ಕಠಿನ ನಿರ್ಬಂಧ: ನಾವೆಷ್ಟು ಸಿದ್ಧ? ಸರಕಾರ, ಜನರು ಈಗಲೇ ತಯಾರಾಗಲಿ


Team Udayavani, Apr 19, 2021, 7:40 AM IST

ಕಠಿನ ನಿರ್ಬಂಧ: ನಾವೆಷ್ಟು ಸಿದ್ಧ? ಸರಕಾರ, ಜನರು ಈಗಲೇ ತಯಾರಾಗಲಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಸರಣದ ವೇಗವು ಸರಕಾರವನ್ನು ಕಠಿನ ನಿರ್ಬಂಧ ಕೈಗೊಳ್ಳುವ ಅನಿವಾರ್ಯಕ್ಕೆ ಸಿಲುಕಿಸಿದೆ. ಮತ್ತೆ ಲಾಕ್‌ಡೌನ್‌ನ ಉರುಳಿಗೆ ಸಿಲುಕಿ ನರಳಬೇಕಾಗಬಹುದೇ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲೂ ಚರ್ಚೆ ಆರಂಭವಾಗಿದೆ. ಈ ಬಾರಿ ಲಾಕ್‌ಡೌನ್‌ ಘೋಷಿಸುವುದಿಲ್ಲ ಎಂದು ಈಗಾಗಲೇ ಸಿಎಂ ಸಹಿತ ಹಲವು ಸಚಿವರು ಸ್ಪಷ್ಟಪಡಿಸಿದ್ದಾರೆ. ಆದರೆ ಜನರು ಸಹಕರಿಸದಿದ್ದರೆ ಸರಕಾರ ಅಸಹಾಯಕ ಮತ್ತು ಅನಿವಾರ್ಯವಾಗಿ ಕಠಿನ ಕ್ರಮ ಕೈಗೊಳ್ಳಲೇಬೇಕಾಗುತ್ತದೆ. ಆದರೆ ನಿರ್ಬಂಧಗಳನ್ನು ಜಾರಿ ಮಾಡುವ ಮುನ್ನ ಜನರ ಹಿತದೃಷ್ಟಿಯಿಂದ ಮತ್ತು ಜನಸಾಮಾನ್ಯರನ್ನು ಸಂಕಷ್ಟದಿಂದ ಪಾರು ಮಾಡುವ ಕೆಲವು ಮಾರ್ಗೋಪಾಯಗಳನ್ನು ಸರಕಾರ ಕಂಡುಕೊಳ್ಳಬೇಕು. ಕಳೆದ ಲಾಕ್‌ಡೌನ್‌ ಸಮಯದ ಅವಾಂತರಗಳು ಈ ಬಾರಿ ಆಗದಂತೆ ಕ್ರಮ ಕೈಗೊಳ್ಳಬೇಕು.

ಕಾಲಾವಕಾಶ ಕೊಡಿ
ಸರಕಾರದ ಬಹುತೇಕ ಮಾರ್ಗಸೂಚಿಗಳು, ಘೋಷಣೆಗಳು ರಾತ್ರಿ 8ರ ಬಳಿಕವೇ ಪ್ರಕಟವಾಗುತ್ತವೆ. ಕಠಿನ ನಿರ್ಬಂಧಗಳನ್ನು ಕನಿಷ್ಠ 24 ಅಥವಾ 48 ತಾಸು ಮುನ್ನ ಘೋಷಿಸಬೇಕು. ಆಗ ಜನರಿಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗು ತ್ತದೆ. ಬೇರೆ ಊರುಗಳಿಂದ ಬಂದವರು, ಕಾರ್ಮಿಕರು ಮುಂತಾದವರಿಗೆ ಊರುಗಳಿಗೆ ಮರಳಲು ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು.

ಗಾರ್ಮೆಂಟ್‌ ನೌಕರರಿಗೆ ಸಹಾಯ
ಕಳೆದ ಲಾಕ್‌ಡೌನ್‌ನಿಂದ 5 ಲಕ್ಷಕ್ಕೂ ಹೆಚ್ಚು ಗಾರ್ಮೆಂಟ್‌ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದರು. ಉದ್ಯೋಗ ನಷ್ಟ, ವೇತನ ನಷ್ಟ ಅನುಭವಿಸಿದ್ದರು. ಈ ಬಾರಿ ಸರಕಾರ ನಿರ್ಬಂಧ ಘೋಷಿಸುವ ಮುನ್ನ ಗಾರ್ಮೆಂಟ್‌ ಉದ್ಯೋಗಿಗಳಿಗೆ ಕನಿಷ್ಠ ವೇತನ, ಲಾಕ್‌ಡೌನ್‌ ಅವಧಿ ಮುಗಿಯವ ವರೆಗೂ ಆಹಾರದ ಕಿಟ್‌, ಮನೆ ಬಾಡಿಗೆ ಕಡಿತ ಮತ್ತಿತರ ನಿರ್ಧಾರ ಕೈಗೊಳ್ಳಬೇಕು.

ಚಾಲಕರ ಕಷ್ಟ ಪರಿಗಣಿಸಿ
ಹಲವು ತಿಂಗಳು ಆದಾಯವಿಲ್ಲದೆ ಸುಮಾರು 7 ಲಕ್ಷಕ್ಕೂ ಹೆಚ್ಚು ಚಾಲಕರು ಕಷ್ಟಪಟ್ಟಿದ್ದರು. ಇವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಾಗೂ ಮುಂಚಿತವಾಗಿಯೇ ಜೀವನ ನಿರ್ವಹಣೆಗೆ ಅಗತ್ಯ ಆಹಾರ ಮತ್ತು ಆರ್ಥಿಕ ನೆರವು ನೀಡುವುದಕ್ಕೆ ಸಿದ್ಧತೆ ನಡೆಯಬೇಕು.

ಹಿರಿಯ ನಾಗರಿಕರಿಗೆ ಸ್ಪಂದಿಸಿ
ಕಳೆದ ಬಾರಿ ಲಾಕ್‌ಡೌನ್‌ ಸಂದರ್ಭದಲ್ಲಿ ಹಲವು ಕ್ಲಿನಿಕ್‌ಗಳು ಬಂದ್‌ ಆಗಿದ್ದವು. ಆಸ್ಪತ್ರೆಗಳಿಗೆ ತೆರಳಿದರೆ ಕೊರೊನಾ ಪೀಡಿತರಿಗಷ್ಟೇ ಚಿಕಿತ್ಸೆ ನೀಡಲಾಗಿತ್ತು. ಇಂಥದ್ದಕ್ಕೆ ಸರಕಾರ ಈ ಬಾರಿ ಸೂಕ್ತ ಪರಿಹಾರ ಕಲ್ಪಿಸಬೇಕು. ಹಿರಿಯ ನಾಗರಿಕರು, ಆರೋಗ್ಯ ಸಮಸ್ಯೆ ಇರುವವರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ವ್ಯವಸ್ಥೆ ಕಲ್ಪಿಸಬೇಕು.

ಕಾರ್ಮಿಕರ ವ್ಯಥೆ ಅರಿತುಕೊಳ್ಳಿ
ಕಾರ್ಮಿಕರು ಕಳೆದ ಲಾಕ್‌ಡೌನ್‌ ವೇಳೆ ಊರಿಗೆ ತೆರಳಲು ವಾಹನ ವ್ಯವಸ್ಥೆ ಇಲ್ಲದೆ ಕಾಲ್ನಡಿಗೆಯಲ್ಲೇ ನೂರಾರು ಕಿ.ಮೀ. ಸಾಗಿದ್ದರು. ಈ ಬಾರಿ ಇಂಥ ದುರಂತ ನಡೆಯದಂತೆ ಕಾರ್ಮಿಕ ಇಲಾಖೆ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಹಣ ಇರುವುದರಿಂದ ಅಗತ್ಯ ಸೌಲಭ್ಯ, ಸಹಕಾರ ನೀಡಲು ಯೋಚಿಸಬೇಕು.

ರೈತನ ಉತ್ಪನ್ನಕ್ಕೆ ಮಾರುಕಟ್ಟೆ ಕಲ್ಪಿಸಿ
ಕಳೆದ ಬಾರಿ ರೈತರು ಕೃಷ್ಯುತ್ಪನ್ನ ಮಾರುಕಟ್ಟೆಗೆ ತರಲು ಸಾಹಸಪಡ ಬೇಕಾಯಿತು. ಖರೀದಿಸುವ ಜನರಿಲ್ಲದೆ ಬೀದಿಯಲ್ಲಿ ಎಸೆಯುವ ಸ್ಥಿತಿ ಬಂದಿತ್ತು. ಈ ವರ್ಷ ಸರಕಾರ ನಿರ್ಬಂಧ ಜಾರಿಗೆ ಮುನ್ನವೇ ರೈತರ ಉತ್ಪನ್ನಗಳ ಮಾರಾಟಕ್ಕೆ ಸೂಕ್ತ ವ್ವವಸ್ಥೆ ಕಲ್ಪಿಸಬೇಕು.

ಕಸುಬುದಾರರಿಗೆ ನೆರವು
ಲಾಕ್‌ಡೌನ್‌ನಿಂದಾಗಿ ನೇಕಾರ, ಮಡಿವಾಳ, ಚಮ್ಮಾರ, ಕೌÒರಿಕರ ಸಹಿತ ಅನೇಕ ಸಮುದಾಯಗಳು ಪರದಾಡಿದ್ದರು. ಈಗ ಕುಲಕಸುಬು ಆಧಾರಿತ ಸಮುದಾಯಗಳ ನಿತ್ಯ ಜೀವನ ಮತ್ತು ಉದ್ಯೋಗಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಸರಕಾರದ ಮೇಲಿದೆ.

ಸಂಚಾರ ವ್ಯವಸ್ಥೆ ಕಲ್ಪಿಸಿ
ಕಳೆದ ಬಾರಿ ಸಾರಿಗೆ ಬಸ್‌ ಏಕಾಏಕಿ ಸ್ಥಗಿತಗೊಳಿಸಲಾಗಿತ್ತು. ವಿಶೇಷ ಬಸ್‌ಗಳಲ್ಲೂ ಮುಂಜಾಗ್ರತೆ ಕೈಗೊಂಡಿರಲಿಲ್ಲ. ಈ ಬಾರಿ ನಿರ್ಬಂಧಗಳನ್ನು ವಿಧಿಸುವುದಿದ್ದರೆ ಪ್ರತೀ ಜಿಲ್ಲೆಗೂ ಶೇ. 50ರಷ್ಟು ಪ್ರಯಾಣಿಕರ ಮಿತಿಯಲ್ಲಿ ಸಾರಿಗೆ ವ್ಯವಸ್ಥೆ ಮಾಡುವ ಮೂಲಕ ಅವ್ಯವಸ್ಥೆಯನ್ನು ತಪ್ಪಿಸಬಹುದು.

ಬೆಂಗಳೂರಿಗೆ ಕಠಿನ ನಿಯಮ: ಇಂದು ನಿರ್ಧಾರ
ಬೆಂಗಳೂರಿಗೆ ಲಾಕ್‌ಡೌನ್‌ ಅಗತ್ಯ ಇಲ್ಲ ಎಂದು ಸ್ಪಷ್ಟಪಡಿಸಿರುವ ಸಚಿವ ಆರ್‌. ಅಶೋಕ್‌, ಇಲ್ಲಿಗೆ ಪ್ರತ್ಯೇಕ ಕಠಿನ ನಿಯಮ ರೂಪಿಸಲಾಗುವುದು ಎಂದಿದ್ದಾರೆ. ಕೋವಿಡ್‌ ತಜ್ಞರು ಕಠಿನ ನಿಯಮ ಜಾರಿ ಮಾಡುವಂತೆ ಸಲಹೆ ನೀಡಿದ್ದು, ಆ ಬಗ್ಗೆ ಸೋಮವಾರ ನಡೆಯುವ ಸಭೆಯಲ್ಲಿ ಚರ್ಚಿಸಿ ಸಿಎಂ ಗಮನಕ್ಕೆ ತಂದು ತೀರ್ಮಾನ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಲಾಕ್‌ಡೌನ್‌ನಿಂದ ಈಗಾಗಲೇ ತುಂಬಾ ಸಮಸ್ಯೆ ಆಗಿದೆ. ಲಾಕ್‌ಡೌನ್‌ ಬಿಟ್ಟು ಬಿಗಿ ಕ್ರಮ ಜಾರಿ ಮಾಡುವ ಕುರಿತು ಚಿಂತನೆ ಇದೆ.

ಸಂಭಾವ್ಯ ಕಠಿನ ನಿಯಮಗಳೇನು?
1. ನೈಟ್‌ ಕರ್ಫ್ಯೂ ಮುಂದುವರಿಕೆ
2. ವಾರಾಂತ್ಯ ಹಗಲಿನಲ್ಲೂ ಕರ್ಫ್ಯೂ ಜಾರಿ
3. ಹೊರ ಜಿಲ್ಲೆಗಳಿಂದ ಬರು ವವರಿಗೆ ತಪಾಸಣೆ ಕಡ್ಡಾಯ
4. ಹೊರ ರಾಜ್ಯಗಳಿಂದ ಬರು ವವರಿಗೆ ಕ್ವಾರಂಟೈನ್‌ ಕಡ್ಡಾಯ
5.ಪಾರ್ಕ್‌, ಜಿಮ್‌ಗಳಿಗೆ ಪೂರ್ಣ ನಿರ್ಬಂಧ
6. ಮಾಲ್‌, ಸಿನೆಮಾ ಮಂದಿರಗಳಿಗೂ ನಿರ್ಬಂಧ
7. ಆರಾಧನಾಲಯ ಪ್ರವೇಶಕ್ಕೆ ಸಮಯ ನಿಗದಿ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.