ಹಾರ್ಲೆ ಡೇವಿಡ್ಸನ್ ಬೈಕ್ ಬಳಸಿ ಹಣ ದೋಚಿದ್ದ ಕಳ್ಳನ ಸೆರೆ
Team Udayavani, Jan 8, 2021, 12:35 PM IST
ಬೆಳಗಾವಿ: ಬೆಲೆಬಾಳುವ ಹಾರ್ಲೆ-ಡೇವಿಡ್ಸನ್ ಬೈಕ್ ಬಳಸಿಕೊಂಡು ಮಹಾಂತೇಶ ನಗರದ ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯ ಕೀಲಿ ಮುರಿದು ಹಣ ದೋಚಿದ್ದ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ
ಯಶಸ್ವಿಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸುಭಾಷ ನಗರದ ಮುಜಫರ್ ಮಹಮ್ಮದ್ ಶೇಖ ಎಂಬಾತನನ್ನು ಬಂಧಿಸಲಾಗಿದೆ. 15ಲಕ್ಷ ರೂ. ಮೌಲ್ಯದ 301 ಗ್ರಾಂ. ಚಿನ್ನಾಭರಣ, ಒಂದು ಲಕ್ಷ ರೂ. ನಗದು ಹಣ ಹಾಗೂ 6.50 ಲಕ್ಷ ರೂ. ಮೌಲ್ಯದ ಹಾರ್ಲೆ ಡೇವಿಡಸನ್ ದ್ವಿಚಕ್ರ ವಾಹನ ಸೇರಿದಂತೆ ಒಟ್ಟು 22 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಡಿ. 30ರ ನಡುರಾತ್ರಿ ಬ್ಯಾಂಕಿಗೆ ಕನ್ನ ಹಾಕಿದ ಕಳ್ಳ ಸಂಸ್ಥೆಯ ಕೀಲಿ ಮುರಿದು ಒಳ ನುಗ್ಗಿದ್ದಾನೆ.
ಇದನ್ನೂ ಓದಿ:ಬೆಳ್ತಂಗಡಿ: ಕಲ್ಮಂಜ ಗ್ರಾಮದಲ್ಲಿ ಸತ್ತು ಬಿದ್ದ ಎರಡು ಹದ್ದುಗಳು, ಸ್ಥಳಕ್ಕೆ ಅಧಿಕಾರಿಗಳ ಭೇಟಿ
ಟ್ರೇಜರಿ ಕತ್ತರಿಸಿ ಅದರಲ್ಲಿ ಇಟ್ಟಿದ್ದ ಬಂಗಾರದ ಆಭರಣ ಹಾಗೂ ನಗದು ಹಣವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದನು. ಈ ಕುರಿತು ನರೇಂದ್ರ ಬಸವರಾಜ ಮಾಳಮಾರುತಿ ಠಾಣೆಯಲ್ಲಿ ದೂರು ನೀಡಿದ್ದರು. ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿ ಹಾಗೂ ಮಾಳಮಾರುತಿ ಇನ್ಸಪೆಕ್ಟರ್ ಸುನೀಲ ಪಾಟೀಲ ನೇತೃತ್ವದಲ್ಲಿ ಪೊಲೀಸರು ಕಳ್ಳನ ಬಂಧನಕ್ಕೆ ಜಾಲ ಬೀಸಿದ್ದರು. ಬೆರಳಚ್ಚು ಪಿಐ ಮಹಾದೇವ ಕುಂಬಾರ, ಮಾಳಮಾರುತಿ ಪಿಎಸ್ಐ ಹೊನ್ನಪ್ಪ ತಳವಾರ, ಎಎಸ್ಐ ಎ.ಆರ್. ದುಂಡಗಿ, ಸಿಬ್ಬಂದಿಗಳಾದ ಎಂ.ಜೆ. ಕುರೇರ, ಕೆ.ಬಿ. ಗೌರಾಣಿ, ಜೆ.ಎನ್. ಭೋಸಲೆ, ಎಲ್. ಎಂ. ಮುಶಾಪುರೆ, ಎಸ್.ಎಂ. ಗುಡದೆ„ಗೋಳ, ಮಂಜುನಾಥ ಮೇಲಸರ್ಜಿ, ಎಂ.ಬಿ. ಅಡವಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ