ನಾಗಪುರವನ್ನು ಹಾವಿನಪುರ ಎಂದ ಹರಿಪ್ರಸಾದ್ : ಪರಿಷತ್ತಿನಲ್ಲಿ ಗದ್ದಲ
Team Udayavani, Feb 16, 2022, 12:43 PM IST
ಬೆಂಗಳೂರು : ತಾಯಿ ಎದೆ ಹಾಲು ಕುಡಿದಿದ್ದರೆ ಐವತ್ತು ವರ್ಷಗಳ ಕಾಲ ಹಾವಿನಪುರದಲ್ಲಿ ಬಿಜೆಪಿಯವರು ಏಕೆ ತ್ರಿವರ್ಣ ಧ್ವಜ ಹಾರಿಸಲಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿರುವುದು ಪರಿಷತ್ ನಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ.
ನಾಗಪುರವನ್ನು ಹಾವಿನಪುರ ಎಂದು ಹರಿಪ್ರಸಾದ್ ವ್ಯಂಗ್ಯವಾಡಿದ್ದು ಬಿಜೆಪಿ ಶಾಸಕರನ್ನು ಕೆರಳಿಸಿತು. ಉಭಯ ಪಕ್ಷದ ಸದಸ್ಯರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿದರು.
ಇದರಿಂದ ಸಿಟ್ಟಿಗೆದ್ದ ಸಭಾಪತಿ ಹೊರಟ್ಟಿ ಸಭಾಪತಿ ಪೀಠಕ್ಕೆ ಕಿಮ್ಮತ್ತಿಲ್ಲವೇ ? ಇದೇನು ಮುನ್ಸಿಪಾಲಿಟಿನಾ ಎಂದು ಪ್ರಶ್ನಿಸಿದರು.
ಆದರೆ ಹರಿಪ್ರಸಾದ್ ಪದೇ ಪದೇ ಬಿಜೆಪಿಯವರನ್ನು ಕೆರಳಿಸುತ್ತಿರುವುದನ್ನು ಮುಂದುವರಿಸಿದರು.ತಾಯಿ ಎದೆ ಹಾಲು ಕುಡಿದಿದ್ದರೆ ಯಾಕೆ ೫೦ ವರ್ಷ ಹಾವಿನಪುರ ಕಚೇರಿಯಲ್ಲಿ ತ್ರಿವರ್ಣ ಧ್ವಜ ಹಾರಿಸಲಿಲ್ಲ ಎಂದರು.
ಇದಕ್ಕೆ ಮತ್ತೆ ಸಿಟ್ಟಿಗೆದ್ದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಹರಿಪ್ರಸಾದ್ ವಿರುದ್ಧ ಆರೋಪ ನಡೆಸಿದರು.ನಾಗಪುರವನ್ನ ಅವಹೇಳನಕಾರಿಯಾಗಿ ಹಾವಿನಪುರ ಅಂತಾ ಹೇಳಿದ್ದಾರೆ.ಇದು ಸರಿಯಲ್ಲ ಎಂದ ಕೋಟಾ ಶ್ರೀನಿವಾಸ್ ಪೂಜಾರಿ ಎಂದಾಗ ಉತ್ತರಿಸಿದ ಪ್ರಕಾಶ್ ರಾಥೋಡ್, ನಮ್ಮ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅವರು ಕನ್ನಡ ಅಭಿಮಾನಿ.ಅವರು ನಾಗಪುರವನ್ನ ಕನ್ನಡದಲ್ಲಿ ಹಾವಿನಪುರ ಎಂದಿದ್ದಾರೆ. ತಪ್ಪೇನಿದೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ