ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೇಸ್: ವೈದ್ಯಾಧಿಕಾರಿಗೆ ಜಾಮೀನು, ಬಿಡುಗಡೆ
Team Udayavani, Nov 29, 2021, 7:48 PM IST
ಮಂಗಳೂರು: ತನ್ನ ಕಚೇರಿಯ ಮಹಿಳಾ ಸಿಬಂದಿ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಜತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮ ಅಧಿಕಾರಿ ಡಾ| ರತ್ನಾಕರ್ ಅವರಿಗೆ 3ನೇ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ಸೋಮವಾರ ಅವರು ಬಿಡುಗಡೆಯಾಗಿದ್ದಾರೆ.
ಮಹಿಳಾ ಸಿಬಂದಿಗಳ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಫೋಟೊ ಹಾಗೂ ವೀಡಿಯೋ ತುಣುಕು ಜಾಲತಾಣದಲ್ಲಿ ವೈರಲ್ ಆಗಿತ್ತು. ಸುಮಾರು 2-3 ತಿಂಗಳ ಹಿಂದೆ ಈ ಘಟನೆ ಸಂಭವಿಸಿದ್ದು,ತಡವಾಗಿ ಬೆಳಕಿಗೆ ಬಂದಿತ್ತು. ರತ್ನಾಕರ್ ಮಹಿಳಾ ಸಿಬಂದಿ ಜತೆ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಾವಳಿಗಳು ಮಾಧ್ಯಮದಲ್ಲಿ ಶುಕ್ರವಾರ ಪ್ರಸಾರವಾದ ಬೆನ್ನಲ್ಲೇ ಕಚೇರಿ ಸಿಬಂದಿಯೊಬ್ಬರು ನಗರ ಪೊಲೀಸ್ ಆಯುಕ್ತರು ಹಾಗೂ ಮಹಿಳಾ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇಲೆ ಆರೋಪಿ ರತ್ನಾಕರ್ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು
ವಶಕ್ಕೆ ಪಡೆದುಕೊಂಡಿದ್ದರು.
ಇದನ್ನೂ ಓದಿ :ಸಂಸದೆಯರೊಂದಿಗಿನ ಟ್ವೀಟ್ ವೈರಲ್: ಶಶಿ ತರೂರ್ ಕ್ಷಮೆ ಕೇಳಿದ್ದೇಕೆ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ
Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು
ಜೆಡಿಎಸ್ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್ ಬಾವಾ
ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ
“ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್ ರಾಜ್