ರಾಜ್ಯದಲ್ಲಿ ಮತ್ತೆ ಬಸ್ ಅವಘಡ: ಹನೂರಿನಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯ
Team Udayavani, Mar 20, 2022, 1:28 PM IST
ಹನೂರು (ಚಾಮರಾಜನಗರ): ಖಾಸಗಿ ಬಸ್ಸೊಂದು ರಸ್ತೆಯ ಪಕ್ಕಕ್ಕೆ ಉರುಳಿಬಿದ್ದ ಘಟನೆ ಮಂಗಲ ಕಾಮಗೆರೆ ಮಾರ್ಗಮಧ್ಯೆ ಭಾನುವಾರ ನಡೆದಿದೆ.
ಮಲೆಮಹದೇಶ್ವರ ಬೆಟ್ಟದಿಂದ ಮೈಸೂರಿನತ್ತ ತೆರಳುತ್ತಿದ್ದ ಮಹದೇಶ್ವರ ಬಸ್ ಮಂಗಲ ಗ್ರಾಮದಿಂದ ಮುಂದೆ ಬರುತ್ತಿದ್ದಂತೆ ಆಯತಪ್ಪಿ ರಸ್ತೆಯ ಪಕ್ಕದ ಗುಂಡಿಗೆ ಉಳಿದಿದೆ ಇದರ ಪರಿಣಾಮ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಕೂಡಲೇ ಗಾಯಾಳುಗಳನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ತುಮಕೂರಿನ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಶನಿವಾರ ಖಾಸಗಿ ಬಸ್ ಉರುಳಿ ಸಂಭವಿಸಿದ ಅವಘಡದಲ್ಲಿ ಆರು ಜನ ಮೃತಪಟ್ಟು 30 ಜನರು ಗಾಯಗೊಂಡಿದ್ದರು. ಆ ಘಟನೆ ನಡೆದ ಬೆನ್ನಲ್ಲೇ ಈ ಅವಘಡ ನಡೆದಿದೆ.
ಅವಘಡದ ಕುರಿತಾಗಿ ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ