ಕ್ರಿಮಿನಲ್ ಗಳು ಯಾವತ್ತಾದರು ನಾನು ಕ್ರಿಮಿನಲ್ ಅಂತ ಹೇಳ್ತಾರಾ? ಸೋನಿಯಾಗೆ ನಡ್ಡಾ ತಿರುಗೇಟು
ಈ ಇಬ್ಬರು ಮುಖಂಡರ ಹೇಳಿಕೆಯನ್ನು ಜಾರಿ ನಿರ್ದೇಶನಾಲಯ ಪಿಎಂಎಲ್ ಎ ಕಾಯ್ದೆಯಡಿ ದಾಖಲು ಮಾಡಿಕೊಂಡಿತ್ತು.
Team Udayavani, Jun 1, 2022, 4:46 PM IST
ನವದೆಹಲಿ: ಯಾವತ್ತಾದರು ಕ್ರಿಮಿನಲ್ ಗಳು ತಮ್ಮನ್ನು ತಾವು ಕ್ರಿಮಿನಲ್ ಎಂದು ಹೇಳಿಕೊಂಡಿದ್ದನ್ನು ನೋಡಿದ್ದೀರಾ? ಇದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬುಧವಾರ (ಜೂನ್ 01) ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿರುವುದಕ್ಕೆ ನೀಡಿದ ಪ್ರತಿಕ್ರಿಯೆಯಾಗಿದೆ.
ಇದನ್ನೂ ಓದಿ:ಬಂಟ್ವಾಳ : ಭೀಕರ ರಸ್ತೆ ಅಪಘಾತ ; ಮಡಂತ್ಯಾರಿನ ಕಾಟರಿಂಗ್ ಉದ್ಯಮಿಯ ಸ್ಥಿತಿ ಗಂಭೀರ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದ ನಂತರ, ಇಂತಹ ತಂತ್ರಗಾರಿಕೆಗೆ ಬಗ್ಗುವುದಿಲ್ಲ ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೀಡಿರುವ ಪ್ರತಿಕ್ರಿಯೆಗೆ ಬಿಜೆಪಿಯ ಜೆಪಿ ನಡ್ಡಾ ಈ ರೀತಿ ತಿರುಗೇಟು ನೀಡಿದ್ದಾರೆ.
“ಯಾವತ್ತಾದರೂ ಕ್ರಿಮಿನಲ್ ಗಳು ನಾನು ಕ್ರಿಮಿನಲ್ ಎಂದು ಹೇಳಿಕೊಂಡಿರುವುದನ್ನು ನೋಡಿದ್ದೀರಾ? ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸಾಕ್ಷ್ಯಿ ದೊರಕಿದೆ. ಆರೋಪ ಪಟ್ಟಿ ಕೂಡಾ ಸಲ್ಲಿಸಲಾಗಿತ್ತು. ಆದರೆ ನೀವು ಕೋರ್ಟ್ ಮೊರೆ ಹೋಗಿ ಪ್ರಕರಣ ವಜಾಗೊಳಿಸುವಂತೆ ಮನವಿ ಮಾಡಿಕೊಂಡಿದ್ದೀರಿ, ಆದರೆ ನೀವು ಬೇಲ್ ಮೇಲೆ ಹೊರಗಿದ್ದೀರಿ (ಸೋನಿಯಾ, ರಾಹುಲ್). ಅಂದರೆ ಇದರರ್ಥ ನೀವು ದೋಷಿ ಎಂಬುದಾಗಿದೆ ಎಂದು ಜೆಪಿ ನಡ್ಡಾ ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಮತ್ತು ಕಾಂಗ್ರೆಸ್ ಪಕ್ಷದ ಖಜಾಂಚಿ ಪವನ್ ಬನ್ಸಾಲ್ ಅವರನ್ನು ಕಳೆದ ವರ್ಷ ಏಪ್ರಿಲ್ ನಲ್ಲಿ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.
ಈ ಇಬ್ಬರು ಮುಖಂಡರ ಹೇಳಿಕೆಯನ್ನು ಜಾರಿ ನಿರ್ದೇಶನಾಲಯ ಪಿಎಂಎಲ್ ಎ ಕಾಯ್ದೆಯಡಿ ದಾಖಲು ಮಾಡಿಕೊಂಡಿತ್ತು. ನ್ಯಾಷನಲ್ ಹೆರಾಲ್ಡ್ ಅನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಟಿಸಿತ್ತು. ಎಜೆಎಲ್ ಯಂಗ್ ಇಂಡಿಯನ್ ಪ್ರೈ ಲಿಮಿಟೆಡ್ (ವೈಐಎಲ್) ಒಡೆತನದಲ್ಲಿತ್ತು. ಮಲ್ಲಿಕಾರ್ಜುನ್ ಖರ್ಗೆ ಯಂಗ್ ಇಂಡಿಯನ್ ಲಿಮಿಟೆಡ್ ಗೆ ಸಿಇಒ ಆಗಿದ್ದು, ಬನ್ಸಾಲ್ ಅಸೋಸಿಯೇಟ್ ಜರ್ನಲ್ಸ್ ನ ಆಡಳಿತ ನಿರ್ದೇಶಕರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ