ರಾಮ್ ರಹೀಮ್ ಸಿಂಗ್ ಗೆ ಪೆರೋಲ್: ಸಮರ್ಥಿಸಿಕೊಂಡ ಹರಿಯಾಣ ಸರಕಾರ
Team Udayavani, Mar 1, 2023, 7:12 PM IST
ಚಂಡೀಗಢ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ ನೀಡಲಾದ ಪೆರೋಲನ್ನು ಸಮರ್ಥಿಸಿಕೊಂಡ ಹರಿಯಾಣ ಸರಕಾರ, ಅವರು ಕಠಿಣ ಖೈದಿ ಅಡಿಯಲ್ಲಿ ಬರುವುದಿಲ್ಲ, ಸರಣಿ ಕೊಲೆಗಾರ ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದ್ದಾರೆ.
ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಮುಖ್ಯಸ್ಥನಿಗೆ ಜನವರಿ 20 ರಂದು 40 ದಿನಗಳ ಪೆರೋಲ್ ನೀಡಲಾಗಿತ್ತು. ಎರಡು ಕೊಲೆ ಪ್ರಕರಣಗಳಲ್ಲಿ ಆತನಿಗೆ ಶಿಕ್ಷೆಯಾಗಿದೆ.
ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ (SGPC) ಇತ್ತೀಚೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನಲ್ಲಿ ಪೆರೋಲ್ ಆದೇಶವನ್ನು ಪ್ರಶ್ನಿಸಿದೆ. ಸಿರ್ಸಾ ಮೂಲದ ಪಂಥದ ಮುಖ್ಯಸ್ಥ ಶಿಕ್ಷೆ ಅನುಭವಿಸುತ್ತಿರುವ ರೋಹ್ಟಕ್ನ ಸುನಾರಿಯಾ ಜೈಲಿನ ಸೂಪರಿಂಟೆಂಡೆಂಟ್ ಮೂಲಕ ನೀಡಿದ ಉತ್ತರದಲ್ಲಿ, ರಾಜ್ಯ ಸರಕಾರವು ಪೆರೋಲ್ ನೀಡುವ ಮೂಲಕ ಯಾವುದೇ ಅಕ್ರಮ ಎಸಗಿಲ್ಲ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!