ಗಂಡನ ಮನೆಯವರ ಕಿರುಕುಳ ಆರೋಪ: ನವವಿವಾಹಿತೆ ಆತ್ಮಹತ್ಯೆ
Team Udayavani, Nov 16, 2021, 11:27 AM IST
ಮುದ್ದೇಬಿಹಾಳ: 5-6 ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆಯೊಬ್ಬಳು ಗಂಡನ ಮನೆಯ ಕಿರುಕುಳ ತಾಳದೆ ತವರು ಮನೆಗೆ ಬಂದು ತೆರೆದ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಅರಸನಾಳ ಗ್ರಾಮದಲ್ಲಿ ನಡೆದಿದೆ.
ಮೃತಳನ್ನು ಲಕ್ಷ್ಮೀ ಶಿವಪುತ್ರಪ್ಪ ಬೆಳ್ಳಿಕಟ್ಟಿ (20) ಎಂದು ಗುರುತಿಸಲಾಗಿದೆ. ಈಕೆಯನ್ನು ಬಾಗಲಕೋಟ ಜಿಲ್ಲೆ ರಾಂಪೂರದ ಶೇಕಪ್ಪ ಕಾಖಂಡಕಿ ಎಂಬಾತನೊದಿಗೆ ಮದುವೆ ಮಾಡಿ ಕೊಡಲಾಗಿತ್ತು. 3-4 ತಿಂಗಳು ಗಂಡನ ಮನೆಯಲ್ಲಿದ್ದು ಕಿರುಕುಳ ತಾಳದೆ ತವರು ಮನೆಗೆ ಬಂದಿದ್ದಳು. ಮತ್ತೆ ಗಂಡನ ಮನೆಗೆ ಕಳಿಸಲು ತವರು ಮನೆಯವರು ಮುಂದಾದಾಗ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಶಿರಸಿ: ಕಾಲೇಜು ಹೊರಟಿದ್ದ ಯುವತಿ ಅಪಹರಣ
ಸ್ಥಳಕ್ಕೆ ಮುದ್ದೇಬಿಹಾಳ ಸಿಪಿಐ ಆನಂದ ವಾಘ್ಮೋಡೆ, ಪಿಎಸ್ಐ ರೇಣುಕಾ ಜಕನೂರ ಮತ್ತು ಪೊಲೀಸ್ ಸಿಬ್ಬಂಧಿ ತೆರಳಿ ಕಾನೂನು ಕ್ರಮ ಕೈಕೊಂಡಿದ್ದಾರೆ. ಮುದ್ದೇಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಕೆ ಸೋಮವಾರ ಸಂಜೆಯೆ ಬಾವಿಗೆ ಹಾರಿದ್ದಾಳೆ. ಅಗ್ನಿಶಾಮಕ ಮತ್ತು ಸ್ಥಳೀಯರು ಶವಕ್ಕಾಗಿ ಹುಡುಕಾಡಿದ್ದಾರೆ. ಆದರೆ ಶವ ದೊರೆತಿಲ್ಲ. ಮಂಗಳವಾರ ಬೆಳಿಗ್ಗೆ ಶವ ದೊರಕಿದ್ದು ಮರಣೋತ್ತರ ಪರೀಕ್ಷೆಗೆ ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಕಳುಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ