸಾರ್ವಜನಿಕ ವಲಯದಲ್ಲಿ ಅಸಮಾಧಾನ


Team Udayavani, Mar 29, 2021, 5:30 AM IST

ಹಳಗೇರಿ ಅರಣ್ಯ ಪ್ರದೇಶ ಇನ್ನು ಕೈಗಾರಿಕಾ ವಲಯ? ಸಾರ್ವಜನಿಕ ವಲಯದಲ್ಲಿ ಅಸಮಾಧಾನ

ಉಪ್ಪುಂದ: ಇಲ್ಲಿನ ಹಳಗೇರಿ ಯಲ್ಲಿರುವ ಅರಣ್ಯ ಪ್ರದೇಶವನ್ನು ಕೈಗಾರಿಕಾ ವಲಯವನ್ನಾಗಿಸುವ ಗ್ರಾ.ಪಂ ತೀರ್ಮಾನದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿವೆ.

ಕಂಬದಕೋಣೆ ಗ್ರಾಮದ ಹಳಗೇರಿಯ ಸರ್ವೆ ನಂ.166 ರಲ್ಲಿ 30 ಎಕ್ರೆ ಪ್ರದೇಶವನ್ನು ಕೈಗಾರಿಕಾ ವಲಯ ಪ್ರದೇಶವನ್ನಾಗಿ ಗುರುತಿಸಿ ಗ್ರಾ.ಪಂ. ನಿರಾಪೇಕ್ಷಣೆ ನೀಡಲು ನಿರ್ಣಯ ಕೈಗೊಂಡಿರುವುದು ನಾಗರಿಕರ ಆಕ್ಷೇಪಕ್ಕೆ ಕಾರಣವಾಗಿದೆ.

ಆರೋಗ್ಯದ ಮೇಲೆ ಪರಿಣಾಮ!
ಈ ಪ್ರದೇಶವು ಹಳಗೇರಿಯ ಹೃದಯ ಭಾಗದಲ್ಲಿದ್ದು, ಜನ ವಸತಿ ಪ್ರದೇಶಕ್ಕೆ ಹೊಂದಿಕೊಂಡಿದೆ. ಇಲ್ಲಿ ಕೈಗಾರಿಕೆಗಳು ಹುಟ್ಟಿ ಕೊಂಡಲ್ಲಿ ವಾಯು ಮಾಲಿನ್ಯ, ಜಲ ಮಾಲಿನ್ಯ ಹಾಗೂ ಶಬ್ದ ಮಾಲಿನ್ಯದಂತಹ ಅನೇಕ ಸಮಸ್ಯೆಗಳು ಜನರ ಆರೋಗ್ಯದ ಮೇಲೆ ಪರಿಣಾಮ ಉಂಟುಮಾಡಿ ಜೀವನ ಸಂಕಷ್ಟಕ್ಕೆ ಸಿಲುಕಲಿದೆ ಎನ್ನುವುದು ಸ್ಥಳೀಯರ ಆತಂಕ.
.
ಕೃಷಿಕರಲ್ಲಿ ಆತಂಕ
ಈ ಪ್ರದೇಶಕ್ಕೆ ಹೊಂದಿಕೊಂಡು ಸುಮಾರು 500 ಎಕ್ರೆಗೂ ಹೆಚ್ಚು ಕೃಷಿ ಭೂಮಿ ಇದ್ದು ಸುಮಾರು 150 ಕ್ಕೂ ಹೆಚ್ಚು ಕುಟುಂಬಗಳು ಸಾಂಪ್ರದಾಯಿಕ ಕೃಷಿಯ ಮೇಲೆ ಅವಲಂಬಿತವಾಗಿದ್ದಾರೆ. ಗೊಬ್ಬರ ಮಾಡಲು ಒಣ ತರಗಲೆ ಹಾಗೂ ಸೊಪ್ಪನ್ನು ಉಪಯೋಗಿಸುತ್ತಾರೆ. ಈ ಅರಣ್ಯ ಪ್ರದೇಶವು ಜಾನುವಾರು ಮೇಯಿಸುವ ಸ್ಥಳವಾಗಿಯೂ ಗುರುತಿಸಿಕೊಂಡಿದೆ. ಹಳಗೇರಿಯ ಹೆಚ್ಚಿನ ಕಡೆ ಹೊಳೆ ಆವರಿಸಿದ್ದು ಕೃಷಿ ಸಂಬಂಧಿ ಸಂಪನ್ಮೂಲಗಳಿಗೆ ಬೇರೆ ಅರಣ್ಯಗಳನ್ನು ಅವಲಂಬಿಸುವಂತಿಲ್ಲ. ಈ ಅರಣ್ಯ ನಾಶವಾದರೆ ಕೃಷಿ ಅವಲಂಬಿತ ಕುಟುಂಬ ಸಂಕಷ್ಟಕ್ಕೀಡಾಗಿ ಜೀವನ ದುಸ್ತರವಾಗುತ್ತದೆ ಎನ್ನುವ ಆತಂಕ ಶುರುವಾಗಿದೆ.

ಅವೈಜ್ಞಾನಿಕ ತೀರ್ಮಾನ
ಅರಣ್ಯ ಪ್ರದೇಶವನ್ನು ಕೈಗಾರಿಕಾ ವಲಯಕ್ಕೆ ನೀಡುವುದು ಅವೈಜ್ಞಾನಿಕ. ಭೌಗೋಳಿಕವಾಗಿಯು ಕೈಗಾರಿಕೆಗೆ ಸೂಕ್ತ ವಾಗಿಲ್ಲ. ಮುಂದಿನ ದಿನಗಳಲ್ಲಿ ಜನರಿಗೆ ಇದರಿಂದ ಸಂಕಷ್ಟ ಎದುರಾಗಲಿದೆ ಆದರಿಂದ ಈ ಬಗ್ಗೆ ನಮ್ಮ ವಿರೋಧವಿದೆ. ಅಗತ್ಯವಿದ್ದರೆ ಪ್ರತಿಭಟನೆ ನಡೆಸಲು ಕೂಡಾ ಈಗಾಲೇ ತೀರ್ಮಾನಿಸಿದ್ದೇವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಜೀವರಾಶಿ ನೆಲೆ ಕಳೆದುಕೊಳ್ಳುವ ಭೀತಿ
ಈ ಪ್ರದೇಶದಲ್ಲಿ ವಿವಿಧ ಜಾತಿಯ ಮರ, ಅನೇಕ ವನ್ಯ ಪ್ರಾಣಿ, ಪಕ್ಷಿಗಳಿಗೆ ಆಶ್ರಯ ತಾಣವಾಗಿದೆ. ಕೈಗಾರಿಕೆ ಪ್ರದೇಶವಾದರೆ ಮರಗಳು, ಪ್ರಾಣಿಗಳು ನಾಶವಾಗಲಿವೆ

ನೈಸರ್ಗಿಕ ವಿಕೋಪ ಸಾಧ್ಯತೆ
ಭೌಗೋಳಿಕವಾಗಿ ಈ ಪ್ರದೇಶವು ಕಿರು ಪರ್ವತ (ಗುಡ್ಡ)ದ ಇಳಿಜಾರಾಗಿದ್ದು ಕೈಗಾರಿಕೆಗೆ ಸೂಕ್ತವಾಗಿಲ್ಲ. ಕೈಗಾರಿಕೆಗಾಗಿ ಅರಣ್ಯ ಸ್ಥಳವನ್ನು ಸಮತಟ್ಟು ಮಾಡಿದಲ್ಲಿ ಹಿಂಭಾಗದ ಪರ್ವತದ ಭಾಗದಲ್ಲಿ ಭೂಕುಸಿತ ವಾಗಿ ನೈಸರ್ಗಿಕ ವಿಕೋಪದ ಸಾಧ್ಯತೆ ಇದೆ ಎನ್ನುತ್ತಾರೆ ಸ್ಥಳೀಯರು. ಇದರಿಂದ ಸನಿಹದ‌ ಜನ ವಸತಿ ಪ್ರದೇಶಕ್ಕೂ ಅಪಾಯದ ಸಾಧ್ಯತೆ ತಳ್ಳಿಹಾಕುವಂತಿಲ್ಲ. ನೈಸರ್ಗಿಕವಾಗಿ ಹಳ್ಳ ದಿಣ್ಣೆಗಳಿಂದ ಕೂಡಿದ್ದು ಅಂತರ್ಜಲ ಅಭಿವೃದ್ಧಿಗೆ ಪೂರಕವಾಗಿದೆ. ಸಮತಟ್ಟು ಮಾಡಿದಲ್ಲಿ ಅಂತರ್ಜಲ ವೃದ್ಧಿ ಕುಂಠಿತವಾಗಿ ಜಲಕ್ಷಾಮ ಉಂಟಾಗಬಹುದು. ಅರಣ್ಯ ಪ್ರದೇಶವನ್ನು ಕೈಗಾರಿಕಾ ವಯಲಕ್ಕೆ ನೀಡುವುದು ಅವೈಜ್ಞಾನಿಕ, ಅಪ್ರಸ್ತುತ ನಿರ್ಧಾರ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.