1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಪಟೇಲ್ ಸಿ.ಎಂ. ಆಗದಂತೆ ತಡೆಯುವ ಹುನ್ನಾರಕ್ಕೆ ನಾನೇ ಅಡ್ಡಿಯಾದೆ

Team Udayavani, Oct 26, 2021, 7:41 PM IST

hdk

ವಿಜಯಪುರ : ಒಂದು ಬಾರಿ ಸಿದ್ದರಾಮಯ್ಯ ಸಿಎಂ ಆಗದಂತೆ ನಾನೆ ತಡೆದೆ. ದೇವೇಗೌಡರು ಪ್ರಧಾನಿಯಾದ ಬಳಿಕ ಅಂದು ಸಿದ್ದರಾಮಯ್ಯ ಒಂದು ಸಭೆ ಮಾಡಿ ಜೆ.ಹೆಚ್.ಪಟೇಲ್ ಅವರನ್ನು ರಾಜ್ಯಪಾಲರಾಗಿ ರಾಜಕೀಯದಿಂದ ದೂರ ಕಳಿಸುವ ಹುನ್ನಾರ ನಡೆಸಿದ್ದರು. ಆದರೆ ಆಗ ಮಧ್ಯ ಪ್ರವೇಶಿಸಿದ ನಾನು ಅದನ್ನು ತಡೆದೆ. ಇದನ್ನು ವಿಧಾನಸಭೆಯಲ್ಲೇ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜಕೀಯದ ಹಳೆಯ ಇತಿಹಾಸ ಕೆದಕಿದರು.

ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 1994 ರಲ್ಲಿ ಜನತಾದಳ ಅಧಿಕಾರಕ್ಕೆ ಬರುವಲ್ಲಿ ಸಿದ್ದರಾಮಯ್ಯ ಅವರಿಗಿಂತ ನನ್ನ ಕೊಡುಗೆಯೇ ಹೆಚ್ಚು. ನಾನು ರಾಜಕಾರಣದಿಂದ ದೂರ ಇದ್ದರೂ ಸಹ ನನ್ನದೇ ಆದ ರೀತಿಯಲ್ಲಿ ಕೆಲಸ ಮಾಡಿದ್ದೆ. ಹೀಗಾಗಿ ಅಂದು ಜನತಾದಳ ಅಧಿಕಾರಕ್ಕೆ ತರುವಲ್ಲಿ ಸಿದ್ದರಾಮಯ್ಯಗಿಂತ ನನ್ನ ಕೊಡುಗೆ ಹೆಚ್ಚಿದೆ ಎಂದು ತಮ್ಮನ್ನು ಸಮರ್ಥಿಸಿಕೊಂಡರು.

ಬಳಿಕ ಸಿದ್ದರಾಮಯ್ಯ ಅವರಂಥವರು ಬೆನ್ನಿಗೆ ಚೂರಿಹಾಕಿ, ನಮಗೆ ಟೋಪಿ ಹಾಕಿ ಹೋದರೂ ಜೆಡಿಎಸ್ ಉಳಿದಿದ್ದು ನಾನು ಸಿಎಂ ಆಗಿ ಮಾಡಿರೋ ಕೆಲಸಗಳಿಂದ. ಕಾಂಗ್ರೆಸ್ ಜೊತೆಗಿನ ನನ್ನ ಮೈತ್ರಿ ಸರ್ಕಾರ ಪತನವಾದಾಗ ನಾನು ಅಮೆರಿಕಾದಲ್ಲಿದ್ದೆ. ಜಾರ್ಜ್ ಹಾಗೂ ಭೈರತಿ ಬಸವರಾಜ್ ನಡುವಿನ ವೈಮನಸ್ಸಿನ ಜಗಳ ಬಗೆಹರಿಸಲು ಸಾಧ್ಯವಿದ್ದರೂ ಸಿದ್ಧರಾಮಯ್ಯ ಈ ಬಗ್ಗೆ ಮನಸ್ಸು ಮಾಡದೇ ನನ್ನ ಸರ್ಕಾರದ ಪತನಕ್ಕೆ ಕಾರಣವಾದರು ಎಂದರು ಆರೋಪಿಸಿದರು.

ಇದನ್ನೂ ಓದಿ :ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಶಾಸಕರ ಅಸಮಾಧಾನ ತನೀಸಲು ಸಂಪುಟ ಸಂಪೂರ್ಣ ಪುನರ್ ರಚನೆ ಕುರಿತು ನಾನು ಪ್ರಸ್ತಾಪಿಸಿದಾಗ ಇದೇ ಸಿದ್ದರಾಮಯ್ಯ ಟವಲ್ ಕೊಡವಿ ಎದ್ದು ಹೋದರು. ಇಂದು ಸಿದ್ದರಾಮಯ್ಯ ನನ್ನ ರಾಜಕೀಯ ಗುರುಗಳು ಎನ್ನುವ ವ್ಯಕ್ತಿಯೇ ಅಂದು ನನಗೆ ಫೆÇೀನ್ ಮಾಡಿ ಗೋಪಲಯ್ಯನ ನಾನೇ ಕಳುಹಿಸಿದ್ದೇನೆ ಅಂತ ತೊಂದರೆ ನೀಡಿದರು ಎಂದು ಹೆಸರು ಹೇಳದೇ ಜಮೀರ ಅಹ್ಮದ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ದೇವೇಗೌಡರು ಮುಖ್ಯಮಂತ್ರಿ ಆಗುವ ವೇಳೆ ಸಿದ್ದರಾಮಯ್ಯ ಜನತಾದಳದ ಕಚೇರಿಗೆ ಬಂದಿರಲಿಲ್ಲ. ಅಂದು ಅವರು ಯಾವುದೇ ಖಾಸಗಿ ಹೊಟೇಲ್ ನಲ್ಲಿ ಹೋಗಿ ಕುಳಿತಿದ್ರು. ದೇವೇಗೌಡರ ನಾನೇ ಸಿಎಂ ಮಾಡಿದ್ದು ಅಂತ ಸಿದ್ದರಾಮಯ್ಯ ಹೇಳೋದಾದರೆ ದೇವೇಗೌಡರು ಪ್ರಧಾನಿಯಾಗಿ ಹೋದಾಗ ಇವರೇಕೆ ಸಿಎಂ ಆಗಲು ಸಾಧ್ಯವಾಗಲಿಲ್ಲ. ಅವರ ಜೊತೆ ಎಷ್ಟು ಶಾಸಕರಿದ್ರು ನಾನು ಅಂದು ಮಾಡಿದ ಪ್ರಯತ್ನದಿಂದ ಪಕ್ಷ ಅಧಿಕಾರಕ್ಕೆ ಬಂತು. ದೇವೇಗೌಡರ ಮುಖ್ಯಮಂತ್ರಿ ಮಾಡಿದ್ದೇ ನಾವು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.