ಮೀಸಲಾತಿ ವಿಚಾರದಲ್ಲಿ ಮಾತನಾಡುವುದಿಲ್ಲ: ಎಚ್.ಡಿ.ದೇವೇಗೌಡ
Team Udayavani, Feb 22, 2021, 7:43 PM IST
ಮಂಡ್ಯ: ನನಗೆ ಮೀಸಲಾತಿ ವಿಷಯ ಸಂಪೂರ್ಣವಾಗಿ ಗೊತ್ತಿದೆ. ಮೀಸಲಾತಿ ವಿಚಾರದಲ್ಲಿ ಹೋರಾಟ ನಡೆಸುತ್ತಿರುವ ಯಾವ ಸಮಾಜದ ಬಗ್ಗೆಯೂ ನಾನು ಮಾತನಾಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ನಗರದ ಹೊರವಲಯದಲ್ಲಿ ನಿರ್ಮಾಣವಾಗಿರುವ ಅಮರಾವತಿ ಹೊಟೇಲ್ ಉದ್ಘಾಟನಾ ಸಮಾರಂಭದಲ್ಲಿ ಸೋಮವಾರ ಭಾಗವಹಿಸಿ ಮಾತನಾಡಿದರು.
ಸದ್ಯಕ್ಕೆ ಮೀಸಲಾತಿ ಬಗ್ಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸಲ್ಲ. ಎಲ್ಲ ಪಂಚಮಶಾಲಿಗಳು, ನಾಯಕ, ಗೊಲ್ಲರು, ಕ್ಷತ್ರಿಯ ಸಮಾಜ ಸೇರಿದಂತೆ ಇತರೆ ಸಮಾಜದವರು ಮೀಸಲಾತಿ ವಿಚಾರವಾಗಿ ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ, ಪ್ರಸ್ತುತ ಯಾವ ಸಮಾಜದ ಬಗ್ಗೆಯೂ ನಾನು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನನಗೆ ಮೀಸಲಾತಿ ವಿಷಯ ಸಂಪೂರ್ಣ ಗೊತ್ತಿದೆ. ಆದರೆ, ಈಗ ಮಾತನಾಡುವುದಿಲ್ಲ. ಒಕ್ಕಲಿಗರ ಮೀಸಲಾತಿಯನ್ನು ಕಡಿತಗೊಳಿಸಿದ್ದು ನಾನೆ ಎಂದು ಎ.ಮಂಜು ಆರೋಪ ಮಾಡುತ್ತಿದ್ದಾರೆ. ಆದರೆ, ಈ ಆರೋಪ ಮಾಡಿರುವುದು ಸಂತೋಷ. ನನ್ನ ಕಾಲ ಆಗೋಗಿದೆ. ಈಗ ಅದನ್ನು ಅವರೇ ಸರಿಪಡಿಸಲಿ ಎಂದು ಟಾಂಗ್ ನೀಡಿದರು.
ಇದನ್ನೂ ಓದಿ:ತಮಿಳುನಾಡಿನ ಕಾವೇರಿ – ವೈಗೈ ನದಿ ಜೋಡಣೆ ಯೋಜನೆಗೆ ವಿರೋಧ : ಡಿಸಿಎಂ ಅಶ್ವಥ್ನಾರಾಯಣ
ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ