ಹರ್ಷ ಚಿತಾಭಸ್ಮ ರಥಯಾತ್ರೆಗೆ ತಡೆ: ಸರಕಾರದ ವಿರುದ್ಧ ಕಾಳಿ ಸ್ವಾಮಿ ಆಕ್ರೋಶ
Team Udayavani, Feb 24, 2022, 1:00 PM IST
ಶ್ರೀರಂಗಪಟ್ಟಣ : ಶಿವಮೊಗ್ಗದಲ್ಲಿ ಹತ್ಯೆಯಾಗಿದ್ದ ಬಜರಂಗದಳದ ಕಾರ್ಯಕರ್ತ ಹರ್ಷ ಚಿತಾಭಸ್ಮ ರಥಯಾತ್ರೆಗೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿರುವುದಕ್ಕೆ ಗುರುವಾರ ಕಾಳಿ ಮಠದ ಋಷಿಕುಮಾರ ಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.
ಶಿವಮೊಗ್ಗದಿಂದ ಶೀರಂಗಪಟ್ಟಣದವರೆಗೆ ಚಿತಾಭಸ್ಮದೊಂದಿಗೆ ಹೊರಟಿದ್ದ ಕಾಳಿಸ್ವಾಮಿ ಅವರಿಗೆ ರಥಯಾತ್ರೆ ನಡೆಸಲು ಕಾನೂನು ಸುವ್ಯವಸ್ಥೆ ಕಾರಣಕ್ಕಾಗಿ ಅವಕಾಶ ನೀಡಲಿಲ್ಲ.
ರಾಜ್ಯಸರ್ಕಾರ ರಥಯಾತ್ರೆಗೆ ಅವಕಾಶ ನೀಡಿಲ್ಲ. ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ.ಮುಖ್ಯಮಂತ್ರಿಗಳು ಮತ್ತು ಗೃಹಸಚಿವರಿಗೆ ನಮಗೆ ರಕ್ಷಣೆ ನೀಡಲು ಸಾಧ್ಯವಾಗುತ್ತಿಲ್ಲ.ಹಿಂದೂಗಳ ಅಸ್ಥಿಗೆ ಭದ್ರತೆ ನೀಡದ ಈ ಸರ್ಕಾರ ಹಿಂದುಗಳ ಅಸ್ತಿತ್ವ ಕಾಯಲ್ಲ.ಸಂತ್ರಸ್ತ ಕುಟುಂಬಕ್ಕೆ ಕೇವಲ ಹಣದ ಸಹಾಯ ಜನಸಾಮಾನ್ಯರನ್ನು ಮರಳು ಮಾಡುವ ತಂತ್ರವಷ್ಟೆ.ಇಡೀ ರಾತ್ರಿ ಪೊಲೀಸರ ಬೆಂಗಾವಲಿನಲ್ಲಿ ನನ್ನನ್ನು ನಾಗಮಂಗಲದ ಪ್ರವಾಸಿ ಮಂದಿರಕ್ಕೆ ಕರೆತರಲಾಗಿದೆ ಎಂದು ಕಾಳಿ ಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.
ಕುಟುಂಬದ ಸದಸ್ಯರು ಹಸ್ತಾಂತರಿಸಿದ ಬಳಿಕ ಮಂಡ್ಯ ಜಿಲ್ಲೆ ನಾಗಮಂಗಲದ ಪ್ರವಾಸಿ ಮಂದಿರದಲ್ಲಿ ಹರ್ಷನ ಚಿತಾಭಸ್ಮಕ್ಕೆ ಕಾಳಿಸ್ವಾಮಿ ಪೂಜೆ ಸಲ್ಲಿಸಿ ಕಾವೇರಿ ನದಿಯಲ್ಲಿ ಧಾರ್ಮಿಕ ವಿಧಿ ವಿಧಾನ ಗಳೊಂದಿಗೆ ವಿಸರ್ಜನೆ ಮಾಡಲಾಗಿದೆ.
ನಾನು ಇಲ್ಲಿಯೇ ಉಪವಾಸ ಸತ್ಯಗ್ರಹ ಮಾಡುತ್ತೇನೆ ಎಂದು ಹಠ ಹಿಡಿದಿದ್ದ ಕಾಳಿ ಸ್ವಾಮೀಜಿ ಅವರಿಗೆ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಅವರು ದೂರವಾಣಿ ಮೂಲಕ ಮನವೊಲಿಸಿದರು. ಆ ಬಳಿಕವೇ ಕಾಳಿಸ್ವಾಮಿ ಶ್ರೀರಂಗಪಟ್ಟಣಕ್ಕೆ ತೆರಳಿದರು.
ಪ್ರಮೋದ್ ಮುತಾಲಿಕ್ ಭಾಗಿ
ಪಶ್ಚಿಮವಾಹಿನಿಯಲ್ಲಿ ನಡೆದ ಅಸ್ಥಿ ವಿಸರ್ಜನೆ, ಸದ್ಗತಿ ಪೂಜಾ ಕಾರ್ಯದಲ್ಲಿ ಪ್ರಮೋದ್ ಮುತಾಲಿಕ್ ಭಾಗಿಯಾದರು.ಹರ್ಷ ಅಸ್ಥಿಯನ್ನ ಕಾಳಿ ಸ್ವಾಮಿ. ತಲೆ ಮೇಲೆ ಹೊತ್ತು ತಂದರು. ಈ ವೇಳೆ ಕಾವೇರಿ ನದಿಯಲ್ಲಿ ಮುತಾಲಿಕ್ ಸ್ನಾನ ಮಾಡಿದರು. ಪಶ್ಚಿಮವಾಹಿನಿಯ ಅರಳಿ ಕಟ್ಟೆ ಬಳಿ ಅಸ್ಥಿ ವಿಸರ್ಜನಾ ಕಾರ್ಯ ನಡೆಸಲಾಯಿತು.
ಪ್ರಧಾನ ಅರ್ಚಕರಾದ ಸಂದೀಪ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನಡೆಸಲಾಯಿತು. ದರ್ಮತಿ ನಾರಾಯಣ ಹೋಮ, ಅಸ್ಥಿ ಸಂಚಯನ, ವಿಸರ್ಜನೆ, ಪಂಚಾಮೃತ ಅಭಿಷೇಕ, ದಶದಾನ, ಪುಣ್ಯಃ ಸೇರಿದಂತೆ ಹಲವು ಪೂಜಾ ವಿಧಿ ವಿಧಾನಗಳನ್ನು ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ